Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

’ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ’

- Advertisement -
- Advertisement -

“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌.

ಖಾಸಗಿ ಯೂಟ್ಯೂಬ್ ಚಾನೆಲ್‌ಗೆ ‘ದಿ ಮೋಜೋ ಸ್ಟೋರಿ’ ಯ ಕಾರ್ಯಕ್ರಮವಾದ ‘ದಿ ಗ್ಲೋಬಲ್ ಟೌನ್ ಹಾಲ್’ ನಲ್ಲಿ ನೇರ ಸಂದರ್ಶನ ನೀಡುವಾಗ, 2017ರ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ತಾವು ಅನುಭವಿಸಿದ ಹಿಂಸೆ, ಅವಮಾನ, ಆಘಾತ, ಮಾನಸಿಕ ಕಿರುಕುಳಗಳ ಬಗ್ಗೆ 35 ವರ್ಷದ ನಟಿ ಭಾವನಾ ಮುಕ್ತವಾಗಿ ಮಾತನಾಡಿದ್ದಾರೆ.

ತಾನು ತನ್ನ ಘನತೆಯನ್ನು ಮರಳಿ ಪಡೆಯಲು ಬಯಸುತ್ತೇನೆ ಎಂದು ಹೇಳಿರುವ ಅವರು, ತನ್ನ ಪತಿ, ಕುಟುಂಬ ಸದಸ್ಯರು ಮತ್ತು ಸ್ನೇಹಿತರು, ತನಗಾಗಿ ಪ್ರತಿಭಟನೆಗಳನ್ನು ಮಾಡಿದ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.  ತನ್ನ ಸಂಪೂರ್ಣ ಇಚ್ಛಾಶಕ್ತಿಯೇ ತನ್ನನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದಿದ್ದಾರೆ.

ಈ ಘಟನೆಯಿಂದಾಗಿ “ನನ್ನ ಘನತೆಯನ್ನು ಒಂದು ಮಿಲಿಯನ್ ತುಂಡುಗಳಾಗಿ ಮಾಡಲಾಗಿದೆ. ಕೆಲವೊಮ್ಮೆ ತಾನು ಅನುಭವಿಸಿದ್ದೆಲ್ಲ ದುಃಸ್ವಪ್ನ ಎಂದು ಭಾವಿಸಿದ ದಿನಗಳೂ ಇದ್ದವು. ಆದರೆ ಅದು ಹಾಗಲ್ಲ ಅದೆಲ್ಲವೂ ನಿಜ” ಎಂದಿದ್ದಾರೆ.

ಇದನ್ನೂ ಓದಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಿರೂಪಕಿ ಬರ್ಖಾ ದತ್ ಜೊತೆಗೆ ಮಾತನಾಡಿರುವ ನಟಿ, “ನಾನು ಇನ್ನೂ ಹೆದರುತ್ತಿದ್ದೇನೆ, ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ. ಕೆಲವೊಮ್ಮೆ ನಾನು ನಿಜವಾಗಿಯೂ ದುಃಖಿತಳಾಗಿದ್ದೇನೆ, ಕೋಪಗೊಂಡಿದ್ದೇನೆ. ನನ್ನ ಸುತ್ತಲೂ ಬೆಂಬಲ ನೀಡುವವರು ಇದ್ದರೂ ಕೂಡ ನಾನು ಒಂಟಿತನವನ್ನು ಅನುಭವಿಸಿದೆ. ನಾನು 2020 ರಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ 15 ದಿನಗಳವರೆಗೆ ನ್ಯಾಯಾಲಯದಲ್ಲಿದ್ದೆ. ನ್ಯಾಯಾಲಯದಲ್ಲಿ ಸಮಯ ಕಳೆಯುವ ಪ್ರತಿ ಸೆಕೆಂಡಿಗೆ ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದೆ. ಏಳು ಮಂದಿ ವಕೀಲರು ನನ್ನನ್ನು ಪ್ರಶ್ನಿಸಲು ಪ್ರಯತ್ನಿಸುತ್ತಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಆ ಘಟನೆಯನ್ನು ನೆನಪಿಸುತ್ತಿದ್ದರು. ಆಗ ನಾನು ಏಕಾಂಗಿಯಾಗಿದ್ದೇನೆ ಎಂದು ನನಗೆ ಅನಿಸಿತ್ತು” ಎಂದು ನಟಿ ಭಾವನಾ ಭಾವುಕರಾಗಿದ್ದಾರೆ.

ಆಘಾತಕಾರಿ ಘಟನೆಯ ನಂತರ ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ತನ್ನ ವಿರುದ್ಧ ತಮ್ಮ ಟೀಕೆಗಳನ್ನು ಹೊರಹಾಕಿದ್ದನ್ನು ಭಾವನಾ ನೆನಪಿಸಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರಗಳಲ್ಲಿ ಪ್ರಧಾನವಾಗಿ ನಟಿಸುತ್ತಿದ್ದ ತಾನು ಈ ಆಘಾತದಿಂದಾಗಿ ತನ್ನ ವೃತ್ತಿಜೀವನದಿಂದ ಸುದೀರ್ಘ ವಿರಾಮವನ್ನು ತೆಗೆದುಕೊಂಡಿದ್ದು, ಆಶಿಕ್ ಅಬು, ಪೃಥ್ವಿರಾಜ್, ಜಯಸೂರ್ಯ ಮತ್ತು ಶಾಜಿ ಕೈಲಾಸ್ ಅವರ ಹಲವು ಸಿನಿಮಾಗಳ ಆಫರ್‌ಗಳನ್ನು ನಿರಾಕರಿಸಿದ ನಿದರ್ಶನಗಳಿವೆ ಎಂದು ಹೇಳಿದ್ದಾರೆ.

“ಮಲಯಾಳಂ ಬಿಟ್ಟು ಈಗ ನಾನು ಬೇರೆ ಚಿತ್ರರಂಗದಲ್ಲಿ ಕೆಲಸ ಮಾಡಲು ಆರಂಭಿಸಿದ್ದೇನೆ. ಘಟನೆಯಿಂದಾಗಿ ನಾನು ಬೇರೆ ಯಾವುದಾದರೂ ದೇಶದಲ್ಲಿ ನೆಲೆಯೂರಲು ಮತ್ತು ಹೊಸದಾಗಿ ಪ್ರಾರಂಭಿಸಲು ಬಯಸಿದ ದಿನಗಳಿವೆ. ಆಘಾತಕಾರಿ ಘಟನೆಯಿಂದ ಹೊರಬಂದು ಮೊದಲು ಸಾಮಾನ್ಯ ಸ್ಥಿತಿಗೆ ಬರಬೇಕು. ನಾನು ಅಂತಹ ಸ್ಥಿತಿಯಿಂದ ಹೊರಗೆ ಬರಲು ಐದು ವರ್ಷ ಬೇಕಾಯಿತು. ಪ್ರಪಂಚದಾದ್ಯಂತ ಅದೇ ಹಂತದಲ್ಲಿ ಇತರ ಮಹಿಳೆಯರು ಇದ್ದಾರೆ. ಅವರ ಅವಸ್ಥೆಯ ಬಗ್ಗೆ ನನಗೆ ತುಂಬಾ ಬೇಸರವಾಗುತ್ತದೆ. ನಾನು ಅವರಿಗೆ ತಿಳಿಸಲು ಬಯಸುವುದೇನೆಂದರೆ ಫಲಿತಾಂಶ ಏನಾಗಬಹುದು ಎಂಬುದರ ಕುರಿತು ಚಿಂತಿಸದೆ ನಾನು ಗಟ್ಟಿಯಾಗಿ ಹೋರಾಡುತ್ತೇನೆ ”ಎಂದು ನಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದರು. ಮಲಯಾಳಂ, ಬಾಲಿವುಡ್ ಚಿತ್ರರಂಗದ ಹಲವು ತಾರೆಯರು ನಟಿಗೆ ಬೆಂಬಲ ಸೂಚಿಸಿದ್ದರು.

 ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...