Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

’ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ’

- Advertisement -
- Advertisement -

“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌.

ಖಾಸಗಿ ಯೂಟ್ಯೂಬ್ ಚಾನೆಲ್‌ಗೆ ‘ದಿ ಮೋಜೋ ಸ್ಟೋರಿ’ ಯ ಕಾರ್ಯಕ್ರಮವಾದ ‘ದಿ ಗ್ಲೋಬಲ್ ಟೌನ್ ಹಾಲ್’ ನಲ್ಲಿ ನೇರ ಸಂದರ್ಶನ ನೀಡುವಾಗ, 2017ರ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ತಾವು ಅನುಭವಿಸಿದ ಹಿಂಸೆ, ಅವಮಾನ, ಆಘಾತ, ಮಾನಸಿಕ ಕಿರುಕುಳಗಳ ಬಗ್ಗೆ 35 ವರ್ಷದ ನಟಿ ಭಾವನಾ ಮುಕ್ತವಾಗಿ ಮಾತನಾಡಿದ್ದಾರೆ.

ತಾನು ತನ್ನ ಘನತೆಯನ್ನು ಮರಳಿ ಪಡೆಯಲು ಬಯಸುತ್ತೇನೆ ಎಂದು ಹೇಳಿರುವ ಅವರು, ತನ್ನ ಪತಿ, ಕುಟುಂಬ ಸದಸ್ಯರು ಮತ್ತು ಸ್ನೇಹಿತರು, ತನಗಾಗಿ ಪ್ರತಿಭಟನೆಗಳನ್ನು ಮಾಡಿದ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.  ತನ್ನ ಸಂಪೂರ್ಣ ಇಚ್ಛಾಶಕ್ತಿಯೇ ತನ್ನನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದಿದ್ದಾರೆ.

ಈ ಘಟನೆಯಿಂದಾಗಿ “ನನ್ನ ಘನತೆಯನ್ನು ಒಂದು ಮಿಲಿಯನ್ ತುಂಡುಗಳಾಗಿ ಮಾಡಲಾಗಿದೆ. ಕೆಲವೊಮ್ಮೆ ತಾನು ಅನುಭವಿಸಿದ್ದೆಲ್ಲ ದುಃಸ್ವಪ್ನ ಎಂದು ಭಾವಿಸಿದ ದಿನಗಳೂ ಇದ್ದವು. ಆದರೆ ಅದು ಹಾಗಲ್ಲ ಅದೆಲ್ಲವೂ ನಿಜ” ಎಂದಿದ್ದಾರೆ.

ಇದನ್ನೂ ಓದಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಿರೂಪಕಿ ಬರ್ಖಾ ದತ್ ಜೊತೆಗೆ ಮಾತನಾಡಿರುವ ನಟಿ, “ನಾನು ಇನ್ನೂ ಹೆದರುತ್ತಿದ್ದೇನೆ, ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ. ಕೆಲವೊಮ್ಮೆ ನಾನು ನಿಜವಾಗಿಯೂ ದುಃಖಿತಳಾಗಿದ್ದೇನೆ, ಕೋಪಗೊಂಡಿದ್ದೇನೆ. ನನ್ನ ಸುತ್ತಲೂ ಬೆಂಬಲ ನೀಡುವವರು ಇದ್ದರೂ ಕೂಡ ನಾನು ಒಂಟಿತನವನ್ನು ಅನುಭವಿಸಿದೆ. ನಾನು 2020 ರಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ 15 ದಿನಗಳವರೆಗೆ ನ್ಯಾಯಾಲಯದಲ್ಲಿದ್ದೆ. ನ್ಯಾಯಾಲಯದಲ್ಲಿ ಸಮಯ ಕಳೆಯುವ ಪ್ರತಿ ಸೆಕೆಂಡಿಗೆ ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದೆ. ಏಳು ಮಂದಿ ವಕೀಲರು ನನ್ನನ್ನು ಪ್ರಶ್ನಿಸಲು ಪ್ರಯತ್ನಿಸುತ್ತಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಆ ಘಟನೆಯನ್ನು ನೆನಪಿಸುತ್ತಿದ್ದರು. ಆಗ ನಾನು ಏಕಾಂಗಿಯಾಗಿದ್ದೇನೆ ಎಂದು ನನಗೆ ಅನಿಸಿತ್ತು” ಎಂದು ನಟಿ ಭಾವನಾ ಭಾವುಕರಾಗಿದ್ದಾರೆ.

ಆಘಾತಕಾರಿ ಘಟನೆಯ ನಂತರ ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ತನ್ನ ವಿರುದ್ಧ ತಮ್ಮ ಟೀಕೆಗಳನ್ನು ಹೊರಹಾಕಿದ್ದನ್ನು ಭಾವನಾ ನೆನಪಿಸಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರಗಳಲ್ಲಿ ಪ್ರಧಾನವಾಗಿ ನಟಿಸುತ್ತಿದ್ದ ತಾನು ಈ ಆಘಾತದಿಂದಾಗಿ ತನ್ನ ವೃತ್ತಿಜೀವನದಿಂದ ಸುದೀರ್ಘ ವಿರಾಮವನ್ನು ತೆಗೆದುಕೊಂಡಿದ್ದು, ಆಶಿಕ್ ಅಬು, ಪೃಥ್ವಿರಾಜ್, ಜಯಸೂರ್ಯ ಮತ್ತು ಶಾಜಿ ಕೈಲಾಸ್ ಅವರ ಹಲವು ಸಿನಿಮಾಗಳ ಆಫರ್‌ಗಳನ್ನು ನಿರಾಕರಿಸಿದ ನಿದರ್ಶನಗಳಿವೆ ಎಂದು ಹೇಳಿದ್ದಾರೆ.

“ಮಲಯಾಳಂ ಬಿಟ್ಟು ಈಗ ನಾನು ಬೇರೆ ಚಿತ್ರರಂಗದಲ್ಲಿ ಕೆಲಸ ಮಾಡಲು ಆರಂಭಿಸಿದ್ದೇನೆ. ಘಟನೆಯಿಂದಾಗಿ ನಾನು ಬೇರೆ ಯಾವುದಾದರೂ ದೇಶದಲ್ಲಿ ನೆಲೆಯೂರಲು ಮತ್ತು ಹೊಸದಾಗಿ ಪ್ರಾರಂಭಿಸಲು ಬಯಸಿದ ದಿನಗಳಿವೆ. ಆಘಾತಕಾರಿ ಘಟನೆಯಿಂದ ಹೊರಬಂದು ಮೊದಲು ಸಾಮಾನ್ಯ ಸ್ಥಿತಿಗೆ ಬರಬೇಕು. ನಾನು ಅಂತಹ ಸ್ಥಿತಿಯಿಂದ ಹೊರಗೆ ಬರಲು ಐದು ವರ್ಷ ಬೇಕಾಯಿತು. ಪ್ರಪಂಚದಾದ್ಯಂತ ಅದೇ ಹಂತದಲ್ಲಿ ಇತರ ಮಹಿಳೆಯರು ಇದ್ದಾರೆ. ಅವರ ಅವಸ್ಥೆಯ ಬಗ್ಗೆ ನನಗೆ ತುಂಬಾ ಬೇಸರವಾಗುತ್ತದೆ. ನಾನು ಅವರಿಗೆ ತಿಳಿಸಲು ಬಯಸುವುದೇನೆಂದರೆ ಫಲಿತಾಂಶ ಏನಾಗಬಹುದು ಎಂಬುದರ ಕುರಿತು ಚಿಂತಿಸದೆ ನಾನು ಗಟ್ಟಿಯಾಗಿ ಹೋರಾಡುತ್ತೇನೆ ”ಎಂದು ನಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದರು. ಮಲಯಾಳಂ, ಬಾಲಿವುಡ್ ಚಿತ್ರರಂಗದ ಹಲವು ತಾರೆಯರು ನಟಿಗೆ ಬೆಂಬಲ ಸೂಚಿಸಿದ್ದರು.

 ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...