Homeಮುಖಪುಟ'ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ': ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.

ಹಮಾರಾ ಪ್ರಸಾದ್ ಮಾತನಾಡಿರುವ ವಿಡಿಯೋದಲ್ಲಿ, ”ಅಂಬೇಡ್ಕರ್ ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕ ಜನಸಾಮಾನ್ಯರಿಗೆ ಜ್ಞಾನೋದಯಕ್ಕೆ ಒಂದು ವಿವರಣೆ ಎಂದು ಹೇಳಿದ್ದಾರೆ. ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು.” ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿರುವ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು.) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ. ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದಾರೆ.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಟಿಎನ್‌ಎಂ ಜೊತೆ ಮಾತನಾಡಿದ್ದು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಅವರು ಬರೆದಿರುವ ಹಿಂದೂ ಧರ್ಮದಲ್ಲಿ ಒಗಟುಗಳು ಎಂಬ ಪುಸ್ತಕವು ಹಿಂದೂ ಧರ್ಮವನ್ನು ವಿಮರ್ಶಸಿದೆ. ಈ ಪುಸ್ತಕದಲ್ಲಿ, ”ಬ್ರಾಹ್ಮಣ ಧರ್ಮಶಾಸ್ತ್ರ ಎಂದು ಹೇಳುತ್ತ ಜನಸಾಮಾನ್ಯರ ಮೇಲೆ ಹೇರಲಾದ ನಂಬಿಕೆಗಳ ಮೌಢ್ಯದ ನಿರೂಪಣೆಯನ್ನು ಒಳಗೊಂಡಿದೆ. ಬ್ರಾಹ್ಮಣರು ಇಲ್ಲಿಯ ಮೂಲ ನಿವಾಸಿಗಳನ್ನು ಯಾವ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಮತ್ತು ಅವರನ್ನು ತರ್ಕಬದ್ಧ ಚಿಂತನೆಯ ಹಾದಿಗೆ ಕರೆದೊಯ್ಯುವ ಉದ್ದೇಶ ಈ ಪುಸ್ತಕದಲ್ಲಿದೆ. ಹಿಂದು ಧರ್ಮ ಸನಾತನವಾದ ಧರ್ಮ ಇದು ಎಂದಿಗೂ ಬದಲಾಗುವುದಿಲ್ಲ ಎನ್ನುವ ದೃಷ್ಟಿಕೋನದಲ್ಲಿ ಬ್ರಾಹ್ಮಣರು ಪ್ರಚಾರ ಮಾಡಿದ್ದಾರೆ.”

”ಹಿಂದೂ ನಾಗರಿಕತೆಯು ಎಂದೂ ಬದಲಾಗದೇ ಸ್ಥಿರವಾಗಿದೆ ಎಂದು ಹೇಳಿದ ಅನೇಕ ಯುರೋಪಿಯನ್ ವಿದ್ವಾಂಸರು ಅವರ ದೃಷ್ಟಿಕೋನವನ್ನು ಬಲಪಡಿಸಿದ್ದಾರೆ. ಆದರೆ ಅವರ ದೃಷ್ಟಿಕೋನ ಸತ್ಯ ಅಲ್ಲ. ಹಿಂದೂ ಸಮಾಜವು ಕಾಲಕಾಲಕ್ಕೆ ಬದಲಾಗಿದೆ ಮತ್ತು ಆಗಾಗ್ಗೆ ಬದಲಾವಣೆಯು ಆಗುತ್ತಿದೆ ಎಂದು ನಾನು ಈ ಪುಸ್ತಕದಲ್ಲಿ ತೋರಿಸಲು ಪ್ರಯತ್ನಿಸಿದೆ. ಈ ಸಂಬಂಧದಲ್ಲಿ, ಒಗಟುಗಳನ್ನು ಹಿಂಸೆಯಿಂದ ಅಹಿಂಸೆಗೆ ಮತ್ತು ಅಹಿಂಸೆಯಿಂದ ಹಿಂಸೆಗೆ ಹೋಲಿಸಿ, ಈ ಹಿಂದೂ ಧರ್ಮ ಸನಾತನವಲ್ಲ ಎಂದು ಜನಸಾಮಾನ್ಯರಿಗೆ ಅರಿವು ಮೂಡಿಸಲು ಬಯಸುತ್ತೇನೆ” ಎಂದು ಪುಸ್ತಕದ ಪರಿಚಯದಲ್ಲಿ ಅಂಬೇಡ್ಕರ್ ಬರೆದಿದ್ದಾರೆ.

”ಈ ಪುಸ್ತಕದ ಎರಡನೇ ಉದ್ದೇಶ ಎಂದರೆ, ಬ್ರಾಹ್ಮಣರ ತಂತ್ರಗಳತ್ತ ಹಿಂದೂ ಜನಸಾಮಾನ್ಯರ ಗಮನವನ್ನು ಹೇಗೆ ಸೆಳೆಯುತ್ತಾರೆ ಮತ್ತು ಅವರು ಬ್ರಾಹ್ಮಣರಿಂದ ಹೇಗೆ ವಂಚನೆಗೆ ಒಳಗಾಗಿದ್ದಾರೆ, ದಾರಿ ತಪ್ಪಿದ್ದಾರೆ ಎನ್ನುವುದನ್ನು ಸ್ವತಃ ಯೋಚಿಸುವಂತೆ ಮಾಡುವುದು ಹೇಗೆ” ಎನ್ನುವ ಬಗ್ಗೆ ಅಂಬೇಡ್ಕರ್ ಅವರು ಪುಸ್ತಕದಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...