Homeಮುಖಪುಟ'ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ': ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.

ಹಮಾರಾ ಪ್ರಸಾದ್ ಮಾತನಾಡಿರುವ ವಿಡಿಯೋದಲ್ಲಿ, ”ಅಂಬೇಡ್ಕರ್ ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕ ಜನಸಾಮಾನ್ಯರಿಗೆ ಜ್ಞಾನೋದಯಕ್ಕೆ ಒಂದು ವಿವರಣೆ ಎಂದು ಹೇಳಿದ್ದಾರೆ. ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು.” ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿರುವ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು.) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ. ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದಾರೆ.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಟಿಎನ್‌ಎಂ ಜೊತೆ ಮಾತನಾಡಿದ್ದು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಅವರು ಬರೆದಿರುವ ಹಿಂದೂ ಧರ್ಮದಲ್ಲಿ ಒಗಟುಗಳು ಎಂಬ ಪುಸ್ತಕವು ಹಿಂದೂ ಧರ್ಮವನ್ನು ವಿಮರ್ಶಸಿದೆ. ಈ ಪುಸ್ತಕದಲ್ಲಿ, ”ಬ್ರಾಹ್ಮಣ ಧರ್ಮಶಾಸ್ತ್ರ ಎಂದು ಹೇಳುತ್ತ ಜನಸಾಮಾನ್ಯರ ಮೇಲೆ ಹೇರಲಾದ ನಂಬಿಕೆಗಳ ಮೌಢ್ಯದ ನಿರೂಪಣೆಯನ್ನು ಒಳಗೊಂಡಿದೆ. ಬ್ರಾಹ್ಮಣರು ಇಲ್ಲಿಯ ಮೂಲ ನಿವಾಸಿಗಳನ್ನು ಯಾವ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಮತ್ತು ಅವರನ್ನು ತರ್ಕಬದ್ಧ ಚಿಂತನೆಯ ಹಾದಿಗೆ ಕರೆದೊಯ್ಯುವ ಉದ್ದೇಶ ಈ ಪುಸ್ತಕದಲ್ಲಿದೆ. ಹಿಂದು ಧರ್ಮ ಸನಾತನವಾದ ಧರ್ಮ ಇದು ಎಂದಿಗೂ ಬದಲಾಗುವುದಿಲ್ಲ ಎನ್ನುವ ದೃಷ್ಟಿಕೋನದಲ್ಲಿ ಬ್ರಾಹ್ಮಣರು ಪ್ರಚಾರ ಮಾಡಿದ್ದಾರೆ.”

”ಹಿಂದೂ ನಾಗರಿಕತೆಯು ಎಂದೂ ಬದಲಾಗದೇ ಸ್ಥಿರವಾಗಿದೆ ಎಂದು ಹೇಳಿದ ಅನೇಕ ಯುರೋಪಿಯನ್ ವಿದ್ವಾಂಸರು ಅವರ ದೃಷ್ಟಿಕೋನವನ್ನು ಬಲಪಡಿಸಿದ್ದಾರೆ. ಆದರೆ ಅವರ ದೃಷ್ಟಿಕೋನ ಸತ್ಯ ಅಲ್ಲ. ಹಿಂದೂ ಸಮಾಜವು ಕಾಲಕಾಲಕ್ಕೆ ಬದಲಾಗಿದೆ ಮತ್ತು ಆಗಾಗ್ಗೆ ಬದಲಾವಣೆಯು ಆಗುತ್ತಿದೆ ಎಂದು ನಾನು ಈ ಪುಸ್ತಕದಲ್ಲಿ ತೋರಿಸಲು ಪ್ರಯತ್ನಿಸಿದೆ. ಈ ಸಂಬಂಧದಲ್ಲಿ, ಒಗಟುಗಳನ್ನು ಹಿಂಸೆಯಿಂದ ಅಹಿಂಸೆಗೆ ಮತ್ತು ಅಹಿಂಸೆಯಿಂದ ಹಿಂಸೆಗೆ ಹೋಲಿಸಿ, ಈ ಹಿಂದೂ ಧರ್ಮ ಸನಾತನವಲ್ಲ ಎಂದು ಜನಸಾಮಾನ್ಯರಿಗೆ ಅರಿವು ಮೂಡಿಸಲು ಬಯಸುತ್ತೇನೆ” ಎಂದು ಪುಸ್ತಕದ ಪರಿಚಯದಲ್ಲಿ ಅಂಬೇಡ್ಕರ್ ಬರೆದಿದ್ದಾರೆ.

”ಈ ಪುಸ್ತಕದ ಎರಡನೇ ಉದ್ದೇಶ ಎಂದರೆ, ಬ್ರಾಹ್ಮಣರ ತಂತ್ರಗಳತ್ತ ಹಿಂದೂ ಜನಸಾಮಾನ್ಯರ ಗಮನವನ್ನು ಹೇಗೆ ಸೆಳೆಯುತ್ತಾರೆ ಮತ್ತು ಅವರು ಬ್ರಾಹ್ಮಣರಿಂದ ಹೇಗೆ ವಂಚನೆಗೆ ಒಳಗಾಗಿದ್ದಾರೆ, ದಾರಿ ತಪ್ಪಿದ್ದಾರೆ ಎನ್ನುವುದನ್ನು ಸ್ವತಃ ಯೋಚಿಸುವಂತೆ ಮಾಡುವುದು ಹೇಗೆ” ಎನ್ನುವ ಬಗ್ಗೆ ಅಂಬೇಡ್ಕರ್ ಅವರು ಪುಸ್ತಕದಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...