Homeಮುಖಪುಟನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುತ್ತೇನೆ...

- Advertisement -
- Advertisement -

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, “ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು” ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಫಿಲ್ಮ್‌ ಕಂಪ್ಯಾನಿಯನ್‌ಗಾಗಿ ಭಾರದ್ವಾಜ್ ರಂಗನ್ ಮತ್ತು ಅನುಪಮಾ ಚೋಪ್ರಾ ಅವರು ವಿಜಯ್ ದೇವರಕೊಂಡರವರ ಸಂದರ್ಶನ ನಡೆಸುತ್ತಿದ್ದಾಗ “ಮತ ಚಲಾಯಿಸಲು ಎಲ್ಲರಿಗೂ ಅವಕಾಶ ನೀಡಬೇಕು ಎಂಬುದರಲ್ಲಿ ನನಗೆ ಒಪ್ಪಿಗೆಯಿಲ್ಲ. ಯಾಕೆಂದರೆ, ಹಣ ಮತ್ತು ಮದ್ಯಕ್ಕಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಿದ್ದಾರೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಅವರಿಗೆ ಗೊತ್ತಿಲ್ಲ. ವಿದ್ಯಾವಂತರು ಹೆಚ್ಚಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಒಂದು ಉದಾಹರಣೆ ನೀಡಿದ ವಿಜಯ್ ದೇವರಕೊಂಡ, “ನೀವು ಒಂದು ವಿಮಾನದಲ್ಲಿ ಬಾಂಬೆಗೆ ಹೋಗಬೇಕು ಎನ್ನುವಾಗ, ಯಾರು ವಿಮಾನವನ್ನು ಚಲಾಯಿಸಬೇಕು ಎಂದು ನಾವೆಲ್ಲರೂ ನಿರ್ಧರಿಸುತ್ತೇವೆಯೇ? ಆ ವಿಮಾನದಲ್ಲಿ ಯಾರು ಚಲಾಯಿಸಬೇಕು ಎಂಬುದನ್ನು ನಿರ್ಧರಿಸಲು ವಿಮಾನದಲ್ಲಿರುವ 300 ಜನರಿಗೆ ಅವಕಾಶ ನೀಡಬೇಕೇ? ಇಲ್ಲ. ಯಾರು ಹೆಚ್ಚು ಸಮರ್ಥರು ಅಥವಾ ಯಾರು ವ್ಯವಹಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ ಅಥವಾ ವಿಮಾನವನ್ನು ಚಲಾಯಿಸಲು ಉತ್ತಮ ವ್ಯಕ್ತಿ ಯಾರೆಂದು ನಿರ್ಧರಿಸಲು ವಿಮಾನಯಾನ ಸಂಸ್ಥೆಗಳಂತಹ ದಕ್ಷ ಏಜೆನ್ಸಿಗೆ ಅವಕಾಶ ನೀಡುತ್ತೇವೆ” ಎಂದು ವಿವರಿಸಿದರು.

“ನಾನು, ಶ್ರೀಮಂತರಿಂದ ಮಾತ್ರ ಮತ ಚಲಾವಣೆಯಾಗುವುದರ ಪರ ಇಲ್ಲ. ಬದಲಾಗಿ ಹಣ ಮತ್ತು ಮದ್ಯಕ್ಕೆ ಮಾರಿಕೊಳ್ಳದ ವಿದ್ಯಾವಂತ ಜನರಿಂದ ಮತ ಚಲಾವಣೆ ಆಗಬೇಕು. ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುವುದಾಗಿ” ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

“ಜನರು ಮದ್ಯ ಮತ್ತು ಹಣಕ್ಕಾಗಿ ಮತ ಚಲಾಯಿಸುವ ಚುನಾವಣೆಯ ಪರ ನಾನು ನಿಲ್ಲುವುದಿಲ್ಲ. ನಾನು ಒಬ್ಬ ಸರ್ವಾಧಿಕಾರಿಯಾಗಲು ಬಯಸುತ್ತೇನೆ. ನೀವು ಬಯಸುವ ಬದಲಾವಣೆ ಆಗಬೇಕಾದರೆ ಇದು ಉತ್ತಮ ಮಾರ್ಗ ಎಂಬುದು ನನ್ನ ಅಭಿಪ್ರಾಯ. ನಾನು ಒಳ್ಳೆಯ ಉದ್ದೇಶವನ್ನು ಹೊಂದಿದ್ದೇನೆ. ನಿಮಗೆ ಯಾವುದು ಒಳ್ಳೆಯದು ಎಂದು ನಿಮಗೆ ತಿಳಿದಿಲ್ಲ. ಹಾಗಾಗಿ ನಾನು ಹೇಳುವುದಕ್ಕೆ ಬದ್ದರಾಗಿ. 5-10 ವರ್ಷಗಳಲ್ಲಿ ಎಲ್ಲಾ ಸಮಸ್ಯೆಯನ್ನು ಇದು ತೀರಿಸಲಿದೆ” ಎಂದು ಹೇಳಿದರು.

ಅದಾಗ್ಯೂ ಪ್ರಜಾಪ್ರಭುತ್ವದ ಮೌಲ್ಯಗಳ ಅಜ್ಞಾನ ಮತ್ತು ಬಲಪಂಥೀಯ ಚಿಂತನೆಯತ್ತ ಚಲಿಸುವ ಈ ಪ್ರವೃತ್ತಿಯ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ತೀವ್ರವವಾಗಿ ಟೀಕಿಸಿದ್ದಾರೆ. ಇತರರಿಗೆ ಒಳ್ಳೆಯದು ಅಥವಾ ಕೆಟ್ಟದ್ದನ್ನು ಯಾವ ಆಧಾರದ ಮೇಲೆ ನಿರ್ಧರಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

“ರಾಜಕೀಯ ವಿರೋಧಿ ಜನರು ನಿಧಾನವಾಗಿ ಬಲಪಂಥೀಯ ಸರ್ವಾಧಿಕಾರದ ಕಡೆಗೆ ನಿಧಾನವಾಗಿ ಚಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ” ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

“ಭಾರತವು ತನ್ನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರಶ್ನಿಸುವಲ್ಲಿ ನಿರತವಾಗಿದೆ. ಆದರೆ ಮಿ.ಅರ್ಜುನ್ ರೆಡ್ಡಿ ಅವರು ತಮ್ಮದೇ ಆದ ಲೋಕದಲ್ಲಿದ್ದಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...