Homeಮುಖಪುಟನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುತ್ತೇನೆ...

- Advertisement -
- Advertisement -

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, “ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು” ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಫಿಲ್ಮ್‌ ಕಂಪ್ಯಾನಿಯನ್‌ಗಾಗಿ ಭಾರದ್ವಾಜ್ ರಂಗನ್ ಮತ್ತು ಅನುಪಮಾ ಚೋಪ್ರಾ ಅವರು ವಿಜಯ್ ದೇವರಕೊಂಡರವರ ಸಂದರ್ಶನ ನಡೆಸುತ್ತಿದ್ದಾಗ “ಮತ ಚಲಾಯಿಸಲು ಎಲ್ಲರಿಗೂ ಅವಕಾಶ ನೀಡಬೇಕು ಎಂಬುದರಲ್ಲಿ ನನಗೆ ಒಪ್ಪಿಗೆಯಿಲ್ಲ. ಯಾಕೆಂದರೆ, ಹಣ ಮತ್ತು ಮದ್ಯಕ್ಕಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಿದ್ದಾರೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಅವರಿಗೆ ಗೊತ್ತಿಲ್ಲ. ವಿದ್ಯಾವಂತರು ಹೆಚ್ಚಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಒಂದು ಉದಾಹರಣೆ ನೀಡಿದ ವಿಜಯ್ ದೇವರಕೊಂಡ, “ನೀವು ಒಂದು ವಿಮಾನದಲ್ಲಿ ಬಾಂಬೆಗೆ ಹೋಗಬೇಕು ಎನ್ನುವಾಗ, ಯಾರು ವಿಮಾನವನ್ನು ಚಲಾಯಿಸಬೇಕು ಎಂದು ನಾವೆಲ್ಲರೂ ನಿರ್ಧರಿಸುತ್ತೇವೆಯೇ? ಆ ವಿಮಾನದಲ್ಲಿ ಯಾರು ಚಲಾಯಿಸಬೇಕು ಎಂಬುದನ್ನು ನಿರ್ಧರಿಸಲು ವಿಮಾನದಲ್ಲಿರುವ 300 ಜನರಿಗೆ ಅವಕಾಶ ನೀಡಬೇಕೇ? ಇಲ್ಲ. ಯಾರು ಹೆಚ್ಚು ಸಮರ್ಥರು ಅಥವಾ ಯಾರು ವ್ಯವಹಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ ಅಥವಾ ವಿಮಾನವನ್ನು ಚಲಾಯಿಸಲು ಉತ್ತಮ ವ್ಯಕ್ತಿ ಯಾರೆಂದು ನಿರ್ಧರಿಸಲು ವಿಮಾನಯಾನ ಸಂಸ್ಥೆಗಳಂತಹ ದಕ್ಷ ಏಜೆನ್ಸಿಗೆ ಅವಕಾಶ ನೀಡುತ್ತೇವೆ” ಎಂದು ವಿವರಿಸಿದರು.

“ನಾನು, ಶ್ರೀಮಂತರಿಂದ ಮಾತ್ರ ಮತ ಚಲಾವಣೆಯಾಗುವುದರ ಪರ ಇಲ್ಲ. ಬದಲಾಗಿ ಹಣ ಮತ್ತು ಮದ್ಯಕ್ಕೆ ಮಾರಿಕೊಳ್ಳದ ವಿದ್ಯಾವಂತ ಜನರಿಂದ ಮತ ಚಲಾವಣೆ ಆಗಬೇಕು. ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುವುದಾಗಿ” ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

“ಜನರು ಮದ್ಯ ಮತ್ತು ಹಣಕ್ಕಾಗಿ ಮತ ಚಲಾಯಿಸುವ ಚುನಾವಣೆಯ ಪರ ನಾನು ನಿಲ್ಲುವುದಿಲ್ಲ. ನಾನು ಒಬ್ಬ ಸರ್ವಾಧಿಕಾರಿಯಾಗಲು ಬಯಸುತ್ತೇನೆ. ನೀವು ಬಯಸುವ ಬದಲಾವಣೆ ಆಗಬೇಕಾದರೆ ಇದು ಉತ್ತಮ ಮಾರ್ಗ ಎಂಬುದು ನನ್ನ ಅಭಿಪ್ರಾಯ. ನಾನು ಒಳ್ಳೆಯ ಉದ್ದೇಶವನ್ನು ಹೊಂದಿದ್ದೇನೆ. ನಿಮಗೆ ಯಾವುದು ಒಳ್ಳೆಯದು ಎಂದು ನಿಮಗೆ ತಿಳಿದಿಲ್ಲ. ಹಾಗಾಗಿ ನಾನು ಹೇಳುವುದಕ್ಕೆ ಬದ್ದರಾಗಿ. 5-10 ವರ್ಷಗಳಲ್ಲಿ ಎಲ್ಲಾ ಸಮಸ್ಯೆಯನ್ನು ಇದು ತೀರಿಸಲಿದೆ” ಎಂದು ಹೇಳಿದರು.

ಅದಾಗ್ಯೂ ಪ್ರಜಾಪ್ರಭುತ್ವದ ಮೌಲ್ಯಗಳ ಅಜ್ಞಾನ ಮತ್ತು ಬಲಪಂಥೀಯ ಚಿಂತನೆಯತ್ತ ಚಲಿಸುವ ಈ ಪ್ರವೃತ್ತಿಯ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ತೀವ್ರವವಾಗಿ ಟೀಕಿಸಿದ್ದಾರೆ. ಇತರರಿಗೆ ಒಳ್ಳೆಯದು ಅಥವಾ ಕೆಟ್ಟದ್ದನ್ನು ಯಾವ ಆಧಾರದ ಮೇಲೆ ನಿರ್ಧರಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

“ರಾಜಕೀಯ ವಿರೋಧಿ ಜನರು ನಿಧಾನವಾಗಿ ಬಲಪಂಥೀಯ ಸರ್ವಾಧಿಕಾರದ ಕಡೆಗೆ ನಿಧಾನವಾಗಿ ಚಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ” ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

“ಭಾರತವು ತನ್ನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರಶ್ನಿಸುವಲ್ಲಿ ನಿರತವಾಗಿದೆ. ಆದರೆ ಮಿ.ಅರ್ಜುನ್ ರೆಡ್ಡಿ ಅವರು ತಮ್ಮದೇ ಆದ ಲೋಕದಲ್ಲಿದ್ದಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...