Homeಮುಖಪುಟನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುತ್ತೇನೆ...

- Advertisement -
- Advertisement -

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, “ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು” ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಫಿಲ್ಮ್‌ ಕಂಪ್ಯಾನಿಯನ್‌ಗಾಗಿ ಭಾರದ್ವಾಜ್ ರಂಗನ್ ಮತ್ತು ಅನುಪಮಾ ಚೋಪ್ರಾ ಅವರು ವಿಜಯ್ ದೇವರಕೊಂಡರವರ ಸಂದರ್ಶನ ನಡೆಸುತ್ತಿದ್ದಾಗ “ಮತ ಚಲಾಯಿಸಲು ಎಲ್ಲರಿಗೂ ಅವಕಾಶ ನೀಡಬೇಕು ಎಂಬುದರಲ್ಲಿ ನನಗೆ ಒಪ್ಪಿಗೆಯಿಲ್ಲ. ಯಾಕೆಂದರೆ, ಹಣ ಮತ್ತು ಮದ್ಯಕ್ಕಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಿದ್ದಾರೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಅವರಿಗೆ ಗೊತ್ತಿಲ್ಲ. ವಿದ್ಯಾವಂತರು ಹೆಚ್ಚಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಒಂದು ಉದಾಹರಣೆ ನೀಡಿದ ವಿಜಯ್ ದೇವರಕೊಂಡ, “ನೀವು ಒಂದು ವಿಮಾನದಲ್ಲಿ ಬಾಂಬೆಗೆ ಹೋಗಬೇಕು ಎನ್ನುವಾಗ, ಯಾರು ವಿಮಾನವನ್ನು ಚಲಾಯಿಸಬೇಕು ಎಂದು ನಾವೆಲ್ಲರೂ ನಿರ್ಧರಿಸುತ್ತೇವೆಯೇ? ಆ ವಿಮಾನದಲ್ಲಿ ಯಾರು ಚಲಾಯಿಸಬೇಕು ಎಂಬುದನ್ನು ನಿರ್ಧರಿಸಲು ವಿಮಾನದಲ್ಲಿರುವ 300 ಜನರಿಗೆ ಅವಕಾಶ ನೀಡಬೇಕೇ? ಇಲ್ಲ. ಯಾರು ಹೆಚ್ಚು ಸಮರ್ಥರು ಅಥವಾ ಯಾರು ವ್ಯವಹಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ ಅಥವಾ ವಿಮಾನವನ್ನು ಚಲಾಯಿಸಲು ಉತ್ತಮ ವ್ಯಕ್ತಿ ಯಾರೆಂದು ನಿರ್ಧರಿಸಲು ವಿಮಾನಯಾನ ಸಂಸ್ಥೆಗಳಂತಹ ದಕ್ಷ ಏಜೆನ್ಸಿಗೆ ಅವಕಾಶ ನೀಡುತ್ತೇವೆ” ಎಂದು ವಿವರಿಸಿದರು.

“ನಾನು, ಶ್ರೀಮಂತರಿಂದ ಮಾತ್ರ ಮತ ಚಲಾವಣೆಯಾಗುವುದರ ಪರ ಇಲ್ಲ. ಬದಲಾಗಿ ಹಣ ಮತ್ತು ಮದ್ಯಕ್ಕೆ ಮಾರಿಕೊಳ್ಳದ ವಿದ್ಯಾವಂತ ಜನರಿಂದ ಮತ ಚಲಾವಣೆ ಆಗಬೇಕು. ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುವುದಾಗಿ” ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

“ಜನರು ಮದ್ಯ ಮತ್ತು ಹಣಕ್ಕಾಗಿ ಮತ ಚಲಾಯಿಸುವ ಚುನಾವಣೆಯ ಪರ ನಾನು ನಿಲ್ಲುವುದಿಲ್ಲ. ನಾನು ಒಬ್ಬ ಸರ್ವಾಧಿಕಾರಿಯಾಗಲು ಬಯಸುತ್ತೇನೆ. ನೀವು ಬಯಸುವ ಬದಲಾವಣೆ ಆಗಬೇಕಾದರೆ ಇದು ಉತ್ತಮ ಮಾರ್ಗ ಎಂಬುದು ನನ್ನ ಅಭಿಪ್ರಾಯ. ನಾನು ಒಳ್ಳೆಯ ಉದ್ದೇಶವನ್ನು ಹೊಂದಿದ್ದೇನೆ. ನಿಮಗೆ ಯಾವುದು ಒಳ್ಳೆಯದು ಎಂದು ನಿಮಗೆ ತಿಳಿದಿಲ್ಲ. ಹಾಗಾಗಿ ನಾನು ಹೇಳುವುದಕ್ಕೆ ಬದ್ದರಾಗಿ. 5-10 ವರ್ಷಗಳಲ್ಲಿ ಎಲ್ಲಾ ಸಮಸ್ಯೆಯನ್ನು ಇದು ತೀರಿಸಲಿದೆ” ಎಂದು ಹೇಳಿದರು.

ಅದಾಗ್ಯೂ ಪ್ರಜಾಪ್ರಭುತ್ವದ ಮೌಲ್ಯಗಳ ಅಜ್ಞಾನ ಮತ್ತು ಬಲಪಂಥೀಯ ಚಿಂತನೆಯತ್ತ ಚಲಿಸುವ ಈ ಪ್ರವೃತ್ತಿಯ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ತೀವ್ರವವಾಗಿ ಟೀಕಿಸಿದ್ದಾರೆ. ಇತರರಿಗೆ ಒಳ್ಳೆಯದು ಅಥವಾ ಕೆಟ್ಟದ್ದನ್ನು ಯಾವ ಆಧಾರದ ಮೇಲೆ ನಿರ್ಧರಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

“ರಾಜಕೀಯ ವಿರೋಧಿ ಜನರು ನಿಧಾನವಾಗಿ ಬಲಪಂಥೀಯ ಸರ್ವಾಧಿಕಾರದ ಕಡೆಗೆ ನಿಧಾನವಾಗಿ ಚಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ” ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

“ಭಾರತವು ತನ್ನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರಶ್ನಿಸುವಲ್ಲಿ ನಿರತವಾಗಿದೆ. ಆದರೆ ಮಿ.ಅರ್ಜುನ್ ರೆಡ್ಡಿ ಅವರು ತಮ್ಮದೇ ಆದ ಲೋಕದಲ್ಲಿದ್ದಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...