Homeಮುಖಪುಟನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುತ್ತೇನೆ...

- Advertisement -
- Advertisement -

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, “ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು” ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಫಿಲ್ಮ್‌ ಕಂಪ್ಯಾನಿಯನ್‌ಗಾಗಿ ಭಾರದ್ವಾಜ್ ರಂಗನ್ ಮತ್ತು ಅನುಪಮಾ ಚೋಪ್ರಾ ಅವರು ವಿಜಯ್ ದೇವರಕೊಂಡರವರ ಸಂದರ್ಶನ ನಡೆಸುತ್ತಿದ್ದಾಗ “ಮತ ಚಲಾಯಿಸಲು ಎಲ್ಲರಿಗೂ ಅವಕಾಶ ನೀಡಬೇಕು ಎಂಬುದರಲ್ಲಿ ನನಗೆ ಒಪ್ಪಿಗೆಯಿಲ್ಲ. ಯಾಕೆಂದರೆ, ಹಣ ಮತ್ತು ಮದ್ಯಕ್ಕಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಿದ್ದಾರೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಅವರಿಗೆ ಗೊತ್ತಿಲ್ಲ. ವಿದ್ಯಾವಂತರು ಹೆಚ್ಚಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಒಂದು ಉದಾಹರಣೆ ನೀಡಿದ ವಿಜಯ್ ದೇವರಕೊಂಡ, “ನೀವು ಒಂದು ವಿಮಾನದಲ್ಲಿ ಬಾಂಬೆಗೆ ಹೋಗಬೇಕು ಎನ್ನುವಾಗ, ಯಾರು ವಿಮಾನವನ್ನು ಚಲಾಯಿಸಬೇಕು ಎಂದು ನಾವೆಲ್ಲರೂ ನಿರ್ಧರಿಸುತ್ತೇವೆಯೇ? ಆ ವಿಮಾನದಲ್ಲಿ ಯಾರು ಚಲಾಯಿಸಬೇಕು ಎಂಬುದನ್ನು ನಿರ್ಧರಿಸಲು ವಿಮಾನದಲ್ಲಿರುವ 300 ಜನರಿಗೆ ಅವಕಾಶ ನೀಡಬೇಕೇ? ಇಲ್ಲ. ಯಾರು ಹೆಚ್ಚು ಸಮರ್ಥರು ಅಥವಾ ಯಾರು ವ್ಯವಹಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ ಅಥವಾ ವಿಮಾನವನ್ನು ಚಲಾಯಿಸಲು ಉತ್ತಮ ವ್ಯಕ್ತಿ ಯಾರೆಂದು ನಿರ್ಧರಿಸಲು ವಿಮಾನಯಾನ ಸಂಸ್ಥೆಗಳಂತಹ ದಕ್ಷ ಏಜೆನ್ಸಿಗೆ ಅವಕಾಶ ನೀಡುತ್ತೇವೆ” ಎಂದು ವಿವರಿಸಿದರು.

“ನಾನು, ಶ್ರೀಮಂತರಿಂದ ಮಾತ್ರ ಮತ ಚಲಾವಣೆಯಾಗುವುದರ ಪರ ಇಲ್ಲ. ಬದಲಾಗಿ ಹಣ ಮತ್ತು ಮದ್ಯಕ್ಕೆ ಮಾರಿಕೊಳ್ಳದ ವಿದ್ಯಾವಂತ ಜನರಿಂದ ಮತ ಚಲಾವಣೆ ಆಗಬೇಕು. ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುವುದಾಗಿ” ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

“ಜನರು ಮದ್ಯ ಮತ್ತು ಹಣಕ್ಕಾಗಿ ಮತ ಚಲಾಯಿಸುವ ಚುನಾವಣೆಯ ಪರ ನಾನು ನಿಲ್ಲುವುದಿಲ್ಲ. ನಾನು ಒಬ್ಬ ಸರ್ವಾಧಿಕಾರಿಯಾಗಲು ಬಯಸುತ್ತೇನೆ. ನೀವು ಬಯಸುವ ಬದಲಾವಣೆ ಆಗಬೇಕಾದರೆ ಇದು ಉತ್ತಮ ಮಾರ್ಗ ಎಂಬುದು ನನ್ನ ಅಭಿಪ್ರಾಯ. ನಾನು ಒಳ್ಳೆಯ ಉದ್ದೇಶವನ್ನು ಹೊಂದಿದ್ದೇನೆ. ನಿಮಗೆ ಯಾವುದು ಒಳ್ಳೆಯದು ಎಂದು ನಿಮಗೆ ತಿಳಿದಿಲ್ಲ. ಹಾಗಾಗಿ ನಾನು ಹೇಳುವುದಕ್ಕೆ ಬದ್ದರಾಗಿ. 5-10 ವರ್ಷಗಳಲ್ಲಿ ಎಲ್ಲಾ ಸಮಸ್ಯೆಯನ್ನು ಇದು ತೀರಿಸಲಿದೆ” ಎಂದು ಹೇಳಿದರು.

ಅದಾಗ್ಯೂ ಪ್ರಜಾಪ್ರಭುತ್ವದ ಮೌಲ್ಯಗಳ ಅಜ್ಞಾನ ಮತ್ತು ಬಲಪಂಥೀಯ ಚಿಂತನೆಯತ್ತ ಚಲಿಸುವ ಈ ಪ್ರವೃತ್ತಿಯ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ತೀವ್ರವವಾಗಿ ಟೀಕಿಸಿದ್ದಾರೆ. ಇತರರಿಗೆ ಒಳ್ಳೆಯದು ಅಥವಾ ಕೆಟ್ಟದ್ದನ್ನು ಯಾವ ಆಧಾರದ ಮೇಲೆ ನಿರ್ಧರಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

“ರಾಜಕೀಯ ವಿರೋಧಿ ಜನರು ನಿಧಾನವಾಗಿ ಬಲಪಂಥೀಯ ಸರ್ವಾಧಿಕಾರದ ಕಡೆಗೆ ನಿಧಾನವಾಗಿ ಚಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ” ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

“ಭಾರತವು ತನ್ನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರಶ್ನಿಸುವಲ್ಲಿ ನಿರತವಾಗಿದೆ. ಆದರೆ ಮಿ.ಅರ್ಜುನ್ ರೆಡ್ಡಿ ಅವರು ತಮ್ಮದೇ ಆದ ಲೋಕದಲ್ಲಿದ್ದಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...