Homeಮುಖಪುಟನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುತ್ತೇನೆ...

- Advertisement -
- Advertisement -

ತೆಲುಗು ಉದಯೋನ್ಮುಖ ನಟ ವಿಜಯ್ ದೇವರಕೊಂಡ ಸಾರ್ವರ್ತ್ರಿಕ ವಯಸ್ಕ ಮತದಾನದ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, “ಮತ ಚಲಾಯಿಸುವ ಹಕ್ಕನ್ನು ಎಲ್ಲರಿಗೂ ನೀಡಬಾರದು” ಎಂದು ಹೇಳಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಫಿಲ್ಮ್‌ ಕಂಪ್ಯಾನಿಯನ್‌ಗಾಗಿ ಭಾರದ್ವಾಜ್ ರಂಗನ್ ಮತ್ತು ಅನುಪಮಾ ಚೋಪ್ರಾ ಅವರು ವಿಜಯ್ ದೇವರಕೊಂಡರವರ ಸಂದರ್ಶನ ನಡೆಸುತ್ತಿದ್ದಾಗ “ಮತ ಚಲಾಯಿಸಲು ಎಲ್ಲರಿಗೂ ಅವಕಾಶ ನೀಡಬೇಕು ಎಂಬುದರಲ್ಲಿ ನನಗೆ ಒಪ್ಪಿಗೆಯಿಲ್ಲ. ಯಾಕೆಂದರೆ, ಹಣ ಮತ್ತು ಮದ್ಯಕ್ಕಾಗಿ ತಮ್ಮ ಮತವನ್ನು ಮಾರಿಕೊಳ್ಳುತ್ತಿದ್ದಾರೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಏಕೆ ಭಾಗವಹಿಸುತ್ತಿದ್ದಾರೆ ಎಂದು ಸ್ಪಷ್ಟವಾಗಿ ಅವರಿಗೆ ಗೊತ್ತಿಲ್ಲ. ವಿದ್ಯಾವಂತರು ಹೆಚ್ಚಾಗಿ ಪಾಲ್ಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಒಂದು ಉದಾಹರಣೆ ನೀಡಿದ ವಿಜಯ್ ದೇವರಕೊಂಡ, “ನೀವು ಒಂದು ವಿಮಾನದಲ್ಲಿ ಬಾಂಬೆಗೆ ಹೋಗಬೇಕು ಎನ್ನುವಾಗ, ಯಾರು ವಿಮಾನವನ್ನು ಚಲಾಯಿಸಬೇಕು ಎಂದು ನಾವೆಲ್ಲರೂ ನಿರ್ಧರಿಸುತ್ತೇವೆಯೇ? ಆ ವಿಮಾನದಲ್ಲಿ ಯಾರು ಚಲಾಯಿಸಬೇಕು ಎಂಬುದನ್ನು ನಿರ್ಧರಿಸಲು ವಿಮಾನದಲ್ಲಿರುವ 300 ಜನರಿಗೆ ಅವಕಾಶ ನೀಡಬೇಕೇ? ಇಲ್ಲ. ಯಾರು ಹೆಚ್ಚು ಸಮರ್ಥರು ಅಥವಾ ಯಾರು ವ್ಯವಹಾರವನ್ನು ಅರ್ಥ ಮಾಡಿಕೊಳ್ಳುತ್ತಾರೆ ಅಥವಾ ವಿಮಾನವನ್ನು ಚಲಾಯಿಸಲು ಉತ್ತಮ ವ್ಯಕ್ತಿ ಯಾರೆಂದು ನಿರ್ಧರಿಸಲು ವಿಮಾನಯಾನ ಸಂಸ್ಥೆಗಳಂತಹ ದಕ್ಷ ಏಜೆನ್ಸಿಗೆ ಅವಕಾಶ ನೀಡುತ್ತೇವೆ” ಎಂದು ವಿವರಿಸಿದರು.

“ನಾನು, ಶ್ರೀಮಂತರಿಂದ ಮಾತ್ರ ಮತ ಚಲಾವಣೆಯಾಗುವುದರ ಪರ ಇಲ್ಲ. ಬದಲಾಗಿ ಹಣ ಮತ್ತು ಮದ್ಯಕ್ಕೆ ಮಾರಿಕೊಳ್ಳದ ವಿದ್ಯಾವಂತ ಜನರಿಂದ ಮತ ಚಲಾವಣೆ ಆಗಬೇಕು. ಹಣ ಮತ್ತು ಮದ್ಯದ ಆಧಾರದ ಮೇಲೆ ಇರುವ ಪ್ರಜಾಪ್ರಭುತ್ವ ವ್ಯವಸ್ಥೆಗಿಂತ, ಸರ್ವಾಧಿಕಾರಿ ವ್ಯವಸ್ಥೆಯ ಭಾಗವಾಗುವುದಕ್ಕೆ ಇಚ್ಚಿಸುವುದಾಗಿ” ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

“ಜನರು ಮದ್ಯ ಮತ್ತು ಹಣಕ್ಕಾಗಿ ಮತ ಚಲಾಯಿಸುವ ಚುನಾವಣೆಯ ಪರ ನಾನು ನಿಲ್ಲುವುದಿಲ್ಲ. ನಾನು ಒಬ್ಬ ಸರ್ವಾಧಿಕಾರಿಯಾಗಲು ಬಯಸುತ್ತೇನೆ. ನೀವು ಬಯಸುವ ಬದಲಾವಣೆ ಆಗಬೇಕಾದರೆ ಇದು ಉತ್ತಮ ಮಾರ್ಗ ಎಂಬುದು ನನ್ನ ಅಭಿಪ್ರಾಯ. ನಾನು ಒಳ್ಳೆಯ ಉದ್ದೇಶವನ್ನು ಹೊಂದಿದ್ದೇನೆ. ನಿಮಗೆ ಯಾವುದು ಒಳ್ಳೆಯದು ಎಂದು ನಿಮಗೆ ತಿಳಿದಿಲ್ಲ. ಹಾಗಾಗಿ ನಾನು ಹೇಳುವುದಕ್ಕೆ ಬದ್ದರಾಗಿ. 5-10 ವರ್ಷಗಳಲ್ಲಿ ಎಲ್ಲಾ ಸಮಸ್ಯೆಯನ್ನು ಇದು ತೀರಿಸಲಿದೆ” ಎಂದು ಹೇಳಿದರು.

ಅದಾಗ್ಯೂ ಪ್ರಜಾಪ್ರಭುತ್ವದ ಮೌಲ್ಯಗಳ ಅಜ್ಞಾನ ಮತ್ತು ಬಲಪಂಥೀಯ ಚಿಂತನೆಯತ್ತ ಚಲಿಸುವ ಈ ಪ್ರವೃತ್ತಿಯ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ತೀವ್ರವವಾಗಿ ಟೀಕಿಸಿದ್ದಾರೆ. ಇತರರಿಗೆ ಒಳ್ಳೆಯದು ಅಥವಾ ಕೆಟ್ಟದ್ದನ್ನು ಯಾವ ಆಧಾರದ ಮೇಲೆ ನಿರ್ಧರಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ವಿರುದ್ಧ ಕರ್ನಾಟಕದಲ್ಲಿ FIR ದಾಖಲಿಸಲು ಕೋರ್ಟ್ ನಿರ್ದೇಶನ

“ರಾಜಕೀಯ ವಿರೋಧಿ ಜನರು ನಿಧಾನವಾಗಿ ಬಲಪಂಥೀಯ ಸರ್ವಾಧಿಕಾರದ ಕಡೆಗೆ ನಿಧಾನವಾಗಿ ಚಲಿಸುತ್ತಿದ್ದಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ” ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

“ಭಾರತವು ತನ್ನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರಶ್ನಿಸುವಲ್ಲಿ ನಿರತವಾಗಿದೆ. ಆದರೆ ಮಿ.ಅರ್ಜುನ್ ರೆಡ್ಡಿ ಅವರು ತಮ್ಮದೇ ಆದ ಲೋಕದಲ್ಲಿದ್ದಾರೆ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಷಕಾರುವ, ದ್ವೇಷ ಹರಡುವ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ: ರಾಜೀವ್‌ ಬಜಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...