Homeಕರ್ನಾಟಕ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ - ಸಿಡಿ ಹಗರಣದ ಸಂತ್ರಸ್ತೆ ಯುವತಿ

‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ಸಿಡಿ ಹಗರಣದ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದವರು ಎಂದು ಹೇಳಲಾಗಿರುವ ಯುವತಿ ಇದೀಗ ಶನಿವಾರ ಬೆಳಿಗ್ಗೆ ನಾಲ್ಕನೆ ವಿಡಿಯೊವನ್ನು ಹರಿಬಿಟ್ಟಿದ್ದಾರೆ. ಯುವತಿಯು ಹೊಸ ವಿಡಿಯೊದಲ್ಲಿ, “ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ ಆಗುತ್ತಿದೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು, “ನನಗೆ ಬದುಕಬೇಕೊ, ಸಾಯಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಯಾವುದೆ ಮಾಹಿತಿ ಸಿಕ್ಕರೂ, ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂದು ಪರಿಗಣಿಸಿ ಆ ನಂತರ ಅದನ್ನು ಸುದ್ದಿ ಮಾಡಬೇಕು” ಎಂದು ಮಾಧ್ಯಮದೊಂದಿಗೆ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

‘‘ಮಾರ್ಚ್ 2 ರಂದು ಸಿ.ಡಿ. ರಿಲೀಸ್ ಆಗುತ್ತಿದ್ದಂತೆ, ನನಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು, ಇದನ್ನು ಯಾರು, ಯಾಕಾಗಿ ಮಾಡಿದ್ದಾರೆ ಎಂಬುದು ತಿಳಿಯಲಿಲ್ಲ. ಮಾಧ್ಯಮದಲ್ಲಿ ಸುದ್ದಿ ಬರುತ್ತಿದ್ದಂತೆ ಸುದ್ದಿ ವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆಗ ‘ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ನಾವು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೊತೆ‌ ಮಾತನಾಡೋಣ’ ಎಂದು ಅವರು ಧೈರ್ಯ ಹೇಳಿದ್ದರು’’ ಎಂದು ಯುವತಿ ವಿಡಿಯೊದಲ್ಲಿ ತಿಳಿಸಿದ್ದಾರೆ.

“ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದು, ಅವರನ್ನು ಸಮಾಧಾನ ಮಾಡಿದ್ದೆ. ಆನಂತರ ನಾವು ಡಿ.ಕೆ. ಶಿವಕುಮಾರ್‌ ಅವರ ಮನೆಯ ಬಳಿ ಹೋಗಿದ್ದೆವು. ಆದರೆ ನಮಗೆ ಅವರನ್ನು ಭೇಟಿಯಾಗಲು ಆಗಲಿಲ್ಲ. ಅಷ್ಟೊತ್ತಿಗೆ ಏನೇನೋ ಆಗ್ಬಿಟ್ಟಿತ್ತು. ಆನಂತ ನಾವು ಅಲ್ಲಿಂದ ವಾಪಾಸು ಬಂದೆವು” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

“ನನ್ನ ತಂದೆ ತಾಯಿ ಸೇರಿದಂತೆ ಕುಟುಂಬ ಅಪಾಯದಲ್ಲಿದೆ ಎಂದು ನನಗೆ ಅನಿಸುತ್ತಿದೆ. ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಅವರು ಎಲ್ಲಿದ್ದಾರೆ ಎಂದು ನನಗೆ ತಿಳಿದಿಲ್ಲ. ಅವರನ್ನು ಬೆಂಗಳೂರಿಗೆ ಕರೆ ತಂದು ಅವರಿಗೆ ರಕ್ಷಣೆ ನೀಡಬೇಕು. ನಾನು ಸುರಕ್ಷಿತವಾಗಿದ್ದು, ನನ್ನನ್ನು ಯಾರೂ ಕಿಡ್ನಾಪ್‌ ಮಾಡಿಲ್ಲ. ಅವರ ಸಮ್ಮುಖದಲ್ಲೇ ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ 24 ದಿನದಿಂದ ನನಗೆ ತುಂಬಾ ಕಿರುಕುಳವಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಎಷ್ಟೇ ದುಡ್ಡು ಖರ್ಚಾದರೂ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ, ನನ್ನ ಬಂಧಿಸಿದರೆ ಸರ್ಕಾರ ಉರುಳಿಸುತ್ತೇನೆ ಎನ್ನುತ್ತಿದ್ದಾರೆ. ಇದರ ಅರ್ಥವೇನು? ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಯುವತಿಯು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...