Homeಕರ್ನಾಟಕ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ - ಸಿಡಿ ಹಗರಣದ ಸಂತ್ರಸ್ತೆ ಯುವತಿ

‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ಸಿಡಿ ಹಗರಣದ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದವರು ಎಂದು ಹೇಳಲಾಗಿರುವ ಯುವತಿ ಇದೀಗ ಶನಿವಾರ ಬೆಳಿಗ್ಗೆ ನಾಲ್ಕನೆ ವಿಡಿಯೊವನ್ನು ಹರಿಬಿಟ್ಟಿದ್ದಾರೆ. ಯುವತಿಯು ಹೊಸ ವಿಡಿಯೊದಲ್ಲಿ, “ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ ಆಗುತ್ತಿದೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು, “ನನಗೆ ಬದುಕಬೇಕೊ, ಸಾಯಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಯಾವುದೆ ಮಾಹಿತಿ ಸಿಕ್ಕರೂ, ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂದು ಪರಿಗಣಿಸಿ ಆ ನಂತರ ಅದನ್ನು ಸುದ್ದಿ ಮಾಡಬೇಕು” ಎಂದು ಮಾಧ್ಯಮದೊಂದಿಗೆ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

‘‘ಮಾರ್ಚ್ 2 ರಂದು ಸಿ.ಡಿ. ರಿಲೀಸ್ ಆಗುತ್ತಿದ್ದಂತೆ, ನನಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು, ಇದನ್ನು ಯಾರು, ಯಾಕಾಗಿ ಮಾಡಿದ್ದಾರೆ ಎಂಬುದು ತಿಳಿಯಲಿಲ್ಲ. ಮಾಧ್ಯಮದಲ್ಲಿ ಸುದ್ದಿ ಬರುತ್ತಿದ್ದಂತೆ ಸುದ್ದಿ ವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆಗ ‘ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ನಾವು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೊತೆ‌ ಮಾತನಾಡೋಣ’ ಎಂದು ಅವರು ಧೈರ್ಯ ಹೇಳಿದ್ದರು’’ ಎಂದು ಯುವತಿ ವಿಡಿಯೊದಲ್ಲಿ ತಿಳಿಸಿದ್ದಾರೆ.

“ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದು, ಅವರನ್ನು ಸಮಾಧಾನ ಮಾಡಿದ್ದೆ. ಆನಂತರ ನಾವು ಡಿ.ಕೆ. ಶಿವಕುಮಾರ್‌ ಅವರ ಮನೆಯ ಬಳಿ ಹೋಗಿದ್ದೆವು. ಆದರೆ ನಮಗೆ ಅವರನ್ನು ಭೇಟಿಯಾಗಲು ಆಗಲಿಲ್ಲ. ಅಷ್ಟೊತ್ತಿಗೆ ಏನೇನೋ ಆಗ್ಬಿಟ್ಟಿತ್ತು. ಆನಂತ ನಾವು ಅಲ್ಲಿಂದ ವಾಪಾಸು ಬಂದೆವು” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

“ನನ್ನ ತಂದೆ ತಾಯಿ ಸೇರಿದಂತೆ ಕುಟುಂಬ ಅಪಾಯದಲ್ಲಿದೆ ಎಂದು ನನಗೆ ಅನಿಸುತ್ತಿದೆ. ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಅವರು ಎಲ್ಲಿದ್ದಾರೆ ಎಂದು ನನಗೆ ತಿಳಿದಿಲ್ಲ. ಅವರನ್ನು ಬೆಂಗಳೂರಿಗೆ ಕರೆ ತಂದು ಅವರಿಗೆ ರಕ್ಷಣೆ ನೀಡಬೇಕು. ನಾನು ಸುರಕ್ಷಿತವಾಗಿದ್ದು, ನನ್ನನ್ನು ಯಾರೂ ಕಿಡ್ನಾಪ್‌ ಮಾಡಿಲ್ಲ. ಅವರ ಸಮ್ಮುಖದಲ್ಲೇ ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ 24 ದಿನದಿಂದ ನನಗೆ ತುಂಬಾ ಕಿರುಕುಳವಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಎಷ್ಟೇ ದುಡ್ಡು ಖರ್ಚಾದರೂ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ, ನನ್ನ ಬಂಧಿಸಿದರೆ ಸರ್ಕಾರ ಉರುಳಿಸುತ್ತೇನೆ ಎನ್ನುತ್ತಿದ್ದಾರೆ. ಇದರ ಅರ್ಥವೇನು? ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಯುವತಿಯು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...