Homeಕರ್ನಾಟಕ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ - ಸಿಡಿ ಹಗರಣದ ಸಂತ್ರಸ್ತೆ ಯುವತಿ

‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ಸಿಡಿ ಹಗರಣದ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದವರು ಎಂದು ಹೇಳಲಾಗಿರುವ ಯುವತಿ ಇದೀಗ ಶನಿವಾರ ಬೆಳಿಗ್ಗೆ ನಾಲ್ಕನೆ ವಿಡಿಯೊವನ್ನು ಹರಿಬಿಟ್ಟಿದ್ದಾರೆ. ಯುವತಿಯು ಹೊಸ ವಿಡಿಯೊದಲ್ಲಿ, “ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ ಆಗುತ್ತಿದೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು, “ನನಗೆ ಬದುಕಬೇಕೊ, ಸಾಯಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಯಾವುದೆ ಮಾಹಿತಿ ಸಿಕ್ಕರೂ, ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂದು ಪರಿಗಣಿಸಿ ಆ ನಂತರ ಅದನ್ನು ಸುದ್ದಿ ಮಾಡಬೇಕು” ಎಂದು ಮಾಧ್ಯಮದೊಂದಿಗೆ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

‘‘ಮಾರ್ಚ್ 2 ರಂದು ಸಿ.ಡಿ. ರಿಲೀಸ್ ಆಗುತ್ತಿದ್ದಂತೆ, ನನಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು, ಇದನ್ನು ಯಾರು, ಯಾಕಾಗಿ ಮಾಡಿದ್ದಾರೆ ಎಂಬುದು ತಿಳಿಯಲಿಲ್ಲ. ಮಾಧ್ಯಮದಲ್ಲಿ ಸುದ್ದಿ ಬರುತ್ತಿದ್ದಂತೆ ಸುದ್ದಿ ವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆಗ ‘ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ನಾವು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೊತೆ‌ ಮಾತನಾಡೋಣ’ ಎಂದು ಅವರು ಧೈರ್ಯ ಹೇಳಿದ್ದರು’’ ಎಂದು ಯುವತಿ ವಿಡಿಯೊದಲ್ಲಿ ತಿಳಿಸಿದ್ದಾರೆ.

“ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದು, ಅವರನ್ನು ಸಮಾಧಾನ ಮಾಡಿದ್ದೆ. ಆನಂತರ ನಾವು ಡಿ.ಕೆ. ಶಿವಕುಮಾರ್‌ ಅವರ ಮನೆಯ ಬಳಿ ಹೋಗಿದ್ದೆವು. ಆದರೆ ನಮಗೆ ಅವರನ್ನು ಭೇಟಿಯಾಗಲು ಆಗಲಿಲ್ಲ. ಅಷ್ಟೊತ್ತಿಗೆ ಏನೇನೋ ಆಗ್ಬಿಟ್ಟಿತ್ತು. ಆನಂತ ನಾವು ಅಲ್ಲಿಂದ ವಾಪಾಸು ಬಂದೆವು” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

“ನನ್ನ ತಂದೆ ತಾಯಿ ಸೇರಿದಂತೆ ಕುಟುಂಬ ಅಪಾಯದಲ್ಲಿದೆ ಎಂದು ನನಗೆ ಅನಿಸುತ್ತಿದೆ. ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಅವರು ಎಲ್ಲಿದ್ದಾರೆ ಎಂದು ನನಗೆ ತಿಳಿದಿಲ್ಲ. ಅವರನ್ನು ಬೆಂಗಳೂರಿಗೆ ಕರೆ ತಂದು ಅವರಿಗೆ ರಕ್ಷಣೆ ನೀಡಬೇಕು. ನಾನು ಸುರಕ್ಷಿತವಾಗಿದ್ದು, ನನ್ನನ್ನು ಯಾರೂ ಕಿಡ್ನಾಪ್‌ ಮಾಡಿಲ್ಲ. ಅವರ ಸಮ್ಮುಖದಲ್ಲೇ ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ 24 ದಿನದಿಂದ ನನಗೆ ತುಂಬಾ ಕಿರುಕುಳವಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಎಷ್ಟೇ ದುಡ್ಡು ಖರ್ಚಾದರೂ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ, ನನ್ನ ಬಂಧಿಸಿದರೆ ಸರ್ಕಾರ ಉರುಳಿಸುತ್ತೇನೆ ಎನ್ನುತ್ತಿದ್ದಾರೆ. ಇದರ ಅರ್ಥವೇನು? ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಯುವತಿಯು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....