Homeಮುಖಪುಟಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.

- Advertisement -
- Advertisement -

ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯ ಜಿಲ್ಲಾಧಿಕಾರಿಯು ಹಲ್ಲೆ ಮಾಡುವ ಮತ್ತು ಆತನ ಮೊಬೈಲ್‌ ಅನ್ನು ನೆಲಕ್ಕೆ ಬಡಿದು ಹಾಳು ಮಾಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ನಂತರ ಆ ಐಎಎಸ್‌ ಅಧಿಕಾರಿ ಕ್ಷಮೆಯಾಚಿಸಿದ್ದಾರೆ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಛತ್ತೀಸ್‌ ಘಡ ಸಿಎಂ ಭೂಪೇಶ್ ಬಾಘೇಲ್, ಅಧಿಕಾರಿಯನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಸೂಚಿಸಿದ್ದಾರೆ.

ನಡೆದುದ್ದೇನು?

ಕೋವಿಡ್ ಲಾಕ್‌ಡೌನ್‌ ಕಾರಣಕ್ಕೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಯುವಕನೊಬ್ಬ ಮನೆಯಿಂದ ಹೊರಬಂದಿದ್ದನ್ನು ಪೊಲೀಸರು ಜಿಲ್ಲಾಧಿಕಾರಿಯ ಸಮ್ಮುಖದಲ್ಲಿ ಪ್ರಶ್ನಿಸಿದ್ದಾರೆ. ಯುವಕನು ಮಗುವನ್ನು ಟೆಸ್ಟ್ ಮಾಡಿಸಲು ಕರೆದೊಯ್ಯುತ್ತಿದ್ದೇನೆ ಎಂದು ಚೀಟಿ ಮತ್ತು ತನ್ನ ಮೊಬೈಲ್‌ನಲ್ಲಿ ಏನನ್ನೋ ತೋರಿಸಲು ಮುಂದಾಗಿದ್ದಾನೆ. ಆದರೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಅದನ್ನು ನೋಡದೇ ಮೊಬೈಲ್‌ ಅನ್ನು ಕಿತ್ತು ನೆಲಕ್ಕೆ ಬಡಿದಿದ್ದಾರೆ. ನಂತರ ಯುವಕನ ಕಪಾಳಕ್ಕೆ ಬಾರಿಸಿದ್ದಾರೆ. ಕೂಡಲೇ ಪೊಲೀಸರಿಬ್ಬರು ಲಾಠಿಯಿಂದ ಯುವಕನ ಮೇಲೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ದೌರ್ಜನ್ಯವೆಸಗಿದ ಆ ಜಿಲ್ಲಾಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಇದರಿಂದ ಆ ಐಎಎಸ್‌ ಅಧಿಕಾರಿಯನ್ನು ಜಿಲ್ಲಾಧಿಕಾರಿ ಸ್ಥಾನದಿಂದ ತೆಗೆಯುವಂತೆ ಸಿಎಂ ಸೂಚಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಕ್ಷಮೆಯಾಚಿಸಿದ್ದಾರೆ. ಹೇಳಿಕೆಯೊಂದನ್ನು ಬಿಡುಗಡೆ ಮಾಡಿ “ಘಟನೆಗೆ ಕ್ಷಮೆಯಾಚಿಸುತ್ತೇನೆ. ಆ ಯುವಕನನ್ನು ಅವಮಾನಿಸುವ ಉದ್ದೇಶ ನನಗಿರಲಿಲ್ಲ” ಎಂದಿದ್ದಾರೆ.

ನಾನು ಕೋವಿಡ್‌ನಿಂದ ಚೇತರಿಸಿಕೊಂಡಿದ್ದೇನೆ, ಆದರೆ ನಮ್ಮ ತಾಯಿ ಇನ್ನು ಬಳಲುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಯುವಕ ಅಪ್ರಾಪ್ತ ಎಂಬ ದೂರು ಕೇಳಿಬಂದಿದೆ. ಅದು ಸುಳ್ಳು ಆತನಿಗೆ 23 ವರ್ಷ ವಯಸ್ಸಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ -19 ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆ ವ್ಯಕ್ತಿಯ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ಈ ವರ್ತನೆ ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಅಧಿಕಾರಿಗಳಿಗೆ ಅನುಭೂತಿ ಇರಬೇಕು ಎಂದು ತಿಳಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...