Homeಮುಖಪುಟಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.

- Advertisement -
- Advertisement -

ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯ ಜಿಲ್ಲಾಧಿಕಾರಿಯು ಹಲ್ಲೆ ಮಾಡುವ ಮತ್ತು ಆತನ ಮೊಬೈಲ್‌ ಅನ್ನು ನೆಲಕ್ಕೆ ಬಡಿದು ಹಾಳು ಮಾಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ನಂತರ ಆ ಐಎಎಸ್‌ ಅಧಿಕಾರಿ ಕ್ಷಮೆಯಾಚಿಸಿದ್ದಾರೆ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಛತ್ತೀಸ್‌ ಘಡ ಸಿಎಂ ಭೂಪೇಶ್ ಬಾಘೇಲ್, ಅಧಿಕಾರಿಯನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಸೂಚಿಸಿದ್ದಾರೆ.

ನಡೆದುದ್ದೇನು?

ಕೋವಿಡ್ ಲಾಕ್‌ಡೌನ್‌ ಕಾರಣಕ್ಕೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಯುವಕನೊಬ್ಬ ಮನೆಯಿಂದ ಹೊರಬಂದಿದ್ದನ್ನು ಪೊಲೀಸರು ಜಿಲ್ಲಾಧಿಕಾರಿಯ ಸಮ್ಮುಖದಲ್ಲಿ ಪ್ರಶ್ನಿಸಿದ್ದಾರೆ. ಯುವಕನು ಮಗುವನ್ನು ಟೆಸ್ಟ್ ಮಾಡಿಸಲು ಕರೆದೊಯ್ಯುತ್ತಿದ್ದೇನೆ ಎಂದು ಚೀಟಿ ಮತ್ತು ತನ್ನ ಮೊಬೈಲ್‌ನಲ್ಲಿ ಏನನ್ನೋ ತೋರಿಸಲು ಮುಂದಾಗಿದ್ದಾನೆ. ಆದರೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಅದನ್ನು ನೋಡದೇ ಮೊಬೈಲ್‌ ಅನ್ನು ಕಿತ್ತು ನೆಲಕ್ಕೆ ಬಡಿದಿದ್ದಾರೆ. ನಂತರ ಯುವಕನ ಕಪಾಳಕ್ಕೆ ಬಾರಿಸಿದ್ದಾರೆ. ಕೂಡಲೇ ಪೊಲೀಸರಿಬ್ಬರು ಲಾಠಿಯಿಂದ ಯುವಕನ ಮೇಲೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ದೌರ್ಜನ್ಯವೆಸಗಿದ ಆ ಜಿಲ್ಲಾಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಇದರಿಂದ ಆ ಐಎಎಸ್‌ ಅಧಿಕಾರಿಯನ್ನು ಜಿಲ್ಲಾಧಿಕಾರಿ ಸ್ಥಾನದಿಂದ ತೆಗೆಯುವಂತೆ ಸಿಎಂ ಸೂಚಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಕ್ಷಮೆಯಾಚಿಸಿದ್ದಾರೆ. ಹೇಳಿಕೆಯೊಂದನ್ನು ಬಿಡುಗಡೆ ಮಾಡಿ “ಘಟನೆಗೆ ಕ್ಷಮೆಯಾಚಿಸುತ್ತೇನೆ. ಆ ಯುವಕನನ್ನು ಅವಮಾನಿಸುವ ಉದ್ದೇಶ ನನಗಿರಲಿಲ್ಲ” ಎಂದಿದ್ದಾರೆ.

ನಾನು ಕೋವಿಡ್‌ನಿಂದ ಚೇತರಿಸಿಕೊಂಡಿದ್ದೇನೆ, ಆದರೆ ನಮ್ಮ ತಾಯಿ ಇನ್ನು ಬಳಲುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಯುವಕ ಅಪ್ರಾಪ್ತ ಎಂಬ ದೂರು ಕೇಳಿಬಂದಿದೆ. ಅದು ಸುಳ್ಳು ಆತನಿಗೆ 23 ವರ್ಷ ವಯಸ್ಸಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ -19 ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆ ವ್ಯಕ್ತಿಯ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ಈ ವರ್ತನೆ ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಅಧಿಕಾರಿಗಳಿಗೆ ಅನುಭೂತಿ ಇರಬೇಕು ಎಂದು ತಿಳಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...