Homeಮುಖಪುಟಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಯುವಕನ ಮೇಲೆ ಹಲ್ಲೆಗೈದು, ಮೊಬೈಲ್ ಹೊಡೆದುಹಾಕಿದ ಜಿಲ್ಲಾಧಿಕಾರಿ: ಕ್ರಮಕ್ಕೆ ಮುಂದಾದ ಛತ್ತೀಸ್‌ ಘಡ ಸಿಎಂ

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.

- Advertisement -
- Advertisement -

ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಯುವಕನೊಬ್ಬನ ಮೇಲೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯ ಜಿಲ್ಲಾಧಿಕಾರಿಯು ಹಲ್ಲೆ ಮಾಡುವ ಮತ್ತು ಆತನ ಮೊಬೈಲ್‌ ಅನ್ನು ನೆಲಕ್ಕೆ ಬಡಿದು ಹಾಳು ಮಾಡುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾದ ನಂತರ ಆ ಐಎಎಸ್‌ ಅಧಿಕಾರಿ ಕ್ಷಮೆಯಾಚಿಸಿದ್ದಾರೆ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಛತ್ತೀಸ್‌ ಘಡ ಸಿಎಂ ಭೂಪೇಶ್ ಬಾಘೇಲ್, ಅಧಿಕಾರಿಯನ್ನು ಆ ಸ್ಥಾನದಿಂದ ತೆಗೆದುಹಾಕುವಂತೆ ಸೂಚಿಸಿದ್ದಾರೆ.

ನಡೆದುದ್ದೇನು?

ಕೋವಿಡ್ ಲಾಕ್‌ಡೌನ್‌ ಕಾರಣಕ್ಕೆ ಛತ್ತೀಸ್‌ ಘಡದ ಸೂರಜ್‌ಪುರ್ ಜಿಲ್ಲೆಯಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಆದರೆ ಈ ಸಂದರ್ಭದಲ್ಲಿ ಯುವಕನೊಬ್ಬ ಮನೆಯಿಂದ ಹೊರಬಂದಿದ್ದನ್ನು ಪೊಲೀಸರು ಜಿಲ್ಲಾಧಿಕಾರಿಯ ಸಮ್ಮುಖದಲ್ಲಿ ಪ್ರಶ್ನಿಸಿದ್ದಾರೆ. ಯುವಕನು ಮಗುವನ್ನು ಟೆಸ್ಟ್ ಮಾಡಿಸಲು ಕರೆದೊಯ್ಯುತ್ತಿದ್ದೇನೆ ಎಂದು ಚೀಟಿ ಮತ್ತು ತನ್ನ ಮೊಬೈಲ್‌ನಲ್ಲಿ ಏನನ್ನೋ ತೋರಿಸಲು ಮುಂದಾಗಿದ್ದಾನೆ. ಆದರೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಅದನ್ನು ನೋಡದೇ ಮೊಬೈಲ್‌ ಅನ್ನು ಕಿತ್ತು ನೆಲಕ್ಕೆ ಬಡಿದಿದ್ದಾರೆ. ನಂತರ ಯುವಕನ ಕಪಾಳಕ್ಕೆ ಬಾರಿಸಿದ್ದಾರೆ. ಕೂಡಲೇ ಪೊಲೀಸರಿಬ್ಬರು ಲಾಠಿಯಿಂದ ಯುವಕನ ಮೇಲೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ದೌರ್ಜನ್ಯವೆಸಗಿದ ಆ ಜಿಲ್ಲಾಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಇದರಿಂದ ಆ ಐಎಎಸ್‌ ಅಧಿಕಾರಿಯನ್ನು ಜಿಲ್ಲಾಧಿಕಾರಿ ಸ್ಥಾನದಿಂದ ತೆಗೆಯುವಂತೆ ಸಿಎಂ ಸೂಚಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ರಣಭೀರ್ ಶರ್ಮಾ ಕ್ಷಮೆಯಾಚಿಸಿದ್ದಾರೆ. ಹೇಳಿಕೆಯೊಂದನ್ನು ಬಿಡುಗಡೆ ಮಾಡಿ “ಘಟನೆಗೆ ಕ್ಷಮೆಯಾಚಿಸುತ್ತೇನೆ. ಆ ಯುವಕನನ್ನು ಅವಮಾನಿಸುವ ಉದ್ದೇಶ ನನಗಿರಲಿಲ್ಲ” ಎಂದಿದ್ದಾರೆ.

ನಾನು ಕೋವಿಡ್‌ನಿಂದ ಚೇತರಿಸಿಕೊಂಡಿದ್ದೇನೆ, ಆದರೆ ನಮ್ಮ ತಾಯಿ ಇನ್ನು ಬಳಲುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಯುವಕ ಅಪ್ರಾಪ್ತ ಎಂಬ ದೂರು ಕೇಳಿಬಂದಿದೆ. ಅದು ಸುಳ್ಳು ಆತನಿಗೆ 23 ವರ್ಷ ವಯಸ್ಸಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ -19 ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆ ವ್ಯಕ್ತಿಯ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯ ಈ ನಡವಳಿಕೆಯನ್ನು ಐಎಎಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ಈ ವರ್ತನೆ ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಅಧಿಕಾರಿಗಳಿಗೆ ಅನುಭೂತಿ ಇರಬೇಕು ಎಂದು ತಿಳಿಸಿದೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ: ಹೇಯ ಕೃತ್ಯ ಎಸಗಿದ ಪಿಎಸ್‌ಐ ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...