Homeಕರ್ನಾಟಕಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

ಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

- Advertisement -
- Advertisement -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿ ಮಹತ್ವದ ಅಂಶವೊಂದು ಬಯಲಾಗಿದ್ದು, ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ 4.8 ಕೋಟಿ ರೂಪಾಯಿ ನಗದು ವಾಪಾಸ್ಸು ಮಾಡಲು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಮಾಜಿ ಆರೋಗ್ಯ ಸಚಿವ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕರೆ ಮಾಡಿದ್ದರು ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ಏಪ್ರಿಲ್ 25ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿರುವ ಮುನೀಶ್ ಅವರ ಪೋನ್‌ಗೆ ಸುಧಾಕರ್ ಅವರ ದೂರವಾಣಿ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದೆ. ಕರೆಯಲ್ಲಿ ‘ಬಿಟ್ಬಿಡಿ’ ಎಂದು ಸುಧಾಕರ್‌ ಆಗ್ರಹಿಸಿದ್ದಾರೆ. ಇದಲ್ಲದೆ ವಾಟ್ಸಾಫ್‌ ಸಂದೇಶವನ್ನು ಕೂಡ ಕಳುಹಿಸಿದ್ದಾರೆ, ಸಂದೇಶದಲ್ಲಿ ನಗದು ವಾಪಾಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ.

ಸುಧಾಕರ್ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸದಸ್ಯ ದಶರಥ ವಿ ಕುಂಬಾರ್ ಸಲ್ಲಿಸಿರುವ ದೂರಿನಲ್ಲಿ, ಏಪ್ರಿಲ್ 25ರಂದು ಬೆಳಿಗ್ಗೆ 11.45 ರ ಸುಮಾರಿಗೆ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಯಲಹಂಕದ ಮನೆಯೊಂದರಲ್ಲಿ ಸುಮಾರು 10 ಕೋಟಿ ರೂ.ನಗದು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಮತದಾರರಿಗೆ ಲಂಚ ನೀಡುವುದಕ್ಕಾಗಿ ಮತ್ತು ಚುನಾವಣೆ ಸಮಯದಲ್ಲಿ ದುರ್ಬಳಕೆಗಾಗಿ ನಗದು ಕೂಡಿಟ್ಟಿರುವ ಬಗ್ಗೆ ಆರೋಪಿಸಿದ್ದರು. ಇದಲ್ಲದೆ ಕರೆ ಮಾಡಿದವರು ನಗದು ಇರುವ ಮನೆಯ ಜಿಪಿಎಸ್ ಲೊಕೇಶನ್‌ ಕೂಡ ನೀಡಿದ್ದರು.

ಇದರ ಬೆನ್ನಲ್ಲಿ ಮುನೀಶ್ ಮೌದ್ಗಿಲ್ ಅವರು ಮಧ್ಯಾಹ್ನ 1ಗಂಟೆ ಸುಮಾರಿಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ನಡೆದ ದಾಳಿಯಲ್ಲಿ ಸುಧಾಕರ್‌ ಆಪ್ತ ಗುತ್ತಿಗೆದಾರನ ಮನೆಯಿಂದ 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಚುನಾವಣಾ ನಾಮಪತ್ರದಲ್ಲಿ ಉಲ್ಲೇಖಿಸಿರುವ ಸಂಖ್ಯೆಯಿಂದ ಮುನೀಶ್ ಮೌದ್ಗಿಲ್‌ಗೆ ಕರೆ ಮತ್ತು ವಾಟ್ಸಾಪ್‌ ಸಂದೇಶ ಹೋಗಿದೆ.

ಮೌದ್ಗಿಲ್ ಅವರಿಗೆ ಮಧ್ಯಾಹ್ನ 2.04ಕ್ಕೆ ಮಾಧವರ ಗೋವಿಂದಪ್ಪ ಐಟಿ ತಂಡ ಎಂದು ಉಲ್ಲೇಖಿಸಿದ ಒಂದು ಸಂದೇಶ ಹೋಗಿದೆ, ನಂತರ 2.07ಕ್ಕೆ ಇನ್ನೊಂದು ಸಂದೇಶವು ದಯವಿಟ್ಟು ಸಹಾಯ ಮಾಡಿ ನಾನು ನಿಮಗೆ ತುಂಬಾ ಕೃತಜ್ಞರಾಗಿರುತ್ತೇನೆ, ವಂದನೆಗಳು ಎಂದು ಉಲ್ಲೇಖಿಸಲಾಗಿದೆ. ಮಧ್ಯಾಹ್ನ 2.14ಕ್ಕೆ ಸುಧಾಕರ್ ಮೌದ್ಗಿಲ್ ಅವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ “9945141601 ಆನಂದ್ ರತ್ಕಲ್” ಎಂದು ಬರೆದಿತ್ತು. ಐಆರ್‌ಎಸ್ ಅಧಿಕಾರಿ ಆನಂದ್ ರತ್ಕಲ್ ಅವರು ಬೆಂಗಳೂರು ನಗರ ಜಿಲ್ಲೆಯ ಐಟಿ ನೋಡಲ್ ಅಧಿಕಾರಿಯಾಗಿದ್ದು, ಇವರೇ ದಾಳಿ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಅವರಿಗೆ ನಗದನ್ನು ಬಿಟ್ಟು ಬಿಡುವಂತೆ ಸೂಚಿಸಲು ಮೌದ್ಗಿಲ್‌ಗೆ ನಂಬರ್ ಕಳುಹಿಸಿದ್ದರು ಎಂದು ಅಂದಾಜಿಸಲಾಗಿದೆ.

ಈ ಕುರಿತು ಅಧಿಕಾರಿಯೋರ್ವರು ಮಾತನಾಡಿದ್ದು, ಚುನಾವಣೆ ವೇಳೆ ನಡೆದ ದಾಳಿಗಳಲ್ಲಿ ಹಣ ಮತ್ತು ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಗುತ್ತಿಗೆದಾರರು ಅಥವಾ ಇತರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ನಂತರ ಐಟಿ ಇಲಾಖೆಯು ದಂಡ ಪಾವತಿಸಿದ ನಂತರ ಹಣವನ್ನು ಬಿಡುಗಡೆ ಮಾಡುತ್ತದೆ. ಈ ಪ್ರಕರಣದಲ್ಲೂ ಸುಧಾಕರ್ ಕರೆ ಮಾಡದೆ ಇದ್ದಿದ್ದರೆ ಯಾವ ರಾಜಕಾರಣಿಗೂ ಲಿಂಕ್ ಆಗುತ್ತಿರಲಿಲ್ಲ. ಹಣ ವಶಪಡಿಸಿಕೊಂಡಾಗ ರಾಜಕಾರಣಿಯೊಬ್ಬರು ಕರೆ ಮಾಡಿದರೂ ಇತರ ಹಲವು ಅಧಿಕಾರಿಗಳು ದೂರು ದಾಖಲಿಸದೇ ಇರಬಹುದು, ಆದರೆ ಮೌದ್ಗಿಲ್‌ ಇದನ್ನು ಮಾಡಿದ್ದಾರೆ. ಈಗ ಸುಧಾಕರ್ ಅವರು ಆ ಸಂದೇಶಗಳನ್ನು ಏಕೆ ಕಳುಹಿಸಿದ್ದಾರೆ ಎಂಬುವುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 ಇ (ಲಂಚ), 171 ಎಫ್, 171 ಬಿ, 171 ಸಿ (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಮತ್ತು ಸೆಕ್ಷನ್ 123ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...