Homeಕರ್ನಾಟಕಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

ಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

- Advertisement -
- Advertisement -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿ ಮಹತ್ವದ ಅಂಶವೊಂದು ಬಯಲಾಗಿದ್ದು, ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ 4.8 ಕೋಟಿ ರೂಪಾಯಿ ನಗದು ವಾಪಾಸ್ಸು ಮಾಡಲು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಮಾಜಿ ಆರೋಗ್ಯ ಸಚಿವ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕರೆ ಮಾಡಿದ್ದರು ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ಏಪ್ರಿಲ್ 25ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿರುವ ಮುನೀಶ್ ಅವರ ಪೋನ್‌ಗೆ ಸುಧಾಕರ್ ಅವರ ದೂರವಾಣಿ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದೆ. ಕರೆಯಲ್ಲಿ ‘ಬಿಟ್ಬಿಡಿ’ ಎಂದು ಸುಧಾಕರ್‌ ಆಗ್ರಹಿಸಿದ್ದಾರೆ. ಇದಲ್ಲದೆ ವಾಟ್ಸಾಫ್‌ ಸಂದೇಶವನ್ನು ಕೂಡ ಕಳುಹಿಸಿದ್ದಾರೆ, ಸಂದೇಶದಲ್ಲಿ ನಗದು ವಾಪಾಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ.

ಸುಧಾಕರ್ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸದಸ್ಯ ದಶರಥ ವಿ ಕುಂಬಾರ್ ಸಲ್ಲಿಸಿರುವ ದೂರಿನಲ್ಲಿ, ಏಪ್ರಿಲ್ 25ರಂದು ಬೆಳಿಗ್ಗೆ 11.45 ರ ಸುಮಾರಿಗೆ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಯಲಹಂಕದ ಮನೆಯೊಂದರಲ್ಲಿ ಸುಮಾರು 10 ಕೋಟಿ ರೂ.ನಗದು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಮತದಾರರಿಗೆ ಲಂಚ ನೀಡುವುದಕ್ಕಾಗಿ ಮತ್ತು ಚುನಾವಣೆ ಸಮಯದಲ್ಲಿ ದುರ್ಬಳಕೆಗಾಗಿ ನಗದು ಕೂಡಿಟ್ಟಿರುವ ಬಗ್ಗೆ ಆರೋಪಿಸಿದ್ದರು. ಇದಲ್ಲದೆ ಕರೆ ಮಾಡಿದವರು ನಗದು ಇರುವ ಮನೆಯ ಜಿಪಿಎಸ್ ಲೊಕೇಶನ್‌ ಕೂಡ ನೀಡಿದ್ದರು.

ಇದರ ಬೆನ್ನಲ್ಲಿ ಮುನೀಶ್ ಮೌದ್ಗಿಲ್ ಅವರು ಮಧ್ಯಾಹ್ನ 1ಗಂಟೆ ಸುಮಾರಿಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ನಡೆದ ದಾಳಿಯಲ್ಲಿ ಸುಧಾಕರ್‌ ಆಪ್ತ ಗುತ್ತಿಗೆದಾರನ ಮನೆಯಿಂದ 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಚುನಾವಣಾ ನಾಮಪತ್ರದಲ್ಲಿ ಉಲ್ಲೇಖಿಸಿರುವ ಸಂಖ್ಯೆಯಿಂದ ಮುನೀಶ್ ಮೌದ್ಗಿಲ್‌ಗೆ ಕರೆ ಮತ್ತು ವಾಟ್ಸಾಪ್‌ ಸಂದೇಶ ಹೋಗಿದೆ.

ಮೌದ್ಗಿಲ್ ಅವರಿಗೆ ಮಧ್ಯಾಹ್ನ 2.04ಕ್ಕೆ ಮಾಧವರ ಗೋವಿಂದಪ್ಪ ಐಟಿ ತಂಡ ಎಂದು ಉಲ್ಲೇಖಿಸಿದ ಒಂದು ಸಂದೇಶ ಹೋಗಿದೆ, ನಂತರ 2.07ಕ್ಕೆ ಇನ್ನೊಂದು ಸಂದೇಶವು ದಯವಿಟ್ಟು ಸಹಾಯ ಮಾಡಿ ನಾನು ನಿಮಗೆ ತುಂಬಾ ಕೃತಜ್ಞರಾಗಿರುತ್ತೇನೆ, ವಂದನೆಗಳು ಎಂದು ಉಲ್ಲೇಖಿಸಲಾಗಿದೆ. ಮಧ್ಯಾಹ್ನ 2.14ಕ್ಕೆ ಸುಧಾಕರ್ ಮೌದ್ಗಿಲ್ ಅವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ “9945141601 ಆನಂದ್ ರತ್ಕಲ್” ಎಂದು ಬರೆದಿತ್ತು. ಐಆರ್‌ಎಸ್ ಅಧಿಕಾರಿ ಆನಂದ್ ರತ್ಕಲ್ ಅವರು ಬೆಂಗಳೂರು ನಗರ ಜಿಲ್ಲೆಯ ಐಟಿ ನೋಡಲ್ ಅಧಿಕಾರಿಯಾಗಿದ್ದು, ಇವರೇ ದಾಳಿ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಅವರಿಗೆ ನಗದನ್ನು ಬಿಟ್ಟು ಬಿಡುವಂತೆ ಸೂಚಿಸಲು ಮೌದ್ಗಿಲ್‌ಗೆ ನಂಬರ್ ಕಳುಹಿಸಿದ್ದರು ಎಂದು ಅಂದಾಜಿಸಲಾಗಿದೆ.

ಈ ಕುರಿತು ಅಧಿಕಾರಿಯೋರ್ವರು ಮಾತನಾಡಿದ್ದು, ಚುನಾವಣೆ ವೇಳೆ ನಡೆದ ದಾಳಿಗಳಲ್ಲಿ ಹಣ ಮತ್ತು ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಗುತ್ತಿಗೆದಾರರು ಅಥವಾ ಇತರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ನಂತರ ಐಟಿ ಇಲಾಖೆಯು ದಂಡ ಪಾವತಿಸಿದ ನಂತರ ಹಣವನ್ನು ಬಿಡುಗಡೆ ಮಾಡುತ್ತದೆ. ಈ ಪ್ರಕರಣದಲ್ಲೂ ಸುಧಾಕರ್ ಕರೆ ಮಾಡದೆ ಇದ್ದಿದ್ದರೆ ಯಾವ ರಾಜಕಾರಣಿಗೂ ಲಿಂಕ್ ಆಗುತ್ತಿರಲಿಲ್ಲ. ಹಣ ವಶಪಡಿಸಿಕೊಂಡಾಗ ರಾಜಕಾರಣಿಯೊಬ್ಬರು ಕರೆ ಮಾಡಿದರೂ ಇತರ ಹಲವು ಅಧಿಕಾರಿಗಳು ದೂರು ದಾಖಲಿಸದೇ ಇರಬಹುದು, ಆದರೆ ಮೌದ್ಗಿಲ್‌ ಇದನ್ನು ಮಾಡಿದ್ದಾರೆ. ಈಗ ಸುಧಾಕರ್ ಅವರು ಆ ಸಂದೇಶಗಳನ್ನು ಏಕೆ ಕಳುಹಿಸಿದ್ದಾರೆ ಎಂಬುವುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 ಇ (ಲಂಚ), 171 ಎಫ್, 171 ಬಿ, 171 ಸಿ (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಮತ್ತು ಸೆಕ್ಷನ್ 123ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...