Homeಕರ್ನಾಟಕಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

ಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

- Advertisement -
- Advertisement -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿ ಮಹತ್ವದ ಅಂಶವೊಂದು ಬಯಲಾಗಿದ್ದು, ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ 4.8 ಕೋಟಿ ರೂಪಾಯಿ ನಗದು ವಾಪಾಸ್ಸು ಮಾಡಲು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಮಾಜಿ ಆರೋಗ್ಯ ಸಚಿವ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕರೆ ಮಾಡಿದ್ದರು ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ಏಪ್ರಿಲ್ 25ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿರುವ ಮುನೀಶ್ ಅವರ ಪೋನ್‌ಗೆ ಸುಧಾಕರ್ ಅವರ ದೂರವಾಣಿ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದೆ. ಕರೆಯಲ್ಲಿ ‘ಬಿಟ್ಬಿಡಿ’ ಎಂದು ಸುಧಾಕರ್‌ ಆಗ್ರಹಿಸಿದ್ದಾರೆ. ಇದಲ್ಲದೆ ವಾಟ್ಸಾಫ್‌ ಸಂದೇಶವನ್ನು ಕೂಡ ಕಳುಹಿಸಿದ್ದಾರೆ, ಸಂದೇಶದಲ್ಲಿ ನಗದು ವಾಪಾಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ.

ಸುಧಾಕರ್ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸದಸ್ಯ ದಶರಥ ವಿ ಕುಂಬಾರ್ ಸಲ್ಲಿಸಿರುವ ದೂರಿನಲ್ಲಿ, ಏಪ್ರಿಲ್ 25ರಂದು ಬೆಳಿಗ್ಗೆ 11.45 ರ ಸುಮಾರಿಗೆ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಯಲಹಂಕದ ಮನೆಯೊಂದರಲ್ಲಿ ಸುಮಾರು 10 ಕೋಟಿ ರೂ.ನಗದು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಮತದಾರರಿಗೆ ಲಂಚ ನೀಡುವುದಕ್ಕಾಗಿ ಮತ್ತು ಚುನಾವಣೆ ಸಮಯದಲ್ಲಿ ದುರ್ಬಳಕೆಗಾಗಿ ನಗದು ಕೂಡಿಟ್ಟಿರುವ ಬಗ್ಗೆ ಆರೋಪಿಸಿದ್ದರು. ಇದಲ್ಲದೆ ಕರೆ ಮಾಡಿದವರು ನಗದು ಇರುವ ಮನೆಯ ಜಿಪಿಎಸ್ ಲೊಕೇಶನ್‌ ಕೂಡ ನೀಡಿದ್ದರು.

ಇದರ ಬೆನ್ನಲ್ಲಿ ಮುನೀಶ್ ಮೌದ್ಗಿಲ್ ಅವರು ಮಧ್ಯಾಹ್ನ 1ಗಂಟೆ ಸುಮಾರಿಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ನಡೆದ ದಾಳಿಯಲ್ಲಿ ಸುಧಾಕರ್‌ ಆಪ್ತ ಗುತ್ತಿಗೆದಾರನ ಮನೆಯಿಂದ 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಚುನಾವಣಾ ನಾಮಪತ್ರದಲ್ಲಿ ಉಲ್ಲೇಖಿಸಿರುವ ಸಂಖ್ಯೆಯಿಂದ ಮುನೀಶ್ ಮೌದ್ಗಿಲ್‌ಗೆ ಕರೆ ಮತ್ತು ವಾಟ್ಸಾಪ್‌ ಸಂದೇಶ ಹೋಗಿದೆ.

ಮೌದ್ಗಿಲ್ ಅವರಿಗೆ ಮಧ್ಯಾಹ್ನ 2.04ಕ್ಕೆ ಮಾಧವರ ಗೋವಿಂದಪ್ಪ ಐಟಿ ತಂಡ ಎಂದು ಉಲ್ಲೇಖಿಸಿದ ಒಂದು ಸಂದೇಶ ಹೋಗಿದೆ, ನಂತರ 2.07ಕ್ಕೆ ಇನ್ನೊಂದು ಸಂದೇಶವು ದಯವಿಟ್ಟು ಸಹಾಯ ಮಾಡಿ ನಾನು ನಿಮಗೆ ತುಂಬಾ ಕೃತಜ್ಞರಾಗಿರುತ್ತೇನೆ, ವಂದನೆಗಳು ಎಂದು ಉಲ್ಲೇಖಿಸಲಾಗಿದೆ. ಮಧ್ಯಾಹ್ನ 2.14ಕ್ಕೆ ಸುಧಾಕರ್ ಮೌದ್ಗಿಲ್ ಅವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ “9945141601 ಆನಂದ್ ರತ್ಕಲ್” ಎಂದು ಬರೆದಿತ್ತು. ಐಆರ್‌ಎಸ್ ಅಧಿಕಾರಿ ಆನಂದ್ ರತ್ಕಲ್ ಅವರು ಬೆಂಗಳೂರು ನಗರ ಜಿಲ್ಲೆಯ ಐಟಿ ನೋಡಲ್ ಅಧಿಕಾರಿಯಾಗಿದ್ದು, ಇವರೇ ದಾಳಿ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಅವರಿಗೆ ನಗದನ್ನು ಬಿಟ್ಟು ಬಿಡುವಂತೆ ಸೂಚಿಸಲು ಮೌದ್ಗಿಲ್‌ಗೆ ನಂಬರ್ ಕಳುಹಿಸಿದ್ದರು ಎಂದು ಅಂದಾಜಿಸಲಾಗಿದೆ.

ಈ ಕುರಿತು ಅಧಿಕಾರಿಯೋರ್ವರು ಮಾತನಾಡಿದ್ದು, ಚುನಾವಣೆ ವೇಳೆ ನಡೆದ ದಾಳಿಗಳಲ್ಲಿ ಹಣ ಮತ್ತು ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಗುತ್ತಿಗೆದಾರರು ಅಥವಾ ಇತರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ನಂತರ ಐಟಿ ಇಲಾಖೆಯು ದಂಡ ಪಾವತಿಸಿದ ನಂತರ ಹಣವನ್ನು ಬಿಡುಗಡೆ ಮಾಡುತ್ತದೆ. ಈ ಪ್ರಕರಣದಲ್ಲೂ ಸುಧಾಕರ್ ಕರೆ ಮಾಡದೆ ಇದ್ದಿದ್ದರೆ ಯಾವ ರಾಜಕಾರಣಿಗೂ ಲಿಂಕ್ ಆಗುತ್ತಿರಲಿಲ್ಲ. ಹಣ ವಶಪಡಿಸಿಕೊಂಡಾಗ ರಾಜಕಾರಣಿಯೊಬ್ಬರು ಕರೆ ಮಾಡಿದರೂ ಇತರ ಹಲವು ಅಧಿಕಾರಿಗಳು ದೂರು ದಾಖಲಿಸದೇ ಇರಬಹುದು, ಆದರೆ ಮೌದ್ಗಿಲ್‌ ಇದನ್ನು ಮಾಡಿದ್ದಾರೆ. ಈಗ ಸುಧಾಕರ್ ಅವರು ಆ ಸಂದೇಶಗಳನ್ನು ಏಕೆ ಕಳುಹಿಸಿದ್ದಾರೆ ಎಂಬುವುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 ಇ (ಲಂಚ), 171 ಎಫ್, 171 ಬಿ, 171 ಸಿ (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಮತ್ತು ಸೆಕ್ಷನ್ 123ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...