Homeಕರ್ನಾಟಕಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

ಚಿಕ್ಕಬಳ್ಳಾಪುರ: ವಶಪಡಿಸಿಕೊಂಡ ನಗದು ಹಿಂತಿರುಗಿಸುವಂತೆ ಐಎಎಸ್ ಅಧಿಕಾರಿಗೆ ಸಂಪರ್ಕಿಸಿದ್ದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್!

- Advertisement -
- Advertisement -

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ ಅಧಿಕಾರಿಗಳು 4.8 ಕೋಟಿ ನಗದು ವಶಪಡಿಸಿಕೊಂಡಿದ್ದು, ಈ ಕುರಿತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿ ಮಹತ್ವದ ಅಂಶವೊಂದು ಬಯಲಾಗಿದ್ದು, ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿರುವ 4.8 ಕೋಟಿ ರೂಪಾಯಿ ನಗದು ವಾಪಾಸ್ಸು ಮಾಡಲು ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್‌ಗೆ ಮಾಜಿ ಆರೋಗ್ಯ ಸಚಿವ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕರೆ ಮಾಡಿದ್ದರು ಎನ್ನಲಾಗಿದೆ.

ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸರು ಏಪ್ರಿಲ್ 25ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಗೆ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿರುವ ಮುನೀಶ್ ಅವರ ಪೋನ್‌ಗೆ ಸುಧಾಕರ್ ಅವರ ದೂರವಾಣಿ ಸಂಖ್ಯೆಯಿಂದ ವಾಟ್ಸಾಪ್ ಕರೆ ಬಂದಿದೆ. ಕರೆಯಲ್ಲಿ ‘ಬಿಟ್ಬಿಡಿ’ ಎಂದು ಸುಧಾಕರ್‌ ಆಗ್ರಹಿಸಿದ್ದಾರೆ. ಇದಲ್ಲದೆ ವಾಟ್ಸಾಫ್‌ ಸಂದೇಶವನ್ನು ಕೂಡ ಕಳುಹಿಸಿದ್ದಾರೆ, ಸಂದೇಶದಲ್ಲಿ ನಗದು ವಾಪಾಸ್ಸು ಮಾಡುವಂತೆ ಕೇಳಿಕೊಂಡಿದ್ದಾರೆ.

ಸುಧಾಕರ್ ವಿರುದ್ಧ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಸದಸ್ಯ ದಶರಥ ವಿ ಕುಂಬಾರ್ ಸಲ್ಲಿಸಿರುವ ದೂರಿನಲ್ಲಿ, ಏಪ್ರಿಲ್ 25ರಂದು ಬೆಳಿಗ್ಗೆ 11.45 ರ ಸುಮಾರಿಗೆ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಯಲಹಂಕದ ಮನೆಯೊಂದರಲ್ಲಿ ಸುಮಾರು 10 ಕೋಟಿ ರೂ.ನಗದು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಂಗಳೂರಿನಲ್ಲಿ ಮತದಾರರಿಗೆ ಲಂಚ ನೀಡುವುದಕ್ಕಾಗಿ ಮತ್ತು ಚುನಾವಣೆ ಸಮಯದಲ್ಲಿ ದುರ್ಬಳಕೆಗಾಗಿ ನಗದು ಕೂಡಿಟ್ಟಿರುವ ಬಗ್ಗೆ ಆರೋಪಿಸಿದ್ದರು. ಇದಲ್ಲದೆ ಕರೆ ಮಾಡಿದವರು ನಗದು ಇರುವ ಮನೆಯ ಜಿಪಿಎಸ್ ಲೊಕೇಶನ್‌ ಕೂಡ ನೀಡಿದ್ದರು.

ಇದರ ಬೆನ್ನಲ್ಲಿ ಮುನೀಶ್ ಮೌದ್ಗಿಲ್ ಅವರು ಮಧ್ಯಾಹ್ನ 1ಗಂಟೆ ಸುಮಾರಿಗೆ ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ದೇಶನದಂತೆ ನಡೆದ ದಾಳಿಯಲ್ಲಿ ಸುಧಾಕರ್‌ ಆಪ್ತ ಗುತ್ತಿಗೆದಾರನ ಮನೆಯಿಂದ 4.8 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ನಂತರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಚುನಾವಣಾ ನಾಮಪತ್ರದಲ್ಲಿ ಉಲ್ಲೇಖಿಸಿರುವ ಸಂಖ್ಯೆಯಿಂದ ಮುನೀಶ್ ಮೌದ್ಗಿಲ್‌ಗೆ ಕರೆ ಮತ್ತು ವಾಟ್ಸಾಪ್‌ ಸಂದೇಶ ಹೋಗಿದೆ.

ಮೌದ್ಗಿಲ್ ಅವರಿಗೆ ಮಧ್ಯಾಹ್ನ 2.04ಕ್ಕೆ ಮಾಧವರ ಗೋವಿಂದಪ್ಪ ಐಟಿ ತಂಡ ಎಂದು ಉಲ್ಲೇಖಿಸಿದ ಒಂದು ಸಂದೇಶ ಹೋಗಿದೆ, ನಂತರ 2.07ಕ್ಕೆ ಇನ್ನೊಂದು ಸಂದೇಶವು ದಯವಿಟ್ಟು ಸಹಾಯ ಮಾಡಿ ನಾನು ನಿಮಗೆ ತುಂಬಾ ಕೃತಜ್ಞರಾಗಿರುತ್ತೇನೆ, ವಂದನೆಗಳು ಎಂದು ಉಲ್ಲೇಖಿಸಲಾಗಿದೆ. ಮಧ್ಯಾಹ್ನ 2.14ಕ್ಕೆ ಸುಧಾಕರ್ ಮೌದ್ಗಿಲ್ ಅವರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ “9945141601 ಆನಂದ್ ರತ್ಕಲ್” ಎಂದು ಬರೆದಿತ್ತು. ಐಆರ್‌ಎಸ್ ಅಧಿಕಾರಿ ಆನಂದ್ ರತ್ಕಲ್ ಅವರು ಬೆಂಗಳೂರು ನಗರ ಜಿಲ್ಲೆಯ ಐಟಿ ನೋಡಲ್ ಅಧಿಕಾರಿಯಾಗಿದ್ದು, ಇವರೇ ದಾಳಿ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಅವರಿಗೆ ನಗದನ್ನು ಬಿಟ್ಟು ಬಿಡುವಂತೆ ಸೂಚಿಸಲು ಮೌದ್ಗಿಲ್‌ಗೆ ನಂಬರ್ ಕಳುಹಿಸಿದ್ದರು ಎಂದು ಅಂದಾಜಿಸಲಾಗಿದೆ.

ಈ ಕುರಿತು ಅಧಿಕಾರಿಯೋರ್ವರು ಮಾತನಾಡಿದ್ದು, ಚುನಾವಣೆ ವೇಳೆ ನಡೆದ ದಾಳಿಗಳಲ್ಲಿ ಹಣ ಮತ್ತು ಸರಕುಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಗುತ್ತಿಗೆದಾರರು ಅಥವಾ ಇತರರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ನಂತರ ಐಟಿ ಇಲಾಖೆಯು ದಂಡ ಪಾವತಿಸಿದ ನಂತರ ಹಣವನ್ನು ಬಿಡುಗಡೆ ಮಾಡುತ್ತದೆ. ಈ ಪ್ರಕರಣದಲ್ಲೂ ಸುಧಾಕರ್ ಕರೆ ಮಾಡದೆ ಇದ್ದಿದ್ದರೆ ಯಾವ ರಾಜಕಾರಣಿಗೂ ಲಿಂಕ್ ಆಗುತ್ತಿರಲಿಲ್ಲ. ಹಣ ವಶಪಡಿಸಿಕೊಂಡಾಗ ರಾಜಕಾರಣಿಯೊಬ್ಬರು ಕರೆ ಮಾಡಿದರೂ ಇತರ ಹಲವು ಅಧಿಕಾರಿಗಳು ದೂರು ದಾಖಲಿಸದೇ ಇರಬಹುದು, ಆದರೆ ಮೌದ್ಗಿಲ್‌ ಇದನ್ನು ಮಾಡಿದ್ದಾರೆ. ಈಗ ಸುಧಾಕರ್ ಅವರು ಆ ಸಂದೇಶಗಳನ್ನು ಏಕೆ ಕಳುಹಿಸಿದ್ದಾರೆ ಎಂಬುವುದನ್ನು ವಿವರಿಸಬೇಕಿದೆ ಎಂದು ಹೇಳಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸರು ಸುಧಾಕರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 ಇ (ಲಂಚ), 171 ಎಫ್, 171 ಬಿ, 171 ಸಿ (ಚುನಾವಣೆಯಲ್ಲಿ ಅನಗತ್ಯ ಪ್ರಭಾವ) ಮತ್ತು ಸೆಕ್ಷನ್ 123ರಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ಬರಪರಿಹಾರ: ಮೋದಿಗೆ ಶ್ಲಾಘಿಸಿ ಕನ್ನಡಿಗರಿಂದ ಉಗಿಸಿಕೊಂಡ ಬಿಜೆಪಿ ನಾಯಕರು: ರಿಪೋರ್ಟ್ ಓದಿ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...