Homeಮುಖಪುಟದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡುತ್ತಿದ್ದಾರೆ: ಹಿರಿಯ ಐಎಎಸ್ ಅಧಿಕಾರಿ ಆರೋಪ

ದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡುತ್ತಿದ್ದಾರೆ: ಹಿರಿಯ ಐಎಎಸ್ ಅಧಿಕಾರಿ ಆರೋಪ

- Advertisement -
- Advertisement -

ನಾನೋರ್ವ ದಲಿತ ಎಂಬ ಕಾರಣಕ್ಕೆ ನನಗೆ ತಾರತಮ್ಯ ಮಾಡಲಾಗುತ್ತಿದೆ ಮತ್ತು ಬೆದರಿಕೆ ಹಾಕಲಾಗುತ್ತಿದೆ ಎಂದು ಜಮ್ಮು- ಕಾಶ್ಮೀರದ ಹಿರಿಯ ಐಎಎಸ್ ಅಧಿಕಾರಿಯೋರ್ವರು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಆಡಳಿತದ ವಿರುದ್ಧ ಆರೋಪವನ್ನು ಮಾಡಿದ್ದಾರೆ.

ಐಎಎಸ್ ಅಧಿಕಾರಿ ಅಶೋಕ್  ಪರ್ಮಾರ್ ಅವರು 1992ರ ಬ್ಯಾಚ್ ನ ಗುಜರಾತ್ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಜಮ್ಮು ಕಾಶ್ಮೀರದಲ್ಲಿ ಕೆಲಸ ಮಾಡುತ್ತಿದ್ದು, ಕಳೆದ 1 ವರ್ಷದಲ್ಲಿ 5 ಬಾರಿ ವರ್ಗಾವಣೆ ಮಾಡಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

1992ರ ಗುಜರಾತ್ ಮೂಲದ ಐಎಎಸ್ ಅಧಿಕಾರಿ ಅಶೋಕ್ ಪರ್ಮಾರ್ ಅವರು ಜಲ್ ಶಕ್ತಿ ಇಲಾಖೆಯಲ್ಲಿನ ಬೃಹತ್ ಅಕ್ರಮಗಳನ್ನು ಹೊರಗೆಳೆದ ಬಳಿಕ ಅವರಿಗೆ ಜಮ್ಮು-ಕಾಶ್ಮೀರದ ಆಡಳಿತ  ಕಿರುಕುಳ ಮತ್ತು ಬೆದರಿಕೆಯನ್ನು ಹಾಕುತ್ತಿದೆ ಎಂದು ಐಎಎಸ್ ಅಧಿಕಾರಿ  ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮುಂದೆ ದೂರು ದಾಖಲಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪರ್ಮಾರ್ ಅವರನ್ನು ಎರಡು ಉನ್ನತ ಮಟ್ಟದ ಸಭೆಗಳಿಂದ ಹೊರಹಾಕಲಾಯಿತು ಮತ್ತು ಇತರ ಅಧಿಕಾರಿಗಳ ಮುಂದೆ ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರಕಾರದ ನಿಯೋಜನೆಯಲ್ಲಿದ್ದ ಪರ್ಮಾರ್ ಅವರನ್ನು ಮಾರ್ಚ್ 2022ರಲ್ಲಿ AGMUT ಕೇಡರ್‌ಗೆ ನೇಮಿಸಲಾಗಿದೆ. ಬಳಿಕ ಅವರನ್ನು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಯಿತು.

ಮೇ 5  2022 ರಂದು ಅವರನ್ನು ಮತ್ತೆ ವರ್ಗಾಯಿಸಿ ಜಲ್ ಶಕ್ತಿ ಇಲಾಖೆಗೆ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಪರ್ಮಾರ್ ಪ್ರಕಾರ, ಅವರು ಇಲಾಖೆಯಲ್ಲಿನ ಹಗರಣಗಳನ್ನು ಬಯಲಿಗೆಳೆದ ಬಳಿಕ ಅವರನ್ನು ತಿಂಗಳೊಳಗೆ ARI ಮತ್ತು ತರಬೇತಿಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಜುಲೈ 18 ರಂದು ಅವರನ್ನು ಕೌಶಲ್ಯ ಅಭಿವೃದ್ಧಿ ಇಲಾಖೆಗೆ ವರ್ಗಾಯಿಸಲಾಗಿದೆ. ಇದಾದ ಎರಡು ವಾರಗಳಲ್ಲಿ, ಆಗಸ್ಟ್ 1 ರಂದು ಅವರನ್ನು ಮತ್ತೆ ಜಮ್ಮು-ಕಾಶ್ಮೀರದ ಬ್ಯೂರೋ ಆಫ್ ಪಬ್ಲಿಕ್ ಎಂಟರ್‌ಪ್ರೈಸಸ್‌ಗೆ  ಅಧ್ಯಕ್ಷರಾಗಿ ನೇಮಿಸಲಾಗಿದೆ.

ಜಲ ಜೀವನ್ ಯೋಜನೆಯಲ್ಲಿ  3,000 ಕೋಟಿ ನುಂಗಿದವರನ್ನು ಶಿಕ್ಷಿಸುವ ಬದಲು ಪ್ರಾಮಾಣಿಕ ಅಧಿಕಾರಿಯನ್ನು ತೊಂದರೆಗೆ ಒಳಪಡಿಸಲಾಗಿದೆ ಎಂದು ಈ ಬಗ್ಗೆ ಮೊಹಬೂಬ್ ಮುಫ್ತಿ ಎಕ್ಸ್‌(ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ  ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಕುರಿತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ.

 ಇದನ್ನು ಓದಿ: ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...