Homeಮುಖಪುಟಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

- Advertisement -
- Advertisement -

ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಬದಲಾವಣೆಗಳ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಧ್ವನಿ ಎತ್ತಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಗಳನ್ನು ಈಗಾಗಲೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಜನವರಿ 23ರಂದು ತಮ್ಮ ಅಸಮ್ಮತಿಯನ್ನು ಪುನರುಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಒಕ್ಕೂಟ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ ಬರೆದಿದ್ದಾರೆ.

ಈ ಹಿಂದೆ, ರಾಜಸ್ಥಾನದ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢದ ಭೂಪೇಶ್ ಬಾಘೇಲ್ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಕೂಡ ಮೋದಿಯವರಿಗೆ ಪತ್ರ ಬರೆದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ತಿದ್ದುಪಡಿಯನ್ನು ತರಲು ಹೊರಟಿದೆ. ಇದು ರಾಜ್ಯ ಸರ್ಕಾರಗಳ ಮೀಸಲಾತಿಯನ್ನು ತಪ್ಪಿಸಿ ಕೇಂದ್ರದ ಡೆಪ್ಯುಟೇಶನ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲು ಅನುವು ಮಾಡಿಕೊಡುತ್ತದೆ.

ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕರಡು ತಿದ್ದುಪಡಿಗಳ ಬಗ್ಗೆ ತೀವ್ರವಾದ ಕಳವಳವನ್ನು ವ್ಯಕ್ತಪಡಿಸಿದ ಸ್ಟಾಲಿನ್, “ಇದು ನಮ್ಮ ಒಕ್ಕೂಟ ರಾಜಕೀಯ ಮತ್ತು ರಾಜ್ಯಗಳ ಸ್ವಾಯತ್ತತೆಗೆ ಪೆಟ್ಟು ನೀಡುತ್ತದೆ” ಎಂದು ಬರೆದಿದ್ದಾರೆ.

ರಾಜ್ಯ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಗಳು ಮುಂಚೂಣಿಯಲ್ಲಿವೆ. ರಾಜ್ಯಗಳು ಆಗಾಗ್ಗೆ ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತವೆ. ಇತರೆಡೆಗಳಿಗಿಂತ ಹೆಚ್ಚಾಗಿ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಸೇವೆ ಅಗತ್ಯವಿದೆ. ಅಂತಹ ಸಂದರ್ಭಗಳಲ್ಲಿ, ಅಧಿಕಾರಿಗಳನ್ನು ನಿಯೋಜಿಸಲು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುವುದು ಖಂಡಿತವಾಗಿಯೂ ಅಧಿಕಾರಿಗಳ ಕೊರತೆಯಿಂದಾಗಿ ವಿವಿಧ ರಾಜ್ಯಗಳಲ್ಲಿ ‘ಆಡಳಿತ ಕೊರತೆ’ಯನ್ನು ಉಲ್ಬಣಗೊಳಿಸುತ್ತದೆ. ಇದು ರಾಜ್ಯಗಳ ಆಡಳಿತಾತ್ಮಕ ಚೌಕಟ್ಟಿನ ಕೆಲಸಕ್ಕೆ ‘ಅಪಮಾನ’ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಒಕ್ಕೂಟ ರಚನೆಗೆ ಆಗುವ ನಷ್ಟಗಳನ್ನು ಮಮತಾ ಬ್ಯಾನರ್ಜಿಯವರು ತಮ್ಮ ಇತ್ತೀಚಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

“ನಮ್ಮ ಒಕ್ಕೂಟ ರಚನೆಯೊಂದಿಗೆ ಕೇಂದ್ರವು ಹೇಗೆ ಆಟವಾಡಬಹುದು? ಚುನಾಯಿತ ರಾಜ್ಯ ಸರ್ಕಾರಗಳ ಅಭಿಪ್ರಾಯ ಮತ್ತು ಹಕ್ಕುಗಳನ್ನು ಅದು ಹೇಗೆ ತಳ್ಳಿಹಾಕಬಹುದು? ಕೇಂದ್ರವು ಇದನ್ನು ಮಾಡಬಾರದು” ಎಂದು ಬ್ಯಾನರ್ಜಿ ಸಾರ್ವಜನಿಕವಾಗಿ ಆಗ್ರಹಿಸಿದ್ದಾರೆ.

ಈ ತಿದ್ದುಪಡಿಯು ಅಧಿಕಾರಿಗಳಲ್ಲಿ ಭಯದ ಮನೋವಿಕಾರವನ್ನು ಉಂಟುಮಾಡುತ್ತದೆ ಮತ್ತು ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಮೋದಿಯವರಿಗೆ ಹೀಗಾಗಲೇ ಪತ್ರ ಬರೆದಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ “ಭಯದ ಮನೋವಿಕಾರ” ಎಂಬ ಪದವನ್ನು ಬಳಸಿದ್ದಾರೆ.

ಪ್ರಸ್ತುತ ಇರುವ ನಿಯಮಗಳು ಕೇಂದ್ರ ಸರ್ಕಾರದ ಪರವಾಗಿವೆ. ಮತ್ತಷ್ಟು ಕಠಿಣತೆಯನ್ನು ತರುವುದು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕಿರುವಷ್ಟೇ ಸಮಾನತೆ ರಾಜ್ಯಸರ್ಕಾರಕ್ಕೂ ಇದೆ. ಏಕೆಂದರೆ ಎರಡು ಸರ್ಕಾರಗಳು ಕೂಡ ಜನರಿಂದ ಆಯ್ಕೆಯಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...