Homeಮುಖಪುಟಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

- Advertisement -
- Advertisement -

ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಬದಲಾವಣೆಗಳ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಧ್ವನಿ ಎತ್ತಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಗಳನ್ನು ಈಗಾಗಲೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಜನವರಿ 23ರಂದು ತಮ್ಮ ಅಸಮ್ಮತಿಯನ್ನು ಪುನರುಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಒಕ್ಕೂಟ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ ಬರೆದಿದ್ದಾರೆ.

ಈ ಹಿಂದೆ, ರಾಜಸ್ಥಾನದ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢದ ಭೂಪೇಶ್ ಬಾಘೇಲ್ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಕೂಡ ಮೋದಿಯವರಿಗೆ ಪತ್ರ ಬರೆದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ತಿದ್ದುಪಡಿಯನ್ನು ತರಲು ಹೊರಟಿದೆ. ಇದು ರಾಜ್ಯ ಸರ್ಕಾರಗಳ ಮೀಸಲಾತಿಯನ್ನು ತಪ್ಪಿಸಿ ಕೇಂದ್ರದ ಡೆಪ್ಯುಟೇಶನ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲು ಅನುವು ಮಾಡಿಕೊಡುತ್ತದೆ.

ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕರಡು ತಿದ್ದುಪಡಿಗಳ ಬಗ್ಗೆ ತೀವ್ರವಾದ ಕಳವಳವನ್ನು ವ್ಯಕ್ತಪಡಿಸಿದ ಸ್ಟಾಲಿನ್, “ಇದು ನಮ್ಮ ಒಕ್ಕೂಟ ರಾಜಕೀಯ ಮತ್ತು ರಾಜ್ಯಗಳ ಸ್ವಾಯತ್ತತೆಗೆ ಪೆಟ್ಟು ನೀಡುತ್ತದೆ” ಎಂದು ಬರೆದಿದ್ದಾರೆ.

ರಾಜ್ಯ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಗಳು ಮುಂಚೂಣಿಯಲ್ಲಿವೆ. ರಾಜ್ಯಗಳು ಆಗಾಗ್ಗೆ ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತವೆ. ಇತರೆಡೆಗಳಿಗಿಂತ ಹೆಚ್ಚಾಗಿ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಸೇವೆ ಅಗತ್ಯವಿದೆ. ಅಂತಹ ಸಂದರ್ಭಗಳಲ್ಲಿ, ಅಧಿಕಾರಿಗಳನ್ನು ನಿಯೋಜಿಸಲು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುವುದು ಖಂಡಿತವಾಗಿಯೂ ಅಧಿಕಾರಿಗಳ ಕೊರತೆಯಿಂದಾಗಿ ವಿವಿಧ ರಾಜ್ಯಗಳಲ್ಲಿ ‘ಆಡಳಿತ ಕೊರತೆ’ಯನ್ನು ಉಲ್ಬಣಗೊಳಿಸುತ್ತದೆ. ಇದು ರಾಜ್ಯಗಳ ಆಡಳಿತಾತ್ಮಕ ಚೌಕಟ್ಟಿನ ಕೆಲಸಕ್ಕೆ ‘ಅಪಮಾನ’ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಒಕ್ಕೂಟ ರಚನೆಗೆ ಆಗುವ ನಷ್ಟಗಳನ್ನು ಮಮತಾ ಬ್ಯಾನರ್ಜಿಯವರು ತಮ್ಮ ಇತ್ತೀಚಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

“ನಮ್ಮ ಒಕ್ಕೂಟ ರಚನೆಯೊಂದಿಗೆ ಕೇಂದ್ರವು ಹೇಗೆ ಆಟವಾಡಬಹುದು? ಚುನಾಯಿತ ರಾಜ್ಯ ಸರ್ಕಾರಗಳ ಅಭಿಪ್ರಾಯ ಮತ್ತು ಹಕ್ಕುಗಳನ್ನು ಅದು ಹೇಗೆ ತಳ್ಳಿಹಾಕಬಹುದು? ಕೇಂದ್ರವು ಇದನ್ನು ಮಾಡಬಾರದು” ಎಂದು ಬ್ಯಾನರ್ಜಿ ಸಾರ್ವಜನಿಕವಾಗಿ ಆಗ್ರಹಿಸಿದ್ದಾರೆ.

ಈ ತಿದ್ದುಪಡಿಯು ಅಧಿಕಾರಿಗಳಲ್ಲಿ ಭಯದ ಮನೋವಿಕಾರವನ್ನು ಉಂಟುಮಾಡುತ್ತದೆ ಮತ್ತು ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಮೋದಿಯವರಿಗೆ ಹೀಗಾಗಲೇ ಪತ್ರ ಬರೆದಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ “ಭಯದ ಮನೋವಿಕಾರ” ಎಂಬ ಪದವನ್ನು ಬಳಸಿದ್ದಾರೆ.

ಪ್ರಸ್ತುತ ಇರುವ ನಿಯಮಗಳು ಕೇಂದ್ರ ಸರ್ಕಾರದ ಪರವಾಗಿವೆ. ಮತ್ತಷ್ಟು ಕಠಿಣತೆಯನ್ನು ತರುವುದು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕಿರುವಷ್ಟೇ ಸಮಾನತೆ ರಾಜ್ಯಸರ್ಕಾರಕ್ಕೂ ಇದೆ. ಏಕೆಂದರೆ ಎರಡು ಸರ್ಕಾರಗಳು ಕೂಡ ಜನರಿಂದ ಆಯ್ಕೆಯಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...