Homeಮುಖಪುಟಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 16) ಎರಡು ಮಾಧ್ಯಮ ಸಂಸ್ಥೆಗಳು ಮತ್ತು ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅದಾನಿ ಸಮೂಹವನ್ನು ಉಲ್ಲೇಖಿಸುವ ಒಟ್ಟು 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.

ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 6ರಂದು ಹೊರಡಿಸಿದ ಏಕಪಕ್ಷೀಯ ಆದೇಶವನ್ನು ಆಧರಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಮಂಗಳವಾರ ಬರೆದ ಪತ್ರದಲ್ಲಿ ಸಚಿವಾಲಯ ತಿಳಿಸಿರುವುದಾಗಿ ದಿ ವೈರ್ ವರದಿ ಮಾಡಿದೆ.

ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ಸೆಪ್ಟೆಂಬರ್ 6ರಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ ಎಂದು ಲೈವ್‌ಲಾ ವರದಿ ಮಾಡಿತ್ತು.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ ಎಂದಿತ್ತು.

ಈ ಪ್ರಕರಣದಲ್ಲಿ ನ್ಯಾಯಾಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಒಂದು ಪ್ರಕರಣದಲ್ಲಿ ಪ್ರತಿವಾದಿಗಳ ವಾದವನ್ನು ಆಲಿಸದೆ ಹೊರಡಿಸುವ ಆದೇಶವನ್ನು ಏಕಪಕ್ಷೀಯ ಆದೇಶ ಎನ್ನಲಾಗುತ್ತದೆ. ಈ ಪ್ರಕರಣದಲ್ಲಿ ನ್ಯಾಯಾಲಯ ಪತ್ರಕರ್ತರು ಮತ್ತು ಹೋರಾಟಗಾರರ ವಾದಗಳನ್ನು ಆಲಿಸಿಲ್ಲ.

ಗಮನಾರ್ಹವಾಗಿ, ಮಂಗಳವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ನೋಟಿಸ್ ಪಡೆದವರು ಈ ಪ್ರಕರಣದಲ್ಲಿ ಕಕ್ಷಿದಾರರಲ್ಲ ಎಂದು ವೈರ್ ಹೇಳಿದೆ.

ಅದಾನಿ ಗ್ರೂಪ್ ವಿರುದ್ಧ ಯುಎಸ್ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ಮಾಡಿರುವ ಆರೋಪಗಳನ್ನು ಉಲ್ಲೇಖಿಸುವ ಒಂದೇ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಾಗಿ ದಿ ವೈರ್‌ಗೆ ಮಂಗಳವಾರ ನೋಟಿಸ್ ನೀಡಲಾಗಿದೆ, ಇದು ದಾಖಲೆಯ ವಿಷಯವಾಗಿದೆ ಎಂದು ವರದಿ ತಿಳಿಸಿದೆ.

ಅದಾನಿ ಕುರಿತ ಲೇಖನಗಳು ಮತ್ತು ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ನ್ಯೂಸ್ ಲಾಂಡ್ರಿ, ರವೀಶ್ ಕುಮಾರ್, ಅಜಿತ್ ಅಂಜುಮ್, ಧ್ರುವ್ ರಾಠಿ, ಆಕಾಶ್ ಬ್ಯಾನರ್ಜಿ ಅಕಾ ದೇಶಭಕ್ತ್ ಮತ್ತು ಇತರಿಗೂ ಸಚಿವಾಲಯ ನೋಟಿಸ್ ನೀಡಿದೆ.

ತೆಗೆದು ಹಾಕಲು ಉಲ್ಲೇಖಿಸಿದ ಹಲವಾರು ವಿಡಿಯೋಗಳು ಯಾವುದೇ ಹೊಸ ವರದಿ ಅಥವಾ ಅಭಿಪ್ರಾಯವನ್ನು ಒಳಗೊಂಡಿರಲಿಲ್ಲ. ಉದಾಹರಣೆಗೆ, ಪಟ್ಟಿ ಮಾಡಲಾದ ನ್ಯೂಸ್‌ಲಾಂಡ್ರಿ ವಿಡಿಯೋಗಳಲ್ಲಿ ಒಂದು ಚಂದಾದಾರಿಕೆ ಮನವಿಯಾಗಿದ್ದು ಅದು ಅದಾನಿ ಗುಂಪಿನ ಬಗೆಗಿನ ಲೇಖನದ ಸ್ಕ್ರೀನ್‌ಶಾಟ್ ಅನ್ನು ಮಾತ್ರ ಒಳಗೊಂಡಿದೆ ಎಂದು ವೈರ್ ಹೇಳಿದೆ.

ನ್ಯಾಯಾಲಯದ ಆದೇಶದ ಪ್ರಕಾರ ನಿಗದಿತ ಸಮಯದೊಳಗೆ ಕ್ರಮ ಕೈಗೊಳ್ಳಲು ಮಾಧ್ಯಮ ಸಂಸ್ಥೆಗಳು ವಿಫಲವಾಗಿವೆ ಎಂದು ಸಚಿವಾಲಯದ ಪತ್ರದಲ್ಲಿ ಉಲ್ಲೇಖಿಸಿದೆ.

“ಹಾಗಾಗಿ, ಮೇಲೆ ತಿಳಿಸಲಾದ ಆದೇಶದ ಅನುಸರಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಈ ನೋಟಿಸ್ ತಲುಪಿದ 36 ಗಂಟೆಗಳ ಒಳಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಸಚಿವಾಲಯಕ್ಕೆ ತಿಳಿಸಲು ನಿಮಗೆ ನಿರ್ದೇಶಿಸಲಾಗಿದೆ” ಎಂದು ಹೇಳಲಾಗಿದೆ.

ನೋಟಿಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್ಸ್ ಮತ್ತು ಗೂಗಲ್‌ ಸಂಸ್ಥೆಯನ್ನೂ ಗುರುತಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ನ್ಯಾಯಾಧೀಶರು ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸದ ಕಾರಣ ಸೆಪ್ಟೆಂಬರ್ 6ರ ಆದೇಶವನ್ನು ಪ್ರಶ್ನಿಸಲಾಗಿತ್ತು. ಆ ಸಮಯದಲ್ಲಿ, ಹಿರಿಯ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು, ಪ್ರಕರಣವು ಏಕಪಕ್ಷೀಯ ಆದೇಶ ನೀಡಲು ಸೂಕ್ತವಾಗಿದೆ ಎಂದು ನಾನು ಪರಿಶೀಲಿಸಿದ್ದೇನೆ. ಆದಾಗ್ಯೂ, ‘ನ್ಯಾಯಯುತ, ಪರಿಶೀಲಿಸಿದ ಮತ್ತು ಸಮರ್ಥನೀಯ ವರದಿ ಮಾಡುವಿಕೆಯಿಂದ ಮತ್ತು ಅಂತಹ ಲೇಖನಗಳು, ಪೋಸ್ಟ್‌ಗಳು ಅಥವಾ ವೆಬ್‌ಪುಟ ಲಿಂಕ್‌ಗಳನ್ನು ಹೋಸ್ಟ್ ಮಾಡುವುದು, ಸಂಗ್ರಹಿಸುವುದು ಅಥವಾ ಪ್ರಸಾರ ಮಾಡುವುದರಿಂದ ಪ್ರತಿವಾದಿಗಳನ್ನು ನಿರ್ಬಂಧಿಸುವ ಸಂಪೂರ್ಣ ಆದೇಶವನ್ನು ತಾನು ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಸಚಿವಾಲಯದ ನೋಟಿಸ್ ಕುರಿತು ಪ್ರತಿಕ್ರಿಯಿಸಿದ ಪತ್ರಕರ್ತ ಪರಂಜೋಯ್ ಗುಹಾ ಠಾಕೂರ್ತಾ, ಅದಾನಿ ಸಮೂಹ ತನ್ನ ವಿರುದ್ಧ ಹೂಡಿರುವ ಏಳು ಮಾನನಷ್ಟ ಮೊಕದ್ದಮೆಗಳ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವುದನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ನನಗೆ ಭಾರತದ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ನಾನು ಬರೆದಿರುವ ಅಥವಾ ಸಹ-ಲೇಖಕನಾಗಿರುವ ಎಲ್ಲಾ ಲೇಖನಗಳು ಮತ್ತು ನಾನು ನೀಡಿರುವ ಎಲ್ಲಾ ಹೇಳಿಕೆಗಳು ಸತ್ಯ, ನಿಖರ ಮಾತ್ರವಲ್ಲದೆ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿವೆ ಎಂಬ ವಿಶ್ವಾಸ ನನಗಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ನನ್ನ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಗಳನ್ನು ನಾನು ತೀವ್ರವಾಗಿ ವಿರೋಧಿಸಲು ಉದ್ದೇಶಿಸಿದ್ದೇನೆ ಮತ್ತು ಸಾಧ್ಯವಾದಷ್ಟು ಬೇಗ ನ್ಯಾಯಾಲಯದ ಮುಂದೆ ನನ್ನ ವಾದಗಳನ್ನು ಮಂಡಿಸುತ್ತೇನೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...