Homeಮುಖಪುಟಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

- Advertisement -
- Advertisement -

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 16) ಎರಡು ಮಾಧ್ಯಮ ಸಂಸ್ಥೆಗಳು ಮತ್ತು ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಅದಾನಿ ಸಮೂಹವನ್ನು ಉಲ್ಲೇಖಿಸುವ ಒಟ್ಟು 138 ವಿಡಿಯೋಗಳು ಮತ್ತು 83 ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.

ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಾಯುವ್ಯ ದೆಹಲಿ ಜಿಲ್ಲಾ ನ್ಯಾಯಾಲಯವು ಸೆಪ್ಟೆಂಬರ್ 6ರಂದು ಹೊರಡಿಸಿದ ಏಕಪಕ್ಷೀಯ ಆದೇಶವನ್ನು ಆಧರಿಸಿ ಈ ನಿರ್ದೇಶನ ನೀಡಲಾಗಿದೆ ಎಂದು ಮಂಗಳವಾರ ಬರೆದ ಪತ್ರದಲ್ಲಿ ಸಚಿವಾಲಯ ತಿಳಿಸಿರುವುದಾಗಿ ದಿ ವೈರ್ ವರದಿ ಮಾಡಿದೆ.

ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ಸೆಪ್ಟೆಂಬರ್ 6ರಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ ಎಂದು ಲೈವ್‌ಲಾ ವರದಿ ಮಾಡಿತ್ತು.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ ಎಂದಿತ್ತು.

ಈ ಪ್ರಕರಣದಲ್ಲಿ ನ್ಯಾಯಾಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಒಂದು ಪ್ರಕರಣದಲ್ಲಿ ಪ್ರತಿವಾದಿಗಳ ವಾದವನ್ನು ಆಲಿಸದೆ ಹೊರಡಿಸುವ ಆದೇಶವನ್ನು ಏಕಪಕ್ಷೀಯ ಆದೇಶ ಎನ್ನಲಾಗುತ್ತದೆ. ಈ ಪ್ರಕರಣದಲ್ಲಿ ನ್ಯಾಯಾಲಯ ಪತ್ರಕರ್ತರು ಮತ್ತು ಹೋರಾಟಗಾರರ ವಾದಗಳನ್ನು ಆಲಿಸಿಲ್ಲ.

ಗಮನಾರ್ಹವಾಗಿ, ಮಂಗಳವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ನೋಟಿಸ್ ಪಡೆದವರು ಈ ಪ್ರಕರಣದಲ್ಲಿ ಕಕ್ಷಿದಾರರಲ್ಲ ಎಂದು ವೈರ್ ಹೇಳಿದೆ.

ಅದಾನಿ ಗ್ರೂಪ್ ವಿರುದ್ಧ ಯುಎಸ್ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ಮಾಡಿರುವ ಆರೋಪಗಳನ್ನು ಉಲ್ಲೇಖಿಸುವ ಒಂದೇ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಾಗಿ ದಿ ವೈರ್‌ಗೆ ಮಂಗಳವಾರ ನೋಟಿಸ್ ನೀಡಲಾಗಿದೆ, ಇದು ದಾಖಲೆಯ ವಿಷಯವಾಗಿದೆ ಎಂದು ವರದಿ ತಿಳಿಸಿದೆ.

ಅದಾನಿ ಕುರಿತ ಲೇಖನಗಳು ಮತ್ತು ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ನ್ಯೂಸ್ ಲಾಂಡ್ರಿ, ರವೀಶ್ ಕುಮಾರ್, ಅಜಿತ್ ಅಂಜುಮ್, ಧ್ರುವ್ ರಾಠಿ, ಆಕಾಶ್ ಬ್ಯಾನರ್ಜಿ ಅಕಾ ದೇಶಭಕ್ತ್ ಮತ್ತು ಇತರಿಗೂ ಸಚಿವಾಲಯ ನೋಟಿಸ್ ನೀಡಿದೆ.

ತೆಗೆದು ಹಾಕಲು ಉಲ್ಲೇಖಿಸಿದ ಹಲವಾರು ವಿಡಿಯೋಗಳು ಯಾವುದೇ ಹೊಸ ವರದಿ ಅಥವಾ ಅಭಿಪ್ರಾಯವನ್ನು ಒಳಗೊಂಡಿರಲಿಲ್ಲ. ಉದಾಹರಣೆಗೆ, ಪಟ್ಟಿ ಮಾಡಲಾದ ನ್ಯೂಸ್‌ಲಾಂಡ್ರಿ ವಿಡಿಯೋಗಳಲ್ಲಿ ಒಂದು ಚಂದಾದಾರಿಕೆ ಮನವಿಯಾಗಿದ್ದು ಅದು ಅದಾನಿ ಗುಂಪಿನ ಬಗೆಗಿನ ಲೇಖನದ ಸ್ಕ್ರೀನ್‌ಶಾಟ್ ಅನ್ನು ಮಾತ್ರ ಒಳಗೊಂಡಿದೆ ಎಂದು ವೈರ್ ಹೇಳಿದೆ.

ನ್ಯಾಯಾಲಯದ ಆದೇಶದ ಪ್ರಕಾರ ನಿಗದಿತ ಸಮಯದೊಳಗೆ ಕ್ರಮ ಕೈಗೊಳ್ಳಲು ಮಾಧ್ಯಮ ಸಂಸ್ಥೆಗಳು ವಿಫಲವಾಗಿವೆ ಎಂದು ಸಚಿವಾಲಯದ ಪತ್ರದಲ್ಲಿ ಉಲ್ಲೇಖಿಸಿದೆ.

“ಹಾಗಾಗಿ, ಮೇಲೆ ತಿಳಿಸಲಾದ ಆದೇಶದ ಅನುಸರಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಈ ನೋಟಿಸ್ ತಲುಪಿದ 36 ಗಂಟೆಗಳ ಒಳಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಸಚಿವಾಲಯಕ್ಕೆ ತಿಳಿಸಲು ನಿಮಗೆ ನಿರ್ದೇಶಿಸಲಾಗಿದೆ” ಎಂದು ಹೇಳಲಾಗಿದೆ.

ನೋಟಿಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್ಸ್ ಮತ್ತು ಗೂಗಲ್‌ ಸಂಸ್ಥೆಯನ್ನೂ ಗುರುತಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ನ್ಯಾಯಾಧೀಶರು ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸದ ಕಾರಣ ಸೆಪ್ಟೆಂಬರ್ 6ರ ಆದೇಶವನ್ನು ಪ್ರಶ್ನಿಸಲಾಗಿತ್ತು. ಆ ಸಮಯದಲ್ಲಿ, ಹಿರಿಯ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು, ಪ್ರಕರಣವು ಏಕಪಕ್ಷೀಯ ಆದೇಶ ನೀಡಲು ಸೂಕ್ತವಾಗಿದೆ ಎಂದು ನಾನು ಪರಿಶೀಲಿಸಿದ್ದೇನೆ. ಆದಾಗ್ಯೂ, ‘ನ್ಯಾಯಯುತ, ಪರಿಶೀಲಿಸಿದ ಮತ್ತು ಸಮರ್ಥನೀಯ ವರದಿ ಮಾಡುವಿಕೆಯಿಂದ ಮತ್ತು ಅಂತಹ ಲೇಖನಗಳು, ಪೋಸ್ಟ್‌ಗಳು ಅಥವಾ ವೆಬ್‌ಪುಟ ಲಿಂಕ್‌ಗಳನ್ನು ಹೋಸ್ಟ್ ಮಾಡುವುದು, ಸಂಗ್ರಹಿಸುವುದು ಅಥವಾ ಪ್ರಸಾರ ಮಾಡುವುದರಿಂದ ಪ್ರತಿವಾದಿಗಳನ್ನು ನಿರ್ಬಂಧಿಸುವ ಸಂಪೂರ್ಣ ಆದೇಶವನ್ನು ತಾನು ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಸಚಿವಾಲಯದ ನೋಟಿಸ್ ಕುರಿತು ಪ್ರತಿಕ್ರಿಯಿಸಿದ ಪತ್ರಕರ್ತ ಪರಂಜೋಯ್ ಗುಹಾ ಠಾಕೂರ್ತಾ, ಅದಾನಿ ಸಮೂಹ ತನ್ನ ವಿರುದ್ಧ ಹೂಡಿರುವ ಏಳು ಮಾನನಷ್ಟ ಮೊಕದ್ದಮೆಗಳ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವುದನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ ಎಂದು ದಿ ವೈರ್ ಹೇಳಿದೆ.

“ನನಗೆ ಭಾರತದ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ನಾನು ಬರೆದಿರುವ ಅಥವಾ ಸಹ-ಲೇಖಕನಾಗಿರುವ ಎಲ್ಲಾ ಲೇಖನಗಳು ಮತ್ತು ನಾನು ನೀಡಿರುವ ಎಲ್ಲಾ ಹೇಳಿಕೆಗಳು ಸತ್ಯ, ನಿಖರ ಮಾತ್ರವಲ್ಲದೆ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿವೆ ಎಂಬ ವಿಶ್ವಾಸ ನನಗಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ನನ್ನ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಗಳನ್ನು ನಾನು ತೀವ್ರವಾಗಿ ವಿರೋಧಿಸಲು ಉದ್ದೇಶಿಸಿದ್ದೇನೆ ಮತ್ತು ಸಾಧ್ಯವಾದಷ್ಟು ಬೇಗ ನ್ಯಾಯಾಲಯದ ಮುಂದೆ ನನ್ನ ವಾದಗಳನ್ನು ಮಂಡಿಸುತ್ತೇನೆ” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...