Homeಕರ್ನಾಟಕಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

ಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಐಬಿಪಿಎಸ್‌ ನಡೆಸುವ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಹುದ್ದೆಗಳನ್ನು ಖಾಲಿ ಇಲ್ಲ, ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸಿ ಎಂದು ಆಗ್ರಹಿಸಿದ್ದಾರೆ.

’ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

’ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ’ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

’2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ’ ಎಂದು ಟ್ವೀಟ್ ಮಾಡಿದ್ದಾರೆ.

’ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

’ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ.  ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ’ ಎಂದು ಆಗ್ರಹಿಸಿದ್ದಾರೆ.

’ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಬೇಡಿಕೆಯಿಟ್ಟಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....