Homeಮುಖಪುಟಭಾರತದ ರಂಗಭೂಮಿಯಲ್ಲಿ ಕ್ರಾಂತಿ ಸೃಷ್ಟಿಸಿದ ಇಬ್ರಾಹಿಂ ಅಲ್ಕಾಜಿ ಇನ್ನಿಲ್ಲ!

ಭಾರತದ ರಂಗಭೂಮಿಯಲ್ಲಿ ಕ್ರಾಂತಿ ಸೃಷ್ಟಿಸಿದ ಇಬ್ರಾಹಿಂ ಅಲ್ಕಾಜಿ ಇನ್ನಿಲ್ಲ!

ಭಾರತದಲ್ಲಿ ರಂಗಭೂಮಿಯಲ್ಲಿ ಕ್ರಾಂತಿಸೃಷ್ಟಿಸಿದ ಕೀರ್ತಿಗೆ ಪಾತ್ರರಾದ ಅಲ್ಕಾಜಿ, 1940 ಮತ್ತು 1950 ರ ದಶಕಗಳಲ್ಲಿ ಮುಂಬೈನ ಪ್ರಮುಖ ನಾಟಕ ಕಲಾವಿದರಲ್ಲಿ ಒಬ್ಬರಾಗಿದ್ದರು.

- Advertisement -
- Advertisement -

ರಂಗಭೂಮಿಯ ದಂತಕಥೆ ಇಬ್ರಾಹಿಂ ಅಲ್ಕಾಜಿ (95) ಇಂದು ನಿಧನರಾಗಿದ್ದಾರೆ ಅವರು ನವದೆಹಲಿಯ ಎಸ್ಕೋರ್ಟ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಮಗ ಮತ್ತು ರಂಗ ನಿರ್ದೇಶಕ ಫೀಸಲ್ ಅಲ್ಕಾಜಿ ತಿಳಿಸಿದ್ದಾರೆ.

ಭಾರತದಲ್ಲಿ ರಂಗಭೂಮಿಯಲ್ಲಿ ಕ್ರಾಂತಿಸೃಷ್ಟಿಸಿದ ಕೀರ್ತಿಗೆ ಪಾತ್ರರಾದ ಅಲ್ಕಾಜಿ, 1940 ಮತ್ತು 1950 ರ ದಶಕಗಳಲ್ಲಿ ಮುಂಬೈನ ಪ್ರಮುಖ ನಾಟಕ ಕಲಾವಿದರಲ್ಲಿ ಒಬ್ಬರಾಗಿದ್ದರು.

37 ನೇ ವಯಸ್ಸಿನಲ್ಲಿ ಅಲ್ಕಾಜಿ ದೆಹಲಿಗೆ ತೆರಳಿ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ (ಎನ್‌ಎಸ್‌ಡಿ) ಯ ನಿರ್ದೇಶಕರಾಗಿ ಮುಂದಿನ 15 ವರ್ಷಗಳವರೆಗೆ (1962 ರಿಂದ 1977 ರವರೆಗೆ) ಸೇವೆ ಸಲ್ಲಿಸಿದ್ದರು.

ಸಂಸ್ಥೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಅವಧಿಗೆ ನಿರ್ದೇಶಕರ ಹುದ್ದೆ ಅಲಂಕರಿಸಿದವರು ಇವರು ಮಾತ್ರ.

ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ನಿರ್ದೇಶಕರಾಗಿ, ಅವರು ಆಧುನಿಕ ಭಾರತೀಯ ರಂಗಭೂಮಿಯ ಹೊಸ ಕೋರ್ಸ್ ಅನ್ನು ರೂಪಿಸಿದರು. ಸಾಂಪ್ರದಾಯಿಕ ಶಬ್ದಕೋಶ ಮತ್ತು ಆಧುನಿಕ ಭಾಷಾ ವೈಶಿಷ್ಟ್ಯದ ನಡುವೆ ಸಂಪರ್ಕವನ್ನು ಸ್ಥಾಪಿಸಿದರು.

ಭಾರತದ ರಂಗಭೂಮಿಯಲ್ಲಿ ಕ್ರಾಂತಿ ಸೃಷ್ಟಿಸಿದ ಇಬ್ರಾಹಿಂ ಅಲ್ಕಾಜಿ ಇನ್ನಿಲ್ಲ!

ಅಲ್ಕಾಜಿ ಬಾಂಬೆಯಲ್ಲಿ ಗ್ರೀಕ್ ದುರಂತ ನಾಟಕಕಾರರು, ಶೇಕ್ಸ್‌ಪಿಯರ್, ಹೆನ್ರಿಕ್ ಇಬ್ಸೆನ್, ಚೆಕೊವ್ ಮತ್ತು ಆಗಸ್ಟ್ ಸ್ಟ್ರಿಂಡ್‌ಬರ್ಗ್‌ರ ಪ್ರಬಲ ಚಿತ್ರಣಗಳನ್ನು ಮಾಡಿದರು.

50 ನೇ ವಯಸ್ಸಿನಲ್ಲಿ, ಅಲ್ಕಾಜಿ ಎನ್‌ಎಸ್‌ಡಿ ಮತ್ತು ರಂಗಮಂದಿರವನ್ನು ತೊರೆದು, ತನ್ನ ಹೆಂಡತಿಯೊಂದಿಗೆ ಸೇರಿ ಗ್ಯಾಲರಿಯ ಆರ್ಟ್ ಹೆರಿಟೇಜ್ ಅನ್ನು ನವದೆಹಲಿಯಲ್ಲಿ ಸ್ಥಾಪಿಸಿದರು. ಇಲ್ಲಿ ಅವರ ಕಲೆ, ಛಾಯಾಚಿತ್ರಗಳು ಮತ್ತು ಪುಸ್ತಕಗಳ ಸಂಗ್ರಹವನ್ನು ಮಾಡಿದ್ದರು.

ಹಲವರಿಗೆ ತಿಳಿಯದ ಸಂಗತಿಯೆಂದರೆ, ಅಲ್ಕಾಜಿ ಒಬ್ಬ ಪ್ರಸಿದ್ಧ ಕಲಾ ಅಭಿಜ್ಞ ಮತ್ತು ಸಂಗ್ರಾಹಕ. ಅವರು ಪ್ರಗತಿಪರ ಕಲಾವಿದರ ಗುಂಪಿನ ಸದಸ್ಯರಾದ ಎಫ್.ಎನ್.ಸೋಜಾ, ಅಕ್ಬರ್ ಪದಮ್ಸೀ ಮತ್ತು ಎಂ.ಎಫ್. ಹುಸೇನ್ ಅವರೊಂದಿಗೆ ಆಪ್ತರಾಗಿದ್ದರು. ಕೆಲವರು ಅವರ ನಾಟಕಗಳಿಗೆ ಸೆಟ್‌ಗಳನ್ನು ವಿನ್ಯಾಸಗೊಳಿಸಿದರು.

ಸೌದಿ ಅರೇಬಿಯಾದ ಶ್ರೀಮಂತ ತಂದೆ ಮತ್ತು ಕುವೈತ್ ತಾಯಿಗೆ ಜನಿಸಿದ ಅಲ್ಕಾಜಿ, ಪುಣೆಯಲ್ಲಿ ಆರಾಮದಾಯಕ ಬಾಲ್ಯವನ್ನು ಹೊಂದಿದ್ದ ಒಂಬತ್ತು ಸಹೋದರರನ್ನು ಹೊದಿದ್ದರು.

ವಿಭಜನೆಯ ನಂತರ, ಅವರ ಕುಟುಂಬದ ಉಳಿದವರು ಪಾಕಿಸ್ತಾನಕ್ಕೆ ತೆರಳಿದಾಗ, ಅಲ್ಕಾಜಿ ಭಾರತದಲ್ಲಿ ಉಳಿಯಲು ನಿರ್ಧರಿಸಿದರು.

ಲಲಿತಕಲೆ ಮತ್ತು ರಂಗಭೂಮಿಯಲ್ಲಿ ಆಸಕ್ತಿ ಹೊಂದಿದ್ದ ಅವರು, ಮುಂಬೈನ ಸೇಂಟ್ ಕ್ಸೇವಿಯರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿ ಸುಲ್ತಾನ್ ಬಾಬಿ ಪದಮ್‌ಸೀಯವರ ಥಿಯೇಟರ್ ಗ್ರೂಪ್ ಕಂಪನಿಗೆ ಸೇರಿದರು.

ಅವರು ಕಲೆಯನ್ನು ಮುಂದುವರಿಯಲು 1940 ರ ಉತ್ತರಾರ್ಧದಲ್ಲಿ ಲಂಡನ್‌ಗೆ ತೆರಳಿದ್ದರೂ, ಅಂತಿಮವಾಗಿ ಅವರು ರಾಯಲ್ ಅಕಾಡೆಮಿ ಆಫ್ ಡ್ರಾಮಾಟಿಕ್ ಆರ್ಟ್ಸ್‌ಗೆ ಸೇರಿದ್ದರು.


ಇದನ್ನೂ ಓದಿ: 15 ಲಕ್ಷ ಇಟಾಲಿಯನ್ನರು ಕೊರೊನಾ ವೈರಸ್ ಹೊಂದಿದ್ದರು ಎಂದ ’ಆಂಟಿಬಾಡಿ ಟೆಸ್ಟ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...