Homeಅಂತರಾಷ್ಟ್ರೀಯಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಮ್ ರೈಸಿ ಆಯ್ಕೆ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಭಿನಂದನೆ

ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಮ್ ರೈಸಿ ಆಯ್ಕೆ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಅಭಿನಂದನೆ

ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ, 2019 ರಿಂದ ಇರಾನ್‌ನ ನ್ಯಾಯಂಗದ ಮುಖ್ಯಸ್ಥರಾಗಿದ್ದಾಗ ಅನೇಕ ಏಕಪಕ್ಷೀಯ ತನಿಖೆ, ಕಗ್ಗೊಲೆಗಳನ್ನು ನಡೆಸಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.

- Advertisement -
- Advertisement -

ಇಸ್ರೇಲ್ ನಲ್ಲಿ ನಡೆದ ರಾಷ್ಟ್ರೀಯ ಚುನಾವಣೆಯಲ್ಲಿ ಇಬ್ರಾಹಿಂ ರೈಸಿ ಅವರು ಇರಾನ್ ರೈಸಿ ಅವರು ದೇಶದ ಅಧ್ಯಕ್ರರಾಗಿ ಆಯ್ಕೆಗೊಂಡಿದ್ದಾರೆ. ಆ ಮೂಲಕ ಹಿಂದಿನ ಅಧ್ಯಕ್ಷ ಹಸನ್ ರುಬಾನಿ ಅವರ 8 ವರ್ಷಗಳ ಆಡಳಿತಕ್ಕೆ ತೆರೆಬಿದ್ದಿದೆ. ಇಬ್ರಾಹಿಮ್ ರೈಸಿ ಅವರು ಇರಾನ್‌ನ ಶಿಯಾ ಪಂಗಡಕ್ಕೆ ಸೇರಿದ್ದು ಅಲ್ಲಿನ ಕನ್ಸರ್ವೇಟಿವ್ ಪತ್ರಿಕೆ ರೈಸಿ ಅವರ ಆಯ್ಕೆಯನ್ನು ‘ನ್ಯೂ ಎರಾ ಆಫ್ ಇರಾನ್’ ಎಂದು ಕೊಂಡಾಡಿದೆ. ಇಬ್ರಾಹಿಮ್ ರೈಸಿ ಅವರು ತೀವ್ರ ಸಂಪ್ರದಾಯವಾದಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಇಬ್ರಾಹಿಂ ರೈಸಿ ಅವರು ಇರಾನ್‌ನ ಸುಪ್ರೀಂ ಲೀಡರ್ 81 ವರ್ಷದ ಆಯತುಲ್ಲಾ ಅಲಿ ಖಮನೇಯಿ ಅವರ ಗುಂಪಿಗೆ ಸೇರಿದವರಾಗಿದ್ದಾರೆ. ಈ ಹಿಂದೆ ಇಬ್ರಾಹಿಂ ರೈಸಿ ಅವರು ಇರಾನ್‌ನ ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇರಾನ್ ಚುನಾವಣೆಯಲ್ಲಿ ಚಲಾವಣೆಯಾದ 62 ಪ್ರತಿಶತ ಮತವನ್ನು ಪಡೆದು ರೈಸಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಹಿಂದಿನ ಅಧ್ಯಕ್ಷ ಹುಸೇನ್ ರುಬಾನಿ ಅವರಿಂದ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.

ಇರಾನ್‌ನ ನೂತನ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಭಾರತ ಮತ್ತು ಇರಾನ್ ದೀರ್ಘಕಾಲದ ಸ್ನೇಹಿತರಾಗಿದ್ದು ದ್ವಿಪಕ್ಷೀಯ  ಸಂಬಂಧವನ್ನು ಇನ್ನಷ್ಟು ವೃದ್ಧಿಸುವ ವಿಶ್ವಾಸವನ್ನು ಪ್ರಧಾನಿಗಳು ವ್ಯಕ್ತಪಡಿಸಿದ್ದಾರೆ. ಇರಾನ್ ಭಾರತದ ಅತ್ಯಂತ ಆಪ್ತ ರಾಷ್ಟ್ರವಾಗಿದ್ದು ಇರಾನ್‌ನ ಹೊಸ ಸರ್ಕಾರದ ಜೊತೆ ಸಂಪೂರ್ಣ ಸಹಕಾರದೊಂದಿಗೆ ಭಾರತ ಜೊತೆ ಜೊತೆಗೆ ಹೆಜ್ಜೆಹಾಕಲಿದೆ. ಭಾರತ ಮತ್ತು ಇರಾನ್ ಅಭಿವೃದ್ಧಿಯ ಪಾಲುದಾರರಾಗಿದ್ದು ಹೊಸ ಅಧ್ಯಕ್ಷರ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟುಗಟ್ಟಿಗೊಳಿಸುವ ಇಂಗಿತವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ, ಟರ್ಕಿ ಪ್ರಧಾನಿ ತಯ್ಯೀಪ್ ಇರ್ಡೋಗನ್ ಗಲ್ಫ್ ದೇಶದ ನಾಯಕರು, ವಿಶ್ವದ ಅನೇಕ ಗಣ್ಯರು ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಆಯ್ಕೆಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ನೂತನ ಅಧ್ಯಕ್ಷ ಇಬ್ರಾಹಿಂ ರೈಸಿಯವರ ಮುಂದಿದೆ ಇರಾನ್‌ಅನ್ನು ಆರ್ಥಿಕ ಸಂಕಟಗಳಿಂದ ಪಾರುಮಾಡುವ ಹೊಣೆಗಾರಿಕೆ

ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಮುಂದಿನ ಆಡಳಿತ ಅವಧಿ ಅಷ್ಟು ಸುಲಭವಾಗಿಲ್ಲ. ಏಕೆಂದರೆ, ಇರಾನ್ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅಮೆರಿಕ ವಿಧಿಸಿದ ಆರ್ಥಿಕ ನಿರ್ಬಂಧಗಳ ಪರಿಣಾಮ ಅಮೆರಿಕಾದ ಮಿತ್ರರಾಷ್ಟ್ರಗಳು ಇರಾನ್ ಜೊತೆ ವ್ಯಾಪರ ವಹಿವಾಟನ್ನು ನಡೆಸುತ್ತಿಲ್ಲ. ತೈಲ ಸಂಪದ್ಭರಿತರಾಷ್ಟ್ರವಾದ ಇರಾನ್‌ನಲ್ಲಿ ಪೆಟ್ರೋಲಿಯಂ ರಫ್ತು ಕಳೆದು ಕೆಲವು ವರ್ಷಗಳಲ್ಲಿ ಗಣನೀಯವಾಗಿ ಇಳಿಮುಖವಾಗಿದೆ. ಅಮೆರಿಕಾ ನಿರ್ಬಂಧದ ಪರಿಣಾಮವಾಗಿ ಜಗತ್ತಿನ ಬಹುತೇಕ ರಾಷ್ಟ್ರಗಳು ಈಗ ಸೌದಿ ಅರೇಬಿಯಾ, ಕುವೈತ್ ದೇಶಗಳಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ.

ಕಳೆದ ಒಂದೆರಡು ವರ್ಷಗಳಿಂದ ದೇಶದಲ್ಲಿ ತಲೆದೋರಿರುವ ಆಂತರಿಕ ಬಿಕ್ಕಟ್ಟು ಅಮೆರಿಕಾ ವಿರುದ್ಧದ ನಡುವಿನ ಸಂಘರ್ಷ, ಯುದ್ಧ ಪರಿಸ್ಥಿತಿ, ಕೊರೊನಾ ಸಾಂಕ್ರಾಮಿಕ, ಪಕ್ಕದ ಇರಾಕ್ ನಡುವಿನ ಗಡಿ ವಿವಾದಗಳಿಂದ ಇರಾನ್‌ ದೇಶದ ಆರ್ಥಿಕತೆ ನೆಲಕಚ್ಚಿದೆ. ವಿದೇಶಿ ಬಂಡವಾಳ ಹೂಡಿಕೆಯ ಪ್ರಮಾಣ 10% ಕ್ಕಿಂತಲೂ ಕಡಿಮೆಯಾಗಿದೆ. ಜಗತ್ತಿನ ದೊಡ್ಡ ದೊಡ್ಡ ತೈಲ ತಯಾರಿಕಾ ಕಂಪನಿಗಳೂ ಇರಾನ್ ತೊರೆದು ಇತರ ಗಲ್ಫ್ ರಾಷ್ಟ್ರಗಳ ಕಡೆ ಮುಖ ಮಾಡಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆ ಇಬ್ರಾಹಿಂ ರೈಸಿ ಇರಾನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇರಾನ್ ದೇಶವನ್ನು ಮಹಾನ್ ಆರ್ಥಿಕ ಸಂಕಟಗಳಿಂದ ಪಾರುಮಾಡುವ ಹೊಣೆಗಾರಿಕೆ ಇಬ್ರಾಹಿಂ ರೈಸಿ ಹೆಗಲಮೇಲಿದೆ.

ಹಳಸಿದ ವಿದೇಶಿ ಸಂಬಂಧ, ಅಮೆರಿಕಾ ನಡುವಿನ ಶೀತಲ ಸಮರ

ಇರಾನ್ ಮತ್ತು ಅಮೆರಿಕಾ ನಡುವೆ ಕಳೆದ ವರ್ಷ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು ಇರಾನಿನ ಮಿಲಿಟರಿ ಜನರಲ್ ಕಾಸಿಮ್ ಸೊಲೆಮನಿ ಅವರನ್ನು ಅಮೆರಿಕಾದ ಪಡೆಗಳು ಇರಾಕ್‌ನ ಬಾಗ್ದಾದ್ ವಿಮಾನ ನಿಲ್ಧಾಣದ ಸಮೀಪ 2020 ರ ಜನವರಿ 3 ರಂದು ಹೊಡೆದುರುಳಿಸಿದ್ದವು. ಇದಾದ ಮೇಲೆ ಇರಾನ್ ಅಮೆರಿಕಾ ಮೇಲೆ ಪ್ರತಿಧಾಳಿ ನಡೆಸಿತ್ತು. 2020 ರ ಜನವರಿ 8 ರಂದು ಇರಾನ್‌ ಸಶಸ್ತ್ರ ಪಡೆಗಳು ಅಮೆರಿಕಾದ ವಾಯುನೆಲೆಗಳ ಮೇಲೆ ದಾಳಿ ನಡೆಸಿದ್ದವು. ಈ ದಾಳಿಯ 1 ಗಂಟೆಯ ನಂತರ ಇರಾಕ್ ಪಡೆಗಳು ಅಮೆರಿಕಾ ವಿಮಾನವೆಂದು ತಿಳಿದು ಉಕ್ರೇನ್ ಇಂಟರ್‌ನ್ಯಾಷನಲ್‌ನ ವಿಮಾನವನ್ನು ಹೊಡೆದುರುಳಿಸಿ 176 ಜನರ ಸಾವಿಗೆ ಕಾರಣರಾಗಿದ್ದರು. ಅಮೆರಿಕಾ ಮತ್ತು ಇರಾನ್ ನಡುವಿನ ಸಂಬಂಧ ಡೊನಾಲ್ಡ್‌ ಟ್ರಂಪ್ ಅಧ್ಯಕ್ಷೀಯ ಅವಧಿಯಲ್ಲಿ ತೀವ್ರ ಹಳಸಿತ್ತು. ಕಳೆದ ಕೆಲ ವರ್ಷಗಳಿಂದ ಅಮೆರಿಕ ಮತ್ತು ಇರಾನ್ ಪರಸ್ಪರ ಶೀತಲ ಸಮರವನ್ನು ನಡೆಸುತ್ತಲೇ ಬಂದಿವೆ. ಬಿಡೆನ್ ಮತ್ತು ಇಬ್ರಾಹಿಂ ರೈಸಿ ಅವಧಿಯಲ್ಲಿ ಅಮೆರಿಕಾ ಸಂಬಂಧ ಸುಧಾರಿಸುವ ನಿರೀಕ್ಷೆಯನ್ನು ಇರಾನಿನ ಜನರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ಇನ್ನು ಇರಾನ್ ಮತ್ತು ಇಸ್ರೇಲ್ ನಡುವಿನ ಸಂಬಂಧಗಳು ಮತ್ತಷ್ಟು ಹಳಸುವ ಸೂಚನೆಗಳು ವ್ಯಕ್ತವಾಗಿವೆ . ಇದುವರೆಗೆ ಇಸ್ರೇಲ್ ಮತ್ತು ಇರಾನ್ ಶೀತಲ ಸಮರವನ್ನು ನಡೆಸುತ್ತಲೇ ಬಂದಿವೆ. ಇಸ್ರೇಲ್‌ನಲ್ಲಿ ಜೂವಿಷ್ ತೀವ್ರ ಸಂಪ್ರದಾಯವಾದಿ  ಪ್ರಧಾನಿ ನಫ್ತಾಲಿ ಬನೆಟ್‌ ನೇತೃತ್ವದ  ಸರ್ಕಾರ ಆಡಳಿತಕ್ಕೆ ಬಂದಿದೆ. ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ತಮ್ಮ ಕ್ಯಾಬಿನೇಟ್ ಸಭೆಯಲ್ಲಿ ಇಬ್ರಾಹಿಂ ರೈಸಿ ಆಯ್ಕೆಯ ಕುರಿತು ಜಗತ್ತಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮಾನವೀಯತೆಯನ್ನು ರಕ್ಷಿಸುವ ಕೊನೆಯ ಆಯ್ಕೆ ನಮ್ಮ ಮುಂದಿದೆ. ನಾವು ಯಾರ ಜೊತೆ ವ್ಯವಹರಿಸುತ್ತಿದ್ದೇವೆ ಎಂದು ಎಚ್ಚರಿಕೆಯಿಂದ ಗಮನಿಸಬೇಕು. ಜಗತ್ತು ಇರಾನಿನ ಬೆಳವಣಿಗೆ ಕುರಿತು ಎಚ್ಚರಿಕೆಯನ್ನು ವಹಿಸಬೇಕು ಎಂದು ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್ ಜಗತ್ತಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಇಂತಹ ಬಿಕ್ಕಟ್ಟಿನಲ್ಲಿ ಇಬ್ರಾಹಿಂ ರೈಸಿ ಆಡಳಿತ ಇಸ್ರೇಲ್ ಕುರಿತು ಯಾವ ನಿಲುವು ತಾಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇಬ್ರಾಹಿಂ ರೈಸಿ ಆಡಳಿತದಲ್ಲಿ ಭಾರತ ಮತ್ತು ಇಸ್ರೇಲ್ ಸಂಬಂಧ

ಇರಾನ್ ಹಾಗೂ ಭಾರತ ದೀರ್ಘಕಾಲದ ಮಿತ್ರ ರಾಷ್ಟ್ರಗಳಾಗಿದ್ದು ಭಾರತ ಇತ್ತೀಚಿನ ವರ್ಷಗಳಲ್ಲಿ ಬಹುಪಾಲು ಪೆಟ್ರೋಲಿಯಂ ಅನ್ನು ಇರಾನ್‌ನಿಂದ ಆಮದು ಮಾಡಿಕೊಳ್ಳುತ್ತಿದೆ. ಹಾಗೇ ಭಾರತ ಇರಾನ್‌ನ ಚಹಾಬರ್ ಬಂದರನ್ನು ಅಭಿವೃದ್ಧಿಪಡಿಸಿದ್ದು ಗಲ್ಫ್ ವಲಯದಲ್ಲಿ ಭಾರತದ ಸ್ಟ್ರಾಟಜಿಕ್ ತಾಣವನ್ನಾಗಿ ಚಹಾಬರ್ ಅನ್ನು ಬಳಸಿಕೊಳ್ಳಲು ಮುಂದಾಗಿದೆ. ಮಿಲಿಟರಿ ಮತ್ತು ವಾಣಿಜ್ಯ ಉದ್ಧೇಶಗಳಿಂದ ಇರಾನ್ ಭಾರತಕ್ಕೆ ಅತ್ಯಂತ ಬಹುಮುಖ್ಯ ರಾಷ್ಟ್ರವಾಗಿದ್ದು ಪಾಕಿಸ್ತಾನ ಮತ್ತು ಅಫಘಾನಿಸ್ಥಾನದೊಂದಿಗೆ ಭಾರತಕ್ಕೆ ನೇರವಾಗಿ ಭೂಮಾರ್ಗದ ಮೂಲಕ ಸಂಪರ್ಕ ಸಾಧ್ಯವಾಗಿದೆ. ಈ ಎಲ್ಲ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಆಡಳಿತದಲ್ಲಿ ಭಾರತ ಮತ್ತು ಇರಾನ್ ಇನ್ನಷ್ಟು ನಿಕಟವಾಗುವ ಕುರಿತು ಮಾತನಾಡಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಇರಾನ್‌ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ 

ಇರಾನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇಬ್ರಾಹಿಂ ರೈಸಿ ಅವರ ವಿರುದ್ಧ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪವಿದೆ. 2019 ರಿಂದ ಇರಾನ್‌ನ ನ್ಯಾಯಂಗದ ಮುಖ್ಯಸ್ಥರಾಗಿದ್ದ ರೈಸಿ ಅನೇಕ ಏಕಪಕ್ಷೀಯ ತನಿಖೆ, ಕಗ್ಗೊಲೆಗಳನ್ನು ನಡೆಸಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಕೂಡ ಇಬ್ರಾಹಿಂ ರೈಸಿ ವಿರುದ್ಧದ ಆರೋಪಗಳನ್ನು ತನಿಖೆ ನಡೆಸುತ್ತಿದೆ.

ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ರೈಸಿ ಇಬ್ರಾಹಿಂ ರೈಸಿ ಆಯ್ಕೆಯು ಮಾನವ ಹಕ್ಕುಗಳ ರಕ್ಷಣೆಗೆ ದೊಡ್ಡ ತೊಡಕು ಎಂದು ಅಭಿಪ್ರಾಯ ಪಟ್ಟಿವೆ. ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಗ್ನೆಸ್ ಕಾಲಮಾರ್ಡ್ ಇಬ್ರಾಹಿಂ ರೈಸಿ ಆಯ್ಕೆ ಕುರಿತು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

ಹಾಗೇ ಇರಾನ್ ನೂತನ ಅಧ್ಯಕ್ಷ ಇಬ್ರಾಹಿಂ ರೈಸಿ ಅನೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖೆಯನ್ನು ಎದುರಿಸುತ್ತಿದ್ದಾರೆ.


ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಬೆಂಗಳೂರಿನಲ್ಲಿ ತಮಿಳುನಾಡಿನ ಮಾಜಿ ಸಚಿವ ಎಂ.ಮಣಿಕಂಠನ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...