Homeಎಲೆಮರೆಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ...

ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

ಸುತಾರರ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ.

- Advertisement -
- Advertisement -

ಎಲೆಮರೆ – 12

ಅರುಣ್‌ ಜೋಳದ ಕೂಡ್ಲಿಗಿ

ಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ ಸೌಹಾರ್ದದ ಕವಿ ಇಬ್ರಾಹಿಂ ಸುತಾರರೂ ಬಲಿಯಾದರು. `ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆ ಆಗುವುದಿಲ್ಲ, ಸಮಾಜದಲ್ಲಿ ಸುಳ್ಳು ಸುದ್ದಿ ಯಾರು ಹಬ್ಬಿಸಬಾರದು. ನಾವೆಲ್ಲರು ಭಾರತೀಯರೆ’ ಎಂಬ ಹೇಳಿಕೆಯನ್ನು Ibrahim Sutar ಎನ್ನುವ ಪೇಸ್‍ಬುಕ್ ಪೇಜಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ನನಗೆ ಇಬ್ರಾಹಿಂ ಸುತಾರರು ಹೀಗೆ ಹೇಳಿರಲಿಕ್ಕಿಲ್ಲ ಎಂದು ಸ್ವತಃ ಹಿಂಬ್ರಾಹಿಂ ಸುತಾರರ ಬಳಿ ಮಾತನಾಡಿದೆ. ತಿಳಿದ ಸಂಗತಿಯೆಂದರೆ ಸುತಾರರ ಹೆಸರಲ್ಲಿ ಯಾವುದೇ ಅಧಿಕೃತ ಪೇಸ್‍ಬುಕ್ ಪೇಜ್ ಇರಲಿಲ್ಲ. ಅವರ ಹೆಸರಿನ ಫೇಕ್‍ಪೇಜಲ್ಲಿ ಈ ಅಭಿಪ್ರಾಯ ಹಂಚಿಕೆಯಾಗಿತ್ತು. ಈ ಕಾರಣಕ್ಕೆ ಸುತಾರರು ಮಹಾಲಿಂಗಪುರ ಠಾಣೆಯಲ್ಲಿ ಕೇಸ್ ದಾಖಲಿಸಿ, ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಸೌಹಾರ್ದ ಸಮಾಜಕ್ಕಾಗಿ ದುಡಿಯುವ ಸುತಾರ ಇವರನ್ನು ಮೂಲಭೂತವಾದಿಗಳು ಹೀಗೆ ದುರ್ಬಳಕೆ ಮಾಡಿಕೊಂಡಿದ್ದರು.

ನಾವು ಬದುಕುತ್ತಿರುವ ಈ ಕಾಲದಲ್ಲಿ ಆಧ್ಯಾತ್ಮ ಭಕ್ತಿ ಎನ್ನುವ ಸಂಗತಿಗಳು ಮಾರುಕಟ್ಟೆಯ ಸರಕಾಗಿವೆ. ಇವುಗಳು ಜನರನ್ನು ಕಂದಾಚಾರಗಲ್ಲಿ ಮುಳುಗಿಸುತ್ತಿವೆ. ಇದು ಮುಂದುವರಿದು ಜಾತೀಯತೆ, ಧಾರ್ಮಿಕ ಮೂಲಭೂತವಾದವನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರವಚನ, ಆಧ್ಯಾತ್ಮ, ಭಕ್ತಿಯ ದಾರಿಯಲ್ಲಿ ಸಾಮಾಜಿಕ ಸುಧಾರಣೆಯ ಕನಸನ್ನು ಹೊತ್ತವರೂ ಇದ್ದಾರೆ. ಹೀಗೆ ಪ್ರವಚನದ ಮೂಲಕ ಸಮಾಜ ಸೇವೆ, ಸಮಸಮಾಜದ ಕನಸು, ಧಾರ್ಮಿಕ ಸಾಮರಸ್ಯವನ್ನು ಹೆಚ್ಚಿಸುವ, ಜಾತಿಯ ತರತಮಗಳನ್ನು ಕಡಿಮೆ ಮಾಡುವ ನೆಲೆಯಲ್ಲಿ ಸಾಮುದಾಯಿಕ ಬದಲಾವಣೆಗೆ ತಮ್ಮದೇ ಆದ ಮಹತ್ತರ ಕಾಣಿಕೆ ಸಲ್ಲಿಸುತ್ತಿರುವವರಲ್ಲಿ ಇಬ್ರಾಹಿಂ ಸುತಾರರು ಗಮನ ಸೆಳೆಯುತ್ತಾರೆ.

ಸುತಾರ ಅವರನ್ನು ನೇರವಾಗಿ ಸಾಮಾಜಿಕ ಚಳವಳಿಯ ಚೌಕಟ್ಟಿನಲ್ಲಿ ಇರಿಸಲಾಗದು. ಆದರೆ ಅವರ ಬದುಕಿನ ತಿರುವುಗಳನ್ನು ನೋಡುತ್ತಾ ಹೋದರೆ, ಸಾಮಾಜಿಕ ಜೀವನದಲ್ಲಿ ಅವರ ಮಹತ್ವ ಅರಿವಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದಲ್ಲಿ ನೆಲೆಸಿದ ಇವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಬಹುಪಾಲು ಹಳ್ಳಿಗಳು ವರ್ಷಕ್ಕೆ ಒಮ್ಮೆಯಾದರೂ ಸುತಾರ ಅವರ ಪ್ರವಚನ ಕೇಳಬೇಕು ಎನ್ನುವುದು ವಾರ್ಷಿಕ ಆಚರಣೆಯಾಗಿದೆ. ಅಂತೆಯೇ ಸುತಾರರ ದಿನಚರಿಯನ್ನು ಗಮನಿಸಿದರೆ ಬಿಡುವಿಲ್ಲದ ಓಡಾಟವೂ ಕಾಣುತ್ತದೆ. ಇಂತಹ ಇಬ್ರಾಹಿಂ ಸುತಾರರ ಒಟ್ಟು ತಿಳಿವನ್ನು ರೂಪಿಸಿದ ಬಾಲ್ಯದ ಅನುಭವಗಳು ಕುತೂಹಲಕಾರಿಯಾಗಿವೆ.

ಸುತಾರ ಅವರು ರಚಿಸುವ ಕಾವ್ಯ ಅಥವಾ ವಚನಗಳನ್ನು `ಬಸವ’ ಎಂಬ ಅಂಕಿತದಲ್ಲಿ ಬರೆಯುತ್ತಿದ್ದಾರೆ. ಪ್ರವಚನಗಳಲ್ಲಿ ಸಾಮಾಜಿಕ ಪ್ರಸಕ್ತ ವಿದ್ಯಮಾನದ ಸಂಗತಿಗಳನ್ನು ತರುವ ಕ್ರಮ ಕೂಡ ಇದೆ. ಈ ಅರ್ಥದಲ್ಲಿ ಅವರೊಬ್ಬ ಜನಪದ ಕವಿ. ಜನಪದ ಸಂವಹನದ ದಾರಿಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ನೆಲೆಯಲ್ಲಿ ದೇವದಾಸಿ ಪದ್ಧತಿಯ ವಿರುದ್ಧ, ಜಾತಿ ಪದ್ಧತಿಯ ವಿರುದ್ಧ ಜನಜಾಗೃತಿ ಮೂಡಿಸುವುದು, ಸಾಕ್ಷರತಾ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಸಾರುವುದು ಇತ್ಯಾದಿ. ತೀರಾ ಸಾಂಪ್ರದಾಯಿಕ ಸಂಗತಿಗಳನ್ನು ಮಾತ್ರ ಸಂವಹನ ಮಾಡಲು ಸಾಧ್ಯವಿದ್ದ ದಾರಿಯಲ್ಲಿಯೇ ಈ ಬಗೆಯ ಪ್ರಯೋಗ ಮಾಡಿರುವುದು ಮುಖ್ಯವಾಗಿದೆ. ಅಂತೆಯೇ ಈ ಪ್ರಯೋಗ ಕೂಡ ಧರ್ಮಸೂಕ್ಷ್ಮದಿಂದ ಕೂಡಿದೆ. ಜಾತಿಪದ್ಧತಿಯನ್ನು ವಿರೋಧಿಸುವಾಗ ಮೇಲುಜಾತಿಗಳನ್ನು ಗುರಿಯಾಗಿಟ್ಟುಕೊಳ್ಳುವಂತಿಲ್ಲ. ಬದಲಾಗಿ ಉದಾರವಾದಿ ನೆಲೆಯಲ್ಲಿ ಇದನ್ನು ನಿಭಾಯಿಸಿದ್ದಾರೆ. ಕಾರಣ ಸುತಾರರ ಪ್ರವಚನಗಳ ಪ್ರಾಯೋಜಕರು ಸಾಮಾನ್ಯವಾಗಿ ಮೇಲುಜಾತಿಯ ಮಠಗಳು ಎನ್ನುವುದನ್ನು ಗಮನಿಸಬೇಕು.

ಇಬ್ರಾಹಿಂ ಸುತಾರ ಅವರು ಮಾಡಿದ ಪ್ರವಚನದ ದಾರಿ ಒಂದು ಬಗೆಯ ಚಳವಳಿಯ ದಾರಿಯೂ ಆಗಿದೆ. ಇಲ್ಲಿ ಸಾಹಿತ್ಯ ಓದುಬರಹದಿಂದ ದಕ್ಕುವ ವೈಚಾರಿಕತೆ ಮೂಡದಿರಬಹುದು, ಆದರೆ ಕೆಲವು ಬಿಗಿಯಾದ ಕಟ್ಟುಗಳು ಸಡಿಲವಾಗುವ ಅರ್ಥದಲ್ಲಿ ಈ ಬದಲಾವಣೆಯನ್ನು ಗ್ರಹಿಸಬೇಕಾಗಿದೆ. ಮುಖ್ಯವಾಗಿ ಸುತಾರ ತರಹದ ಪ್ರವಚನ ಮಾದರಿಯಲ್ಲಿ ಇತರರು ಎದುರಿಸದ ಕೆಲವು ಬಿಕ್ಕಟ್ಟುಗಳನ್ನು ಇವರೊಬ್ಬ ಮುಸ್ಲಿಂ ಆದ ಕಾರಣಕ್ಕೆ ಎದುರಿಸಬೇಕಿತ್ತು. ಆದರೆ ಅದನ್ನವರು ತುಂಬಾ ಜಾಗರೂಕತೆಯಿಂದ ದಾಟಿದ್ದಾರೆ. ಈ ಮಧ್ಯೆಯೂ ಅವರು `ನಿಮ್ಮನೊಡನಿದ್ದೂ ನಿಮ್ಮಂತಾಗದೆ’ ಎನ್ನುವಂತಹ ಕವಿ ನಿಸಾರ್ ಅಹಮದ್ ತರಹದ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಎದುರುಗೊಂಡಿದ್ದಾರೆ.

ಇಲ್ಲಿ ಮುಖ್ಯವಾಗಿ ಜನರ ನಂಬಿಕೆಯ ದಾರಿಗಳಲ್ಲಿ ನಡೆಯುತ್ತಲೇ ಅವರ ಲೋಕದೃಷ್ಟಿಯನ್ನು ತಿದ್ದುವ ರೀತಿ ಇದಾಗಿದೆ. ಅಂದರೆ ಜನರು ಸಾಂಪ್ರದಾಯಿಕವಾಗಿ ಭಕ್ತಿ, ಭಜನೆ, ಪ್ರವಚನಗಳ ಜತೆ ಬೆಸೆದುಕೊಂಡ ನಂಬಿಕೆಯ ಲೋಕಗಳನ್ನು ಬಳಸಿಕೊಂಡೇ ಧಾರ್ಮಿಕ ಕಟ್ಟಳೆಗಳನ್ನೂ, ಜಾತಿಯ ಕಟ್ಟಳೆಗಳನ್ನೂ, ಲಿಂಗದ ಕಟ್ಟಳೆಗಳನ್ನೂ, ವರ್ಗಶ್ರೇಣಿಯ ಕಟ್ಟಳೆಗಳನ್ನೂ, ಮೂಢನಂಬಿಕೆಗಳನ್ನು ಮೀರುವ ತಿಳಿವನ್ನು ಬಿತ್ತರಿಸುವುದಾಗಿದೆ.

ಸುತಾರರು `ಪಾರಮಾರ್ಥ ಲಹರಿ ತತ್ವಪದಗಳು’ `ತತ್ವಜ್ಞಾನಕ್ಕೆ ಎಲ್ಲರೂ ಅಧಿಕಾರಿಗಳು’ `ನಾವೆಲ್ಲಾ ಭಾರತೀಯರು’ ಎಂಬ ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ. ಸುತಾರರು ನವಮೌಖಿಕ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದಾರೆ. ಹಾಗಾಗಿ ಈತನಕ 20 ಧ್ವನಿಸುರುಳಿಗಳು ಬಿಡುಗಡೆಯಾಗಿವೆ. ಇದರ ಪ್ರಭಾವದಿಂದ ಸುತಾರರ ಪ್ರವಚನ ಮತ್ತು ಪದಗಳು ಮೊಬೈಲ್‍ನಲ್ಲಿಯೂ, ಟಿವಿಗಳಲ್ಲಿಯೂ ವ್ಯಾಪಕವಾಗಿ ಹರಡಿವೆ.

ಸುತಾರರು ತಮ್ಮ ಪ್ರವಚನದ ಜತೆ ಸಾಮಾಜಿಕ ಕಾಳಜಿಯ ಕಡೆ ಮುಖ ಮಾಡಿರುವುದು ಮುಖ್ಯವಾಗಿದೆ. ಇಲ್ಲಿ ಅವರು ಸಾಮೂಹಿಕ ಹಿತದ ಕೆಲಸಗಳಿಗೆ ಹೆಚ್ಚು ಗಮನಹರಿಸಿದ್ದಾರೆ. ರಸ್ತೆ ಮಾಡಿಸಿದ್ದು, ಶಾಲೆ ಕಟ್ಟಿಸಿದ್ದು, ಕುಡಿಯುವ ನೀರಿನ ಟ್ಯಾಂಕ್ ಕಟ್ಟಿಸಿದ್ದು ಇತ್ಯಾದಿಗಳು. ಇಂತಹ ಕೆಲಸಗಳಿಗೆ ಬಂದೊದಗಿದ ಸಂದರ್ಭಗಳು, ಇಂತಹ ಸಂದರ್ಭವನ್ನು ಸುತಾರರು ನಿಭಾಯಿಸಿದ ಬಗೆ ಎರಡೂ ಭಿನ್ನವಾಗಿದೆ.

ಸುತಾರರನ್ನು ಉತ್ತರ ಕರ್ನಾಟಕದಲ್ಲಿ `ಕನ್ನಡದ ಕಬೀರ’ನೆಂದು ಗುರುತಿಸುತ್ತಾರೆ. ಈ ಬಗ್ಗೆ ರಂಜಾನ್ ದರ್ಗಾ ಅವರು `ಸಂತ ಕಬೀರ ದುಷ್ಟಶಕ್ತಿಗಳನ್ನು ಎದುರುಹಾಕಿಕೊಂಡು ವೈಚಾರಿಕತೆಯ ಮಾನವ ಏಕತೆಯನ್ನು ಸಾಧಿಸಿದರೆ, ಇವರು ಯಾರನ್ನೂ ಎದುರು ಹಾಕಿಕೊಳ್ಳದೆ ಮಾನವ ಏಕತೆಯನ್ನು ಸಾಧಿಸುವ ಕ್ರಮ ಆಪ್ಯಾಯಮಾನವಾಗಿದೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...