Homeಎಲೆಮರೆಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ...

ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

ಸುತಾರರ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ.

- Advertisement -
- Advertisement -

ಎಲೆಮರೆ – 12

ಅರುಣ್‌ ಜೋಳದ ಕೂಡ್ಲಿಗಿ

ಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ ಸೌಹಾರ್ದದ ಕವಿ ಇಬ್ರಾಹಿಂ ಸುತಾರರೂ ಬಲಿಯಾದರು. `ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆ ಆಗುವುದಿಲ್ಲ, ಸಮಾಜದಲ್ಲಿ ಸುಳ್ಳು ಸುದ್ದಿ ಯಾರು ಹಬ್ಬಿಸಬಾರದು. ನಾವೆಲ್ಲರು ಭಾರತೀಯರೆ’ ಎಂಬ ಹೇಳಿಕೆಯನ್ನು Ibrahim Sutar ಎನ್ನುವ ಪೇಸ್‍ಬುಕ್ ಪೇಜಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ನನಗೆ ಇಬ್ರಾಹಿಂ ಸುತಾರರು ಹೀಗೆ ಹೇಳಿರಲಿಕ್ಕಿಲ್ಲ ಎಂದು ಸ್ವತಃ ಹಿಂಬ್ರಾಹಿಂ ಸುತಾರರ ಬಳಿ ಮಾತನಾಡಿದೆ. ತಿಳಿದ ಸಂಗತಿಯೆಂದರೆ ಸುತಾರರ ಹೆಸರಲ್ಲಿ ಯಾವುದೇ ಅಧಿಕೃತ ಪೇಸ್‍ಬುಕ್ ಪೇಜ್ ಇರಲಿಲ್ಲ. ಅವರ ಹೆಸರಿನ ಫೇಕ್‍ಪೇಜಲ್ಲಿ ಈ ಅಭಿಪ್ರಾಯ ಹಂಚಿಕೆಯಾಗಿತ್ತು. ಈ ಕಾರಣಕ್ಕೆ ಸುತಾರರು ಮಹಾಲಿಂಗಪುರ ಠಾಣೆಯಲ್ಲಿ ಕೇಸ್ ದಾಖಲಿಸಿ, ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಸೌಹಾರ್ದ ಸಮಾಜಕ್ಕಾಗಿ ದುಡಿಯುವ ಸುತಾರ ಇವರನ್ನು ಮೂಲಭೂತವಾದಿಗಳು ಹೀಗೆ ದುರ್ಬಳಕೆ ಮಾಡಿಕೊಂಡಿದ್ದರು.

ನಾವು ಬದುಕುತ್ತಿರುವ ಈ ಕಾಲದಲ್ಲಿ ಆಧ್ಯಾತ್ಮ ಭಕ್ತಿ ಎನ್ನುವ ಸಂಗತಿಗಳು ಮಾರುಕಟ್ಟೆಯ ಸರಕಾಗಿವೆ. ಇವುಗಳು ಜನರನ್ನು ಕಂದಾಚಾರಗಲ್ಲಿ ಮುಳುಗಿಸುತ್ತಿವೆ. ಇದು ಮುಂದುವರಿದು ಜಾತೀಯತೆ, ಧಾರ್ಮಿಕ ಮೂಲಭೂತವಾದವನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರವಚನ, ಆಧ್ಯಾತ್ಮ, ಭಕ್ತಿಯ ದಾರಿಯಲ್ಲಿ ಸಾಮಾಜಿಕ ಸುಧಾರಣೆಯ ಕನಸನ್ನು ಹೊತ್ತವರೂ ಇದ್ದಾರೆ. ಹೀಗೆ ಪ್ರವಚನದ ಮೂಲಕ ಸಮಾಜ ಸೇವೆ, ಸಮಸಮಾಜದ ಕನಸು, ಧಾರ್ಮಿಕ ಸಾಮರಸ್ಯವನ್ನು ಹೆಚ್ಚಿಸುವ, ಜಾತಿಯ ತರತಮಗಳನ್ನು ಕಡಿಮೆ ಮಾಡುವ ನೆಲೆಯಲ್ಲಿ ಸಾಮುದಾಯಿಕ ಬದಲಾವಣೆಗೆ ತಮ್ಮದೇ ಆದ ಮಹತ್ತರ ಕಾಣಿಕೆ ಸಲ್ಲಿಸುತ್ತಿರುವವರಲ್ಲಿ ಇಬ್ರಾಹಿಂ ಸುತಾರರು ಗಮನ ಸೆಳೆಯುತ್ತಾರೆ.

ಸುತಾರ ಅವರನ್ನು ನೇರವಾಗಿ ಸಾಮಾಜಿಕ ಚಳವಳಿಯ ಚೌಕಟ್ಟಿನಲ್ಲಿ ಇರಿಸಲಾಗದು. ಆದರೆ ಅವರ ಬದುಕಿನ ತಿರುವುಗಳನ್ನು ನೋಡುತ್ತಾ ಹೋದರೆ, ಸಾಮಾಜಿಕ ಜೀವನದಲ್ಲಿ ಅವರ ಮಹತ್ವ ಅರಿವಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದಲ್ಲಿ ನೆಲೆಸಿದ ಇವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಬಹುಪಾಲು ಹಳ್ಳಿಗಳು ವರ್ಷಕ್ಕೆ ಒಮ್ಮೆಯಾದರೂ ಸುತಾರ ಅವರ ಪ್ರವಚನ ಕೇಳಬೇಕು ಎನ್ನುವುದು ವಾರ್ಷಿಕ ಆಚರಣೆಯಾಗಿದೆ. ಅಂತೆಯೇ ಸುತಾರರ ದಿನಚರಿಯನ್ನು ಗಮನಿಸಿದರೆ ಬಿಡುವಿಲ್ಲದ ಓಡಾಟವೂ ಕಾಣುತ್ತದೆ. ಇಂತಹ ಇಬ್ರಾಹಿಂ ಸುತಾರರ ಒಟ್ಟು ತಿಳಿವನ್ನು ರೂಪಿಸಿದ ಬಾಲ್ಯದ ಅನುಭವಗಳು ಕುತೂಹಲಕಾರಿಯಾಗಿವೆ.

ಸುತಾರ ಅವರು ರಚಿಸುವ ಕಾವ್ಯ ಅಥವಾ ವಚನಗಳನ್ನು `ಬಸವ’ ಎಂಬ ಅಂಕಿತದಲ್ಲಿ ಬರೆಯುತ್ತಿದ್ದಾರೆ. ಪ್ರವಚನಗಳಲ್ಲಿ ಸಾಮಾಜಿಕ ಪ್ರಸಕ್ತ ವಿದ್ಯಮಾನದ ಸಂಗತಿಗಳನ್ನು ತರುವ ಕ್ರಮ ಕೂಡ ಇದೆ. ಈ ಅರ್ಥದಲ್ಲಿ ಅವರೊಬ್ಬ ಜನಪದ ಕವಿ. ಜನಪದ ಸಂವಹನದ ದಾರಿಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ನೆಲೆಯಲ್ಲಿ ದೇವದಾಸಿ ಪದ್ಧತಿಯ ವಿರುದ್ಧ, ಜಾತಿ ಪದ್ಧತಿಯ ವಿರುದ್ಧ ಜನಜಾಗೃತಿ ಮೂಡಿಸುವುದು, ಸಾಕ್ಷರತಾ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಸಾರುವುದು ಇತ್ಯಾದಿ. ತೀರಾ ಸಾಂಪ್ರದಾಯಿಕ ಸಂಗತಿಗಳನ್ನು ಮಾತ್ರ ಸಂವಹನ ಮಾಡಲು ಸಾಧ್ಯವಿದ್ದ ದಾರಿಯಲ್ಲಿಯೇ ಈ ಬಗೆಯ ಪ್ರಯೋಗ ಮಾಡಿರುವುದು ಮುಖ್ಯವಾಗಿದೆ. ಅಂತೆಯೇ ಈ ಪ್ರಯೋಗ ಕೂಡ ಧರ್ಮಸೂಕ್ಷ್ಮದಿಂದ ಕೂಡಿದೆ. ಜಾತಿಪದ್ಧತಿಯನ್ನು ವಿರೋಧಿಸುವಾಗ ಮೇಲುಜಾತಿಗಳನ್ನು ಗುರಿಯಾಗಿಟ್ಟುಕೊಳ್ಳುವಂತಿಲ್ಲ. ಬದಲಾಗಿ ಉದಾರವಾದಿ ನೆಲೆಯಲ್ಲಿ ಇದನ್ನು ನಿಭಾಯಿಸಿದ್ದಾರೆ. ಕಾರಣ ಸುತಾರರ ಪ್ರವಚನಗಳ ಪ್ರಾಯೋಜಕರು ಸಾಮಾನ್ಯವಾಗಿ ಮೇಲುಜಾತಿಯ ಮಠಗಳು ಎನ್ನುವುದನ್ನು ಗಮನಿಸಬೇಕು.

ಇಬ್ರಾಹಿಂ ಸುತಾರ ಅವರು ಮಾಡಿದ ಪ್ರವಚನದ ದಾರಿ ಒಂದು ಬಗೆಯ ಚಳವಳಿಯ ದಾರಿಯೂ ಆಗಿದೆ. ಇಲ್ಲಿ ಸಾಹಿತ್ಯ ಓದುಬರಹದಿಂದ ದಕ್ಕುವ ವೈಚಾರಿಕತೆ ಮೂಡದಿರಬಹುದು, ಆದರೆ ಕೆಲವು ಬಿಗಿಯಾದ ಕಟ್ಟುಗಳು ಸಡಿಲವಾಗುವ ಅರ್ಥದಲ್ಲಿ ಈ ಬದಲಾವಣೆಯನ್ನು ಗ್ರಹಿಸಬೇಕಾಗಿದೆ. ಮುಖ್ಯವಾಗಿ ಸುತಾರ ತರಹದ ಪ್ರವಚನ ಮಾದರಿಯಲ್ಲಿ ಇತರರು ಎದುರಿಸದ ಕೆಲವು ಬಿಕ್ಕಟ್ಟುಗಳನ್ನು ಇವರೊಬ್ಬ ಮುಸ್ಲಿಂ ಆದ ಕಾರಣಕ್ಕೆ ಎದುರಿಸಬೇಕಿತ್ತು. ಆದರೆ ಅದನ್ನವರು ತುಂಬಾ ಜಾಗರೂಕತೆಯಿಂದ ದಾಟಿದ್ದಾರೆ. ಈ ಮಧ್ಯೆಯೂ ಅವರು `ನಿಮ್ಮನೊಡನಿದ್ದೂ ನಿಮ್ಮಂತಾಗದೆ’ ಎನ್ನುವಂತಹ ಕವಿ ನಿಸಾರ್ ಅಹಮದ್ ತರಹದ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಎದುರುಗೊಂಡಿದ್ದಾರೆ.

ಇಲ್ಲಿ ಮುಖ್ಯವಾಗಿ ಜನರ ನಂಬಿಕೆಯ ದಾರಿಗಳಲ್ಲಿ ನಡೆಯುತ್ತಲೇ ಅವರ ಲೋಕದೃಷ್ಟಿಯನ್ನು ತಿದ್ದುವ ರೀತಿ ಇದಾಗಿದೆ. ಅಂದರೆ ಜನರು ಸಾಂಪ್ರದಾಯಿಕವಾಗಿ ಭಕ್ತಿ, ಭಜನೆ, ಪ್ರವಚನಗಳ ಜತೆ ಬೆಸೆದುಕೊಂಡ ನಂಬಿಕೆಯ ಲೋಕಗಳನ್ನು ಬಳಸಿಕೊಂಡೇ ಧಾರ್ಮಿಕ ಕಟ್ಟಳೆಗಳನ್ನೂ, ಜಾತಿಯ ಕಟ್ಟಳೆಗಳನ್ನೂ, ಲಿಂಗದ ಕಟ್ಟಳೆಗಳನ್ನೂ, ವರ್ಗಶ್ರೇಣಿಯ ಕಟ್ಟಳೆಗಳನ್ನೂ, ಮೂಢನಂಬಿಕೆಗಳನ್ನು ಮೀರುವ ತಿಳಿವನ್ನು ಬಿತ್ತರಿಸುವುದಾಗಿದೆ.

ಸುತಾರರು `ಪಾರಮಾರ್ಥ ಲಹರಿ ತತ್ವಪದಗಳು’ `ತತ್ವಜ್ಞಾನಕ್ಕೆ ಎಲ್ಲರೂ ಅಧಿಕಾರಿಗಳು’ `ನಾವೆಲ್ಲಾ ಭಾರತೀಯರು’ ಎಂಬ ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ. ಸುತಾರರು ನವಮೌಖಿಕ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದಾರೆ. ಹಾಗಾಗಿ ಈತನಕ 20 ಧ್ವನಿಸುರುಳಿಗಳು ಬಿಡುಗಡೆಯಾಗಿವೆ. ಇದರ ಪ್ರಭಾವದಿಂದ ಸುತಾರರ ಪ್ರವಚನ ಮತ್ತು ಪದಗಳು ಮೊಬೈಲ್‍ನಲ್ಲಿಯೂ, ಟಿವಿಗಳಲ್ಲಿಯೂ ವ್ಯಾಪಕವಾಗಿ ಹರಡಿವೆ.

ಸುತಾರರು ತಮ್ಮ ಪ್ರವಚನದ ಜತೆ ಸಾಮಾಜಿಕ ಕಾಳಜಿಯ ಕಡೆ ಮುಖ ಮಾಡಿರುವುದು ಮುಖ್ಯವಾಗಿದೆ. ಇಲ್ಲಿ ಅವರು ಸಾಮೂಹಿಕ ಹಿತದ ಕೆಲಸಗಳಿಗೆ ಹೆಚ್ಚು ಗಮನಹರಿಸಿದ್ದಾರೆ. ರಸ್ತೆ ಮಾಡಿಸಿದ್ದು, ಶಾಲೆ ಕಟ್ಟಿಸಿದ್ದು, ಕುಡಿಯುವ ನೀರಿನ ಟ್ಯಾಂಕ್ ಕಟ್ಟಿಸಿದ್ದು ಇತ್ಯಾದಿಗಳು. ಇಂತಹ ಕೆಲಸಗಳಿಗೆ ಬಂದೊದಗಿದ ಸಂದರ್ಭಗಳು, ಇಂತಹ ಸಂದರ್ಭವನ್ನು ಸುತಾರರು ನಿಭಾಯಿಸಿದ ಬಗೆ ಎರಡೂ ಭಿನ್ನವಾಗಿದೆ.

ಸುತಾರರನ್ನು ಉತ್ತರ ಕರ್ನಾಟಕದಲ್ಲಿ `ಕನ್ನಡದ ಕಬೀರ’ನೆಂದು ಗುರುತಿಸುತ್ತಾರೆ. ಈ ಬಗ್ಗೆ ರಂಜಾನ್ ದರ್ಗಾ ಅವರು `ಸಂತ ಕಬೀರ ದುಷ್ಟಶಕ್ತಿಗಳನ್ನು ಎದುರುಹಾಕಿಕೊಂಡು ವೈಚಾರಿಕತೆಯ ಮಾನವ ಏಕತೆಯನ್ನು ಸಾಧಿಸಿದರೆ, ಇವರು ಯಾರನ್ನೂ ಎದುರು ಹಾಕಿಕೊಳ್ಳದೆ ಮಾನವ ಏಕತೆಯನ್ನು ಸಾಧಿಸುವ ಕ್ರಮ ಆಪ್ಯಾಯಮಾನವಾಗಿದೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...