Homeಎಲೆಮರೆಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ...

ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

ಸುತಾರರ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ.

- Advertisement -
- Advertisement -

ಎಲೆಮರೆ – 12

ಅರುಣ್‌ ಜೋಳದ ಕೂಡ್ಲಿಗಿ

ಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ ಸೌಹಾರ್ದದ ಕವಿ ಇಬ್ರಾಹಿಂ ಸುತಾರರೂ ಬಲಿಯಾದರು. `ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆ ಆಗುವುದಿಲ್ಲ, ಸಮಾಜದಲ್ಲಿ ಸುಳ್ಳು ಸುದ್ದಿ ಯಾರು ಹಬ್ಬಿಸಬಾರದು. ನಾವೆಲ್ಲರು ಭಾರತೀಯರೆ’ ಎಂಬ ಹೇಳಿಕೆಯನ್ನು Ibrahim Sutar ಎನ್ನುವ ಪೇಸ್‍ಬುಕ್ ಪೇಜಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ನನಗೆ ಇಬ್ರಾಹಿಂ ಸುತಾರರು ಹೀಗೆ ಹೇಳಿರಲಿಕ್ಕಿಲ್ಲ ಎಂದು ಸ್ವತಃ ಹಿಂಬ್ರಾಹಿಂ ಸುತಾರರ ಬಳಿ ಮಾತನಾಡಿದೆ. ತಿಳಿದ ಸಂಗತಿಯೆಂದರೆ ಸುತಾರರ ಹೆಸರಲ್ಲಿ ಯಾವುದೇ ಅಧಿಕೃತ ಪೇಸ್‍ಬುಕ್ ಪೇಜ್ ಇರಲಿಲ್ಲ. ಅವರ ಹೆಸರಿನ ಫೇಕ್‍ಪೇಜಲ್ಲಿ ಈ ಅಭಿಪ್ರಾಯ ಹಂಚಿಕೆಯಾಗಿತ್ತು. ಈ ಕಾರಣಕ್ಕೆ ಸುತಾರರು ಮಹಾಲಿಂಗಪುರ ಠಾಣೆಯಲ್ಲಿ ಕೇಸ್ ದಾಖಲಿಸಿ, ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಸೌಹಾರ್ದ ಸಮಾಜಕ್ಕಾಗಿ ದುಡಿಯುವ ಸುತಾರ ಇವರನ್ನು ಮೂಲಭೂತವಾದಿಗಳು ಹೀಗೆ ದುರ್ಬಳಕೆ ಮಾಡಿಕೊಂಡಿದ್ದರು.

ನಾವು ಬದುಕುತ್ತಿರುವ ಈ ಕಾಲದಲ್ಲಿ ಆಧ್ಯಾತ್ಮ ಭಕ್ತಿ ಎನ್ನುವ ಸಂಗತಿಗಳು ಮಾರುಕಟ್ಟೆಯ ಸರಕಾಗಿವೆ. ಇವುಗಳು ಜನರನ್ನು ಕಂದಾಚಾರಗಲ್ಲಿ ಮುಳುಗಿಸುತ್ತಿವೆ. ಇದು ಮುಂದುವರಿದು ಜಾತೀಯತೆ, ಧಾರ್ಮಿಕ ಮೂಲಭೂತವಾದವನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರವಚನ, ಆಧ್ಯಾತ್ಮ, ಭಕ್ತಿಯ ದಾರಿಯಲ್ಲಿ ಸಾಮಾಜಿಕ ಸುಧಾರಣೆಯ ಕನಸನ್ನು ಹೊತ್ತವರೂ ಇದ್ದಾರೆ. ಹೀಗೆ ಪ್ರವಚನದ ಮೂಲಕ ಸಮಾಜ ಸೇವೆ, ಸಮಸಮಾಜದ ಕನಸು, ಧಾರ್ಮಿಕ ಸಾಮರಸ್ಯವನ್ನು ಹೆಚ್ಚಿಸುವ, ಜಾತಿಯ ತರತಮಗಳನ್ನು ಕಡಿಮೆ ಮಾಡುವ ನೆಲೆಯಲ್ಲಿ ಸಾಮುದಾಯಿಕ ಬದಲಾವಣೆಗೆ ತಮ್ಮದೇ ಆದ ಮಹತ್ತರ ಕಾಣಿಕೆ ಸಲ್ಲಿಸುತ್ತಿರುವವರಲ್ಲಿ ಇಬ್ರಾಹಿಂ ಸುತಾರರು ಗಮನ ಸೆಳೆಯುತ್ತಾರೆ.

ಸುತಾರ ಅವರನ್ನು ನೇರವಾಗಿ ಸಾಮಾಜಿಕ ಚಳವಳಿಯ ಚೌಕಟ್ಟಿನಲ್ಲಿ ಇರಿಸಲಾಗದು. ಆದರೆ ಅವರ ಬದುಕಿನ ತಿರುವುಗಳನ್ನು ನೋಡುತ್ತಾ ಹೋದರೆ, ಸಾಮಾಜಿಕ ಜೀವನದಲ್ಲಿ ಅವರ ಮಹತ್ವ ಅರಿವಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದಲ್ಲಿ ನೆಲೆಸಿದ ಇವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಬಹುಪಾಲು ಹಳ್ಳಿಗಳು ವರ್ಷಕ್ಕೆ ಒಮ್ಮೆಯಾದರೂ ಸುತಾರ ಅವರ ಪ್ರವಚನ ಕೇಳಬೇಕು ಎನ್ನುವುದು ವಾರ್ಷಿಕ ಆಚರಣೆಯಾಗಿದೆ. ಅಂತೆಯೇ ಸುತಾರರ ದಿನಚರಿಯನ್ನು ಗಮನಿಸಿದರೆ ಬಿಡುವಿಲ್ಲದ ಓಡಾಟವೂ ಕಾಣುತ್ತದೆ. ಇಂತಹ ಇಬ್ರಾಹಿಂ ಸುತಾರರ ಒಟ್ಟು ತಿಳಿವನ್ನು ರೂಪಿಸಿದ ಬಾಲ್ಯದ ಅನುಭವಗಳು ಕುತೂಹಲಕಾರಿಯಾಗಿವೆ.

ಸುತಾರ ಅವರು ರಚಿಸುವ ಕಾವ್ಯ ಅಥವಾ ವಚನಗಳನ್ನು `ಬಸವ’ ಎಂಬ ಅಂಕಿತದಲ್ಲಿ ಬರೆಯುತ್ತಿದ್ದಾರೆ. ಪ್ರವಚನಗಳಲ್ಲಿ ಸಾಮಾಜಿಕ ಪ್ರಸಕ್ತ ವಿದ್ಯಮಾನದ ಸಂಗತಿಗಳನ್ನು ತರುವ ಕ್ರಮ ಕೂಡ ಇದೆ. ಈ ಅರ್ಥದಲ್ಲಿ ಅವರೊಬ್ಬ ಜನಪದ ಕವಿ. ಜನಪದ ಸಂವಹನದ ದಾರಿಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ನೆಲೆಯಲ್ಲಿ ದೇವದಾಸಿ ಪದ್ಧತಿಯ ವಿರುದ್ಧ, ಜಾತಿ ಪದ್ಧತಿಯ ವಿರುದ್ಧ ಜನಜಾಗೃತಿ ಮೂಡಿಸುವುದು, ಸಾಕ್ಷರತಾ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಸಾರುವುದು ಇತ್ಯಾದಿ. ತೀರಾ ಸಾಂಪ್ರದಾಯಿಕ ಸಂಗತಿಗಳನ್ನು ಮಾತ್ರ ಸಂವಹನ ಮಾಡಲು ಸಾಧ್ಯವಿದ್ದ ದಾರಿಯಲ್ಲಿಯೇ ಈ ಬಗೆಯ ಪ್ರಯೋಗ ಮಾಡಿರುವುದು ಮುಖ್ಯವಾಗಿದೆ. ಅಂತೆಯೇ ಈ ಪ್ರಯೋಗ ಕೂಡ ಧರ್ಮಸೂಕ್ಷ್ಮದಿಂದ ಕೂಡಿದೆ. ಜಾತಿಪದ್ಧತಿಯನ್ನು ವಿರೋಧಿಸುವಾಗ ಮೇಲುಜಾತಿಗಳನ್ನು ಗುರಿಯಾಗಿಟ್ಟುಕೊಳ್ಳುವಂತಿಲ್ಲ. ಬದಲಾಗಿ ಉದಾರವಾದಿ ನೆಲೆಯಲ್ಲಿ ಇದನ್ನು ನಿಭಾಯಿಸಿದ್ದಾರೆ. ಕಾರಣ ಸುತಾರರ ಪ್ರವಚನಗಳ ಪ್ರಾಯೋಜಕರು ಸಾಮಾನ್ಯವಾಗಿ ಮೇಲುಜಾತಿಯ ಮಠಗಳು ಎನ್ನುವುದನ್ನು ಗಮನಿಸಬೇಕು.

ಇಬ್ರಾಹಿಂ ಸುತಾರ ಅವರು ಮಾಡಿದ ಪ್ರವಚನದ ದಾರಿ ಒಂದು ಬಗೆಯ ಚಳವಳಿಯ ದಾರಿಯೂ ಆಗಿದೆ. ಇಲ್ಲಿ ಸಾಹಿತ್ಯ ಓದುಬರಹದಿಂದ ದಕ್ಕುವ ವೈಚಾರಿಕತೆ ಮೂಡದಿರಬಹುದು, ಆದರೆ ಕೆಲವು ಬಿಗಿಯಾದ ಕಟ್ಟುಗಳು ಸಡಿಲವಾಗುವ ಅರ್ಥದಲ್ಲಿ ಈ ಬದಲಾವಣೆಯನ್ನು ಗ್ರಹಿಸಬೇಕಾಗಿದೆ. ಮುಖ್ಯವಾಗಿ ಸುತಾರ ತರಹದ ಪ್ರವಚನ ಮಾದರಿಯಲ್ಲಿ ಇತರರು ಎದುರಿಸದ ಕೆಲವು ಬಿಕ್ಕಟ್ಟುಗಳನ್ನು ಇವರೊಬ್ಬ ಮುಸ್ಲಿಂ ಆದ ಕಾರಣಕ್ಕೆ ಎದುರಿಸಬೇಕಿತ್ತು. ಆದರೆ ಅದನ್ನವರು ತುಂಬಾ ಜಾಗರೂಕತೆಯಿಂದ ದಾಟಿದ್ದಾರೆ. ಈ ಮಧ್ಯೆಯೂ ಅವರು `ನಿಮ್ಮನೊಡನಿದ್ದೂ ನಿಮ್ಮಂತಾಗದೆ’ ಎನ್ನುವಂತಹ ಕವಿ ನಿಸಾರ್ ಅಹಮದ್ ತರಹದ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಎದುರುಗೊಂಡಿದ್ದಾರೆ.

ಇಲ್ಲಿ ಮುಖ್ಯವಾಗಿ ಜನರ ನಂಬಿಕೆಯ ದಾರಿಗಳಲ್ಲಿ ನಡೆಯುತ್ತಲೇ ಅವರ ಲೋಕದೃಷ್ಟಿಯನ್ನು ತಿದ್ದುವ ರೀತಿ ಇದಾಗಿದೆ. ಅಂದರೆ ಜನರು ಸಾಂಪ್ರದಾಯಿಕವಾಗಿ ಭಕ್ತಿ, ಭಜನೆ, ಪ್ರವಚನಗಳ ಜತೆ ಬೆಸೆದುಕೊಂಡ ನಂಬಿಕೆಯ ಲೋಕಗಳನ್ನು ಬಳಸಿಕೊಂಡೇ ಧಾರ್ಮಿಕ ಕಟ್ಟಳೆಗಳನ್ನೂ, ಜಾತಿಯ ಕಟ್ಟಳೆಗಳನ್ನೂ, ಲಿಂಗದ ಕಟ್ಟಳೆಗಳನ್ನೂ, ವರ್ಗಶ್ರೇಣಿಯ ಕಟ್ಟಳೆಗಳನ್ನೂ, ಮೂಢನಂಬಿಕೆಗಳನ್ನು ಮೀರುವ ತಿಳಿವನ್ನು ಬಿತ್ತರಿಸುವುದಾಗಿದೆ.

ಸುತಾರರು `ಪಾರಮಾರ್ಥ ಲಹರಿ ತತ್ವಪದಗಳು’ `ತತ್ವಜ್ಞಾನಕ್ಕೆ ಎಲ್ಲರೂ ಅಧಿಕಾರಿಗಳು’ `ನಾವೆಲ್ಲಾ ಭಾರತೀಯರು’ ಎಂಬ ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ. ಸುತಾರರು ನವಮೌಖಿಕ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದಾರೆ. ಹಾಗಾಗಿ ಈತನಕ 20 ಧ್ವನಿಸುರುಳಿಗಳು ಬಿಡುಗಡೆಯಾಗಿವೆ. ಇದರ ಪ್ರಭಾವದಿಂದ ಸುತಾರರ ಪ್ರವಚನ ಮತ್ತು ಪದಗಳು ಮೊಬೈಲ್‍ನಲ್ಲಿಯೂ, ಟಿವಿಗಳಲ್ಲಿಯೂ ವ್ಯಾಪಕವಾಗಿ ಹರಡಿವೆ.

ಸುತಾರರು ತಮ್ಮ ಪ್ರವಚನದ ಜತೆ ಸಾಮಾಜಿಕ ಕಾಳಜಿಯ ಕಡೆ ಮುಖ ಮಾಡಿರುವುದು ಮುಖ್ಯವಾಗಿದೆ. ಇಲ್ಲಿ ಅವರು ಸಾಮೂಹಿಕ ಹಿತದ ಕೆಲಸಗಳಿಗೆ ಹೆಚ್ಚು ಗಮನಹರಿಸಿದ್ದಾರೆ. ರಸ್ತೆ ಮಾಡಿಸಿದ್ದು, ಶಾಲೆ ಕಟ್ಟಿಸಿದ್ದು, ಕುಡಿಯುವ ನೀರಿನ ಟ್ಯಾಂಕ್ ಕಟ್ಟಿಸಿದ್ದು ಇತ್ಯಾದಿಗಳು. ಇಂತಹ ಕೆಲಸಗಳಿಗೆ ಬಂದೊದಗಿದ ಸಂದರ್ಭಗಳು, ಇಂತಹ ಸಂದರ್ಭವನ್ನು ಸುತಾರರು ನಿಭಾಯಿಸಿದ ಬಗೆ ಎರಡೂ ಭಿನ್ನವಾಗಿದೆ.

ಸುತಾರರನ್ನು ಉತ್ತರ ಕರ್ನಾಟಕದಲ್ಲಿ `ಕನ್ನಡದ ಕಬೀರ’ನೆಂದು ಗುರುತಿಸುತ್ತಾರೆ. ಈ ಬಗ್ಗೆ ರಂಜಾನ್ ದರ್ಗಾ ಅವರು `ಸಂತ ಕಬೀರ ದುಷ್ಟಶಕ್ತಿಗಳನ್ನು ಎದುರುಹಾಕಿಕೊಂಡು ವೈಚಾರಿಕತೆಯ ಮಾನವ ಏಕತೆಯನ್ನು ಸಾಧಿಸಿದರೆ, ಇವರು ಯಾರನ್ನೂ ಎದುರು ಹಾಕಿಕೊಳ್ಳದೆ ಮಾನವ ಏಕತೆಯನ್ನು ಸಾಧಿಸುವ ಕ್ರಮ ಆಪ್ಯಾಯಮಾನವಾಗಿದೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...