Homeಎಲೆಮರೆಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ...

ಮನಸ್ಸುಗಳ ಬೆಸೆಯುವ ಸೌಹಾರ್ದದ ಕನಸುಗಾರ ಇಬ್ರಾಹಿಂ ಸುತಾರ…

ಸುತಾರರ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ.

- Advertisement -
- Advertisement -

ಎಲೆಮರೆ – 12

ಅರುಣ್‌ ಜೋಳದ ಕೂಡ್ಲಿಗಿ

ಈಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿರೋಧ ಹೆಚ್ಚಾದ ಕಾರಣ, ಮುಸ್ಲಿಮರಿಂದಲೆ ಈ ಕಾಯ್ದೆಯನ್ನು ಬೆಂಬಲಿಸುವ ಹಾಗೆ ಸುಳ್ಳಿನ ನಿರೂಪಣೆಗಳನ್ನು ಕಟ್ಟತೊಡಗಿದರು. ಇಂತಹ ಹುನ್ನಾರಕ್ಕೆ ಉತ್ತರ ಕರ್ನಾಟಕದ ಸೌಹಾರ್ದದ ಕವಿ ಇಬ್ರಾಹಿಂ ಸುತಾರರೂ ಬಲಿಯಾದರು. `ಯಾವ ಭಾರತೀಯ ಮುಸಲ್ಮಾನರಿಗೂ ಪೌರತ್ವ ಕಾಯಿದೆಯಿಂದ ತೊಂದರೆ ಆಗುವುದಿಲ್ಲ, ಸಮಾಜದಲ್ಲಿ ಸುಳ್ಳು ಸುದ್ದಿ ಯಾರು ಹಬ್ಬಿಸಬಾರದು. ನಾವೆಲ್ಲರು ಭಾರತೀಯರೆ’ ಎಂಬ ಹೇಳಿಕೆಯನ್ನು Ibrahim Sutar ಎನ್ನುವ ಪೇಸ್‍ಬುಕ್ ಪೇಜಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ನನಗೆ ಇಬ್ರಾಹಿಂ ಸುತಾರರು ಹೀಗೆ ಹೇಳಿರಲಿಕ್ಕಿಲ್ಲ ಎಂದು ಸ್ವತಃ ಹಿಂಬ್ರಾಹಿಂ ಸುತಾರರ ಬಳಿ ಮಾತನಾಡಿದೆ. ತಿಳಿದ ಸಂಗತಿಯೆಂದರೆ ಸುತಾರರ ಹೆಸರಲ್ಲಿ ಯಾವುದೇ ಅಧಿಕೃತ ಪೇಸ್‍ಬುಕ್ ಪೇಜ್ ಇರಲಿಲ್ಲ. ಅವರ ಹೆಸರಿನ ಫೇಕ್‍ಪೇಜಲ್ಲಿ ಈ ಅಭಿಪ್ರಾಯ ಹಂಚಿಕೆಯಾಗಿತ್ತು. ಈ ಕಾರಣಕ್ಕೆ ಸುತಾರರು ಮಹಾಲಿಂಗಪುರ ಠಾಣೆಯಲ್ಲಿ ಕೇಸ್ ದಾಖಲಿಸಿ, ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದರು. ಸೌಹಾರ್ದ ಸಮಾಜಕ್ಕಾಗಿ ದುಡಿಯುವ ಸುತಾರ ಇವರನ್ನು ಮೂಲಭೂತವಾದಿಗಳು ಹೀಗೆ ದುರ್ಬಳಕೆ ಮಾಡಿಕೊಂಡಿದ್ದರು.

ನಾವು ಬದುಕುತ್ತಿರುವ ಈ ಕಾಲದಲ್ಲಿ ಆಧ್ಯಾತ್ಮ ಭಕ್ತಿ ಎನ್ನುವ ಸಂಗತಿಗಳು ಮಾರುಕಟ್ಟೆಯ ಸರಕಾಗಿವೆ. ಇವುಗಳು ಜನರನ್ನು ಕಂದಾಚಾರಗಲ್ಲಿ ಮುಳುಗಿಸುತ್ತಿವೆ. ಇದು ಮುಂದುವರಿದು ಜಾತೀಯತೆ, ಧಾರ್ಮಿಕ ಮೂಲಭೂತವಾದವನ್ನು ಹೆಚ್ಚಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರವಚನ, ಆಧ್ಯಾತ್ಮ, ಭಕ್ತಿಯ ದಾರಿಯಲ್ಲಿ ಸಾಮಾಜಿಕ ಸುಧಾರಣೆಯ ಕನಸನ್ನು ಹೊತ್ತವರೂ ಇದ್ದಾರೆ. ಹೀಗೆ ಪ್ರವಚನದ ಮೂಲಕ ಸಮಾಜ ಸೇವೆ, ಸಮಸಮಾಜದ ಕನಸು, ಧಾರ್ಮಿಕ ಸಾಮರಸ್ಯವನ್ನು ಹೆಚ್ಚಿಸುವ, ಜಾತಿಯ ತರತಮಗಳನ್ನು ಕಡಿಮೆ ಮಾಡುವ ನೆಲೆಯಲ್ಲಿ ಸಾಮುದಾಯಿಕ ಬದಲಾವಣೆಗೆ ತಮ್ಮದೇ ಆದ ಮಹತ್ತರ ಕಾಣಿಕೆ ಸಲ್ಲಿಸುತ್ತಿರುವವರಲ್ಲಿ ಇಬ್ರಾಹಿಂ ಸುತಾರರು ಗಮನ ಸೆಳೆಯುತ್ತಾರೆ.

ಸುತಾರ ಅವರನ್ನು ನೇರವಾಗಿ ಸಾಮಾಜಿಕ ಚಳವಳಿಯ ಚೌಕಟ್ಟಿನಲ್ಲಿ ಇರಿಸಲಾಗದು. ಆದರೆ ಅವರ ಬದುಕಿನ ತಿರುವುಗಳನ್ನು ನೋಡುತ್ತಾ ಹೋದರೆ, ಸಾಮಾಜಿಕ ಜೀವನದಲ್ಲಿ ಅವರ ಮಹತ್ವ ಅರಿವಾಗುತ್ತದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರದಲ್ಲಿ ನೆಲೆಸಿದ ಇವರು ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿದ್ದಾರೆ. ಬಹುಪಾಲು ಹಳ್ಳಿಗಳು ವರ್ಷಕ್ಕೆ ಒಮ್ಮೆಯಾದರೂ ಸುತಾರ ಅವರ ಪ್ರವಚನ ಕೇಳಬೇಕು ಎನ್ನುವುದು ವಾರ್ಷಿಕ ಆಚರಣೆಯಾಗಿದೆ. ಅಂತೆಯೇ ಸುತಾರರ ದಿನಚರಿಯನ್ನು ಗಮನಿಸಿದರೆ ಬಿಡುವಿಲ್ಲದ ಓಡಾಟವೂ ಕಾಣುತ್ತದೆ. ಇಂತಹ ಇಬ್ರಾಹಿಂ ಸುತಾರರ ಒಟ್ಟು ತಿಳಿವನ್ನು ರೂಪಿಸಿದ ಬಾಲ್ಯದ ಅನುಭವಗಳು ಕುತೂಹಲಕಾರಿಯಾಗಿವೆ.

ಸುತಾರ ಅವರು ರಚಿಸುವ ಕಾವ್ಯ ಅಥವಾ ವಚನಗಳನ್ನು `ಬಸವ’ ಎಂಬ ಅಂಕಿತದಲ್ಲಿ ಬರೆಯುತ್ತಿದ್ದಾರೆ. ಪ್ರವಚನಗಳಲ್ಲಿ ಸಾಮಾಜಿಕ ಪ್ರಸಕ್ತ ವಿದ್ಯಮಾನದ ಸಂಗತಿಗಳನ್ನು ತರುವ ಕ್ರಮ ಕೂಡ ಇದೆ. ಈ ಅರ್ಥದಲ್ಲಿ ಅವರೊಬ್ಬ ಜನಪದ ಕವಿ. ಜನಪದ ಸಂವಹನದ ದಾರಿಯನ್ನು ಯಶಸ್ವಿಯಾಗಿ ಬಳಸಿಕೊಂಡಿದ್ದಾರೆ. ಈ ನೆಲೆಯಲ್ಲಿ ದೇವದಾಸಿ ಪದ್ಧತಿಯ ವಿರುದ್ಧ, ಜಾತಿ ಪದ್ಧತಿಯ ವಿರುದ್ಧ ಜನಜಾಗೃತಿ ಮೂಡಿಸುವುದು, ಸಾಕ್ಷರತಾ ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವ ಸಾರುವುದು ಇತ್ಯಾದಿ. ತೀರಾ ಸಾಂಪ್ರದಾಯಿಕ ಸಂಗತಿಗಳನ್ನು ಮಾತ್ರ ಸಂವಹನ ಮಾಡಲು ಸಾಧ್ಯವಿದ್ದ ದಾರಿಯಲ್ಲಿಯೇ ಈ ಬಗೆಯ ಪ್ರಯೋಗ ಮಾಡಿರುವುದು ಮುಖ್ಯವಾಗಿದೆ. ಅಂತೆಯೇ ಈ ಪ್ರಯೋಗ ಕೂಡ ಧರ್ಮಸೂಕ್ಷ್ಮದಿಂದ ಕೂಡಿದೆ. ಜಾತಿಪದ್ಧತಿಯನ್ನು ವಿರೋಧಿಸುವಾಗ ಮೇಲುಜಾತಿಗಳನ್ನು ಗುರಿಯಾಗಿಟ್ಟುಕೊಳ್ಳುವಂತಿಲ್ಲ. ಬದಲಾಗಿ ಉದಾರವಾದಿ ನೆಲೆಯಲ್ಲಿ ಇದನ್ನು ನಿಭಾಯಿಸಿದ್ದಾರೆ. ಕಾರಣ ಸುತಾರರ ಪ್ರವಚನಗಳ ಪ್ರಾಯೋಜಕರು ಸಾಮಾನ್ಯವಾಗಿ ಮೇಲುಜಾತಿಯ ಮಠಗಳು ಎನ್ನುವುದನ್ನು ಗಮನಿಸಬೇಕು.

ಇಬ್ರಾಹಿಂ ಸುತಾರ ಅವರು ಮಾಡಿದ ಪ್ರವಚನದ ದಾರಿ ಒಂದು ಬಗೆಯ ಚಳವಳಿಯ ದಾರಿಯೂ ಆಗಿದೆ. ಇಲ್ಲಿ ಸಾಹಿತ್ಯ ಓದುಬರಹದಿಂದ ದಕ್ಕುವ ವೈಚಾರಿಕತೆ ಮೂಡದಿರಬಹುದು, ಆದರೆ ಕೆಲವು ಬಿಗಿಯಾದ ಕಟ್ಟುಗಳು ಸಡಿಲವಾಗುವ ಅರ್ಥದಲ್ಲಿ ಈ ಬದಲಾವಣೆಯನ್ನು ಗ್ರಹಿಸಬೇಕಾಗಿದೆ. ಮುಖ್ಯವಾಗಿ ಸುತಾರ ತರಹದ ಪ್ರವಚನ ಮಾದರಿಯಲ್ಲಿ ಇತರರು ಎದುರಿಸದ ಕೆಲವು ಬಿಕ್ಕಟ್ಟುಗಳನ್ನು ಇವರೊಬ್ಬ ಮುಸ್ಲಿಂ ಆದ ಕಾರಣಕ್ಕೆ ಎದುರಿಸಬೇಕಿತ್ತು. ಆದರೆ ಅದನ್ನವರು ತುಂಬಾ ಜಾಗರೂಕತೆಯಿಂದ ದಾಟಿದ್ದಾರೆ. ಈ ಮಧ್ಯೆಯೂ ಅವರು `ನಿಮ್ಮನೊಡನಿದ್ದೂ ನಿಮ್ಮಂತಾಗದೆ’ ಎನ್ನುವಂತಹ ಕವಿ ನಿಸಾರ್ ಅಹಮದ್ ತರಹದ ಬಿಕ್ಕಟ್ಟನ್ನು ಸೂಕ್ಷ್ಮವಾಗಿ ಎದುರುಗೊಂಡಿದ್ದಾರೆ.

ಇಲ್ಲಿ ಮುಖ್ಯವಾಗಿ ಜನರ ನಂಬಿಕೆಯ ದಾರಿಗಳಲ್ಲಿ ನಡೆಯುತ್ತಲೇ ಅವರ ಲೋಕದೃಷ್ಟಿಯನ್ನು ತಿದ್ದುವ ರೀತಿ ಇದಾಗಿದೆ. ಅಂದರೆ ಜನರು ಸಾಂಪ್ರದಾಯಿಕವಾಗಿ ಭಕ್ತಿ, ಭಜನೆ, ಪ್ರವಚನಗಳ ಜತೆ ಬೆಸೆದುಕೊಂಡ ನಂಬಿಕೆಯ ಲೋಕಗಳನ್ನು ಬಳಸಿಕೊಂಡೇ ಧಾರ್ಮಿಕ ಕಟ್ಟಳೆಗಳನ್ನೂ, ಜಾತಿಯ ಕಟ್ಟಳೆಗಳನ್ನೂ, ಲಿಂಗದ ಕಟ್ಟಳೆಗಳನ್ನೂ, ವರ್ಗಶ್ರೇಣಿಯ ಕಟ್ಟಳೆಗಳನ್ನೂ, ಮೂಢನಂಬಿಕೆಗಳನ್ನು ಮೀರುವ ತಿಳಿವನ್ನು ಬಿತ್ತರಿಸುವುದಾಗಿದೆ.

ಸುತಾರರು `ಪಾರಮಾರ್ಥ ಲಹರಿ ತತ್ವಪದಗಳು’ `ತತ್ವಜ್ಞಾನಕ್ಕೆ ಎಲ್ಲರೂ ಅಧಿಕಾರಿಗಳು’ `ನಾವೆಲ್ಲಾ ಭಾರತೀಯರು’ ಎಂಬ ಕಾವ್ಯ ಕೃತಿಗಳನ್ನು ರಚಿಸಿದ್ದಾರೆ. ಇದರಲ್ಲಿ `ನಾವೆಲ್ಲಾ ಭಾರತೀಯರೆಂಬ ಭಾವ ಮೂಡಲಿ’ ಎನ್ನುವ ಪದ ಉತ್ತರ ಕರ್ನಾಟಕದ ಭಜನಾ ಮಂಡಳಿಗಳ ರಾಷ್ಟ್ರಗೀತೆಯಂತೆ ಜನಪ್ರಿಯವಾಗಿದೆ. ಸುತಾರರು ನವಮೌಖಿಕ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದಾರೆ. ಹಾಗಾಗಿ ಈತನಕ 20 ಧ್ವನಿಸುರುಳಿಗಳು ಬಿಡುಗಡೆಯಾಗಿವೆ. ಇದರ ಪ್ರಭಾವದಿಂದ ಸುತಾರರ ಪ್ರವಚನ ಮತ್ತು ಪದಗಳು ಮೊಬೈಲ್‍ನಲ್ಲಿಯೂ, ಟಿವಿಗಳಲ್ಲಿಯೂ ವ್ಯಾಪಕವಾಗಿ ಹರಡಿವೆ.

ಸುತಾರರು ತಮ್ಮ ಪ್ರವಚನದ ಜತೆ ಸಾಮಾಜಿಕ ಕಾಳಜಿಯ ಕಡೆ ಮುಖ ಮಾಡಿರುವುದು ಮುಖ್ಯವಾಗಿದೆ. ಇಲ್ಲಿ ಅವರು ಸಾಮೂಹಿಕ ಹಿತದ ಕೆಲಸಗಳಿಗೆ ಹೆಚ್ಚು ಗಮನಹರಿಸಿದ್ದಾರೆ. ರಸ್ತೆ ಮಾಡಿಸಿದ್ದು, ಶಾಲೆ ಕಟ್ಟಿಸಿದ್ದು, ಕುಡಿಯುವ ನೀರಿನ ಟ್ಯಾಂಕ್ ಕಟ್ಟಿಸಿದ್ದು ಇತ್ಯಾದಿಗಳು. ಇಂತಹ ಕೆಲಸಗಳಿಗೆ ಬಂದೊದಗಿದ ಸಂದರ್ಭಗಳು, ಇಂತಹ ಸಂದರ್ಭವನ್ನು ಸುತಾರರು ನಿಭಾಯಿಸಿದ ಬಗೆ ಎರಡೂ ಭಿನ್ನವಾಗಿದೆ.

ಸುತಾರರನ್ನು ಉತ್ತರ ಕರ್ನಾಟಕದಲ್ಲಿ `ಕನ್ನಡದ ಕಬೀರ’ನೆಂದು ಗುರುತಿಸುತ್ತಾರೆ. ಈ ಬಗ್ಗೆ ರಂಜಾನ್ ದರ್ಗಾ ಅವರು `ಸಂತ ಕಬೀರ ದುಷ್ಟಶಕ್ತಿಗಳನ್ನು ಎದುರುಹಾಕಿಕೊಂಡು ವೈಚಾರಿಕತೆಯ ಮಾನವ ಏಕತೆಯನ್ನು ಸಾಧಿಸಿದರೆ, ಇವರು ಯಾರನ್ನೂ ಎದುರು ಹಾಕಿಕೊಳ್ಳದೆ ಮಾನವ ಏಕತೆಯನ್ನು ಸಾಧಿಸುವ ಕ್ರಮ ಆಪ್ಯಾಯಮಾನವಾಗಿದೆ’ ಎನ್ನುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...