Homeಮುಖಪುಟಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ : ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ : ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

- Advertisement -
- Advertisement -

ಮಾರ್ಚ್ 9ರಂದು ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಜಯಗಳಿಸಿದ ಬಳಿಕ ಮಧ್ಯ ಪ್ರದೇಶದ ದೇವಾಸ್‌ನಲ್ಲಿ ನಡೆದ ಸಂಭ್ರಮಾಚರಣೆ ವೇಳೆ, ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಒಂಬತ್ತು ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಬಗ್ಗೆ ವರದಿಯಾಗಿದೆ.

ಪೊಲೀಸರು ಬಂಧಿತ ಯುವಕರ ತಲೆ ಬೋಳಿಸಿ, ಅವರನ್ನು ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದ್ದು, ಮಂಗಳವಾರ (ಮಾ.12) ಈ ಕುರಿತ ವಿಡಿಯೋಗಳು ವೈರಲ್ ಆದ ಬಳಿಕ ಆಕ್ರೋಶ ಭುಗಿಲೆದ್ದಿದೆ.

ಪೊಲೀಸರ ಕ್ರಮವನ್ನು ದೇವಾಸ್ ಬಿಜೆಪಿ ಶಾಸಕಿ ಗಾಯತ್ರಿ ರಾಜೇ ಪವಾರ್ ಖಂಡಿಸಿದ್ದು, “ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ. ಬಂಧನದಲ್ಲಿರುವವರು ನಿರಪರಾಧಿಗಳು” ಎಂದಿದ್ದಾರೆ.

ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಡ್ ಅವರನ್ನು ಭೇಟಿಯಾದ ಶಾಸಕಿ, ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಈ ಹಿನ್ನೆಲೆ, ಪೊಲೀಸರೊಂದಿಗೆ ಯುವಕರ ಘರ್ಷಣೆ, ಅವರ ತಲೆ ಬೋಳಿಸಿ ಮೆರವಣಿಗೆ ಮಾಡಿರುವುದು ಮತ್ತು ವಿವೇಚನಾರಹಿತ ಬಲಪ್ರಯೋಗ ಸೇರಿದಂತೆ ಇಡೀ ಪ್ರಕರಣದ ತನಿಖೆ ಮಾಡುವ ಜವಾಬ್ದಾರಿಯನ್ನು ಹೆಚ್ಚುವರಿ ಎಸ್ಪಿ ಜೈವೀರ್ ಸಿಂಗ್ ಭಡೋರಿಯಾ ಅವರಿಗೆ ವಹಿಸಲಾಗಿದೆ. ಏಳು ದಿನಗಳಲ್ಲಿ ಒಟ್ಟಾರೆ ಪ್ರಕರಣದ ವರದಿ ನೀಡುವಂತೆ ಸೂಚಿಸಲಾಗಿದೆ.

“ನಾವು ಈ ವಿಷಯವನ್ನು ಎಲ್ಲಾ ಕೋನಗಳಿಂದ ತನಿಖೆ ಮಾಡುತ್ತೇವೆ. ಏಳು ದಿನಗಳಲ್ಲಿ ಎಲ್ಲಾ ವಿಷಯವನ್ನು ಬಹಿರಂಗಪಡಿಸುತ್ತೇವೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ” ಎಂದು ಎಸ್ಪಿ ಗೆಹ್ಲೋಡ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮಾರ್ಚ್ 9ರ ರಾತ್ರಿ ಭಾರತೀಯ ಪುರುಷರ ಕ್ರಿಕೆಟ್ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ದೇವಾಸ್‌ನ ಕೆಲವು ಭಾಗಗಳಲ್ಲಿ ಘರ್ಷಣೆಗಳು ಮತ್ತು ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿವೆ. ಅಂತಹ ಒಂದು ಘಟನೆಯಲ್ಲಿ, ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಕೆಲವು ಯುವಕರು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅಜಯ್ ಗುರ್ಜರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...