Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...