Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...