Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...