Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...