Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...