Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...