Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...