Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...