Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...