Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...