Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...