Homeಕ್ರೀಡೆಕ್ರಿಕೆಟ್ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

ICC ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆ; ಭಾರತ ತಂಡದ ಪಂದ್ಯಗಳ ವಿವರ ಇಲ್ಲಿದೆ..

- Advertisement -
- Advertisement -

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಬಿಡುಗಡೆ ಮಾಡಿದೆ.

ಈ ಟೂರ್ನಿಯು ಅಕ್ಟೋಬರ್ 5ರಿಂದ ನವೆಂಬರ್ 19ರ ವರೆಗೆ ದೇಶದ 10 ನಗರಗಳಲ್ಲಿ ನಡೆಯಲಿದ್ದು, ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಆಯೋಜನೆಗೊಳ್ಳಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್ ಅಪ್ ನ್ಯೂಜಿಲೆಂಡ್ ಕಣಕ್ಕಿಳಿಯಲಿವೆ.

ವಿಶ್ವಕಪ್‌ನ ಆತಿಥ್ಯ ವಹಿಸಿರುವ ಭಾರತ ಅಕ್ಟೋಬರ್ 8ರಂದು ತನ್ನ ಮೊದಲ ಪಂದ್ಯ ಆಡಲಿದೆ. ಈ ಹಣಾಹಣಿಯು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ಚೆನ್ನೈನಲ್ಲಿ ನಡೆಯಲಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಐದು ಬಾರಿಯ ವಿಶ್ವ ಚಾಂಪಿಯನ್ಸ್‌ ಆಸ್ಟ್ರೇಲಿಯಾ ಎದುರು ಆಡಲಿದ್ದು, ಈ ಹೈ-ವೋಲ್ಟೇಜ್‌ ಹಣಾಹಣಿ ಅಕ್ಟೋಬರ್ 8ರಂದು ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಜರುಗಲಿದೆ.

10 ತಂಡಗಳು ಭಾಗಿ

ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಮೊದಲ ಎಂಟು ತಂಡಗಳು ಈಗಾಗಲೇ ಅರ್ಹತೆ ಗಿಟ್ಟಿಸಿವೆ. ಜಿಂಬಾಬ್ಬೆಯಲ್ಲಿ ನಡೆಯುತ್ತಿರುವ ಅರ್ಹತಾ ಸುತ್ತಿನ ಪಂದ್ಯಗಳು ಮುಗಿದ ಬಳಿಕ ಉಳಿದೆರಡು ತಂಡಗಳು ಯಾವುವು ಎಂಬುದು ಗೊತ್ತಾಗಲಿದೆ.

ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನೇರವಾಗಿ ಟೂರ್ನಿಯಲ್ಲಿ ಆಡಲಿವೆ. ಉಳಿದೆರಡು ಸ್ಥಾನಕ್ಕಾಗಿ ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ಬೆ ಹಾಗೂ ಇತರ ತಂಡಗಳು ಪೈಪೋಟಿ ನಡೆಸುತ್ತಿವೆ.

ಪ್ರತಿ ತಂಡ ತಲಾ 9 ಪಂದ್ಯಗಳನ್ನು ಆಡಲಿದೆ. ಅಗ್ರ 4 ಸ್ಥಾನಗಳಲ್ಲಿ ಉಳಿಯುವ ತಂಡಗಳು ಸೆಮಿಫೈನಲ್ ಟಿಕೆಟ್ ಗಿಟ್ಟಿಸಲಿವೆ.

2023ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಡಲಿರುವ ಪಂದ್ಯಗಳ ವೇಳಾಪಟ್ಟಿ

ಟೂರ್ನಿಯ 5ನೇ ಪಂದ್ಯ

ಭಾರತ vs ಆಸ್ಟ್ರೇಲಿಯಾ
ಅಕ್ಟೋಬರ್ 8, 2023 (ಭಾನುವಾರ)
ಮಧ್ಯಾಹ್ನ 2:00
ಎಂಎ ಚಿದಂಬರಂ, ಚೆನ್ನೈ

ಟೂರ್ನಿಯ 8ನೇ ಪಂದ್ಯ

ಭಾರತ vs ಅಫಘಾನಿಸ್ತಾನ
ಅಕ್ಟೋಬರ್ 11, 2023 (ಬುಧವಾರ)
ಮಧ್ಯಾಹ್ನ 2:00
ಅರುಣ್ ಜೇಟ್ಲಿ ಕ್ರೀಡಾಂಗಣ, ಹೊಸದಿಲ್ಲಿ

ಟೂರ್ನಿಯ 13ನೇ ಪಂದ್ಯ

ಭಾರತ vs ಪಾಕಿಸ್ತಾನ
ಅಕ್ಟೋಬರ್ 15, 2023 (ಭಾನುವಾರ)
ಮಧ್ಯಾಹ್ನ 2:00
ನರೇಂದ್ರ ಮೋದಿ ಸ್ಟೇಡಿಯಂ, ಅಹ್ಮದಾಬಾದ್

ಟೂರ್ನಿಯ 17ನೇ ಪಂದ್ಯ

ಭಾರತ vs ಬಾಂಗ್ಲಾದೇಶ
ಅಕ್ಟೋಬರ್ 19, 2023 (ಗುರುವಾರ)
ಮಧ್ಯಾಹ್ನ 2:00
ಎಂಸಿಎ ಸ್ಟೇಡಿಯಂ, ಪುಣೆ

ಟೂರ್ನಿಯ 21ನೇ ಪಂದ್ಯ

ಭಾರತ vs ನ್ಯೂಜಿಲೆಂಡ್‌
ಅಕ್ಟೋಬರ್ 22, 2023 (ಭಾನುವಾರ)
ಮಧ್ಯಾಹ್ನ 2:00
ಎಚ್‌ಪಿಸಿಎ ಸ್ಟೇಡಿಯಂ, ಧರ್ಮಶಾಲಾ

ಟೂರ್ನಿಯ 29ನೇ ಪಂದ್ಯ

ಭಾರತ vs ಇಂಗ್ಲೆಂಡ್‌
ಅಕ್ಟೋಬರ್ 29, 2023 (ಭಾನುವಾರ)
ಮಧ್ಯಾಹ್ನ 2:00, ಏಕನಾ ಸ್ಟೇಡಿಯಂ, ಲಖನೌ

ಟೂರ್ನಿಯ 33ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 2
ನವೆಂಬರ್ 2, 2023 (ಗುರುವಾರ)
ಮಧ್ಯಾಹ್ನ 2:00
ವಾಂಖೆಡೆ ಸ್ಟೇಡಿಯಂ, ಮುಂಬೈ

ಟೂರ್ನಿಯ 37ನೇ ಪಂದ್ಯ

ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 5, 2023 (ಭಾನುವಾರ)
ಮಧ್ಯಾಹ್ನ 2:00
ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಟೂರ್ನಿಯ 43ನೇ ಪಂದ್ಯ

ಭಾರತ vs ಕ್ವಾಲಿಫೈಯರ್‌ 1
ನವೆಂಬರ್ 11, 2023 (ಶನಿವಾರ)
ಮಧ್ಯಾಹ್ನ 2:00
ಎಂ ಚಿನ್ನಸ್ವಾಮಿ, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...