Homeಮುಖಪುಟಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

- Advertisement -
- Advertisement -

ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ನಡೆದ ಇಸ್ರೇಲ್ ಮೇಲಿನ ದಾಳಿ ಮತ್ತು ನಂತರ ಗಾಝಾದಲ್ಲಿ ನಡೆದ ಯುದ್ಧದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಎರಡು ಕಡೆಯ ಪ್ರಮುಖರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್, ಹಮಾಸ್‌ನ ಇಬ್ಬರು ಪ್ರಮುಖ ನಾಯಕರಾದ ಅಲ್ ಕ್ವಸೀಮ್ ಬ್ರಿಗೇಡ್‌ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ (ಮೊಹಮ್ಮದ್ ದೆಯಿಫ್) ಮತ್ತು ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನೂ ಯುದ್ಧಾಪರಾಧಕ್ಕೆ ಹೊಣೆಯಾಗಿಸಬೇಕು ಎಂದು ಕರೀಂ ಖಾನ್ ಹೇಳಿದ್ದಾರೆ.

ಅಮೆರಿಕದ ಮಿತ್ರ ರಾಷ್ಟ್ರ ಇಸ್ರೇಲ್‌ನ ನಾಯಕರ ವಿರುದ್ದ ಇದೇ ಮೊದಲ ಬಾರಿಗೆ ಐಸಿಸಿ ಬಂಧನ ವಾರೆಂಟ್ ಜಾರಿಗೊಳಿಸಲು ಮುಂದಾಗಿದೆ. ಉಕ್ರೇನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾದ ನಾಯಕರ ವಿರುದ್ದವೂ ಇದೇ ರೀತಿಯ ಆದೇಶ ನೀಡಿತ್ತು. 2011ರಲ್ಲಿ ಜನರು ದಂಗೆಯೆದ್ದು ಲಿಬಿಯಾದ ಸರ್ವಾಧಿಕಾರಿ ಉಮರ್ ಗಡಾಫಿಯನ್ನು ಹತ್ಯೆಗೈದಿದ್ದರು. ಆ ಸಂದರ್ಭದಲ್ಲಿ ಗಡಾಫಿ ಕೂಡ ಐಸಿಸಿಯಿಂದ ಬಂಧನ ವಾರೆಂಟ್ ಎದುರಿಸುತ್ತಿದ್ದರು.

ಹಮಾಸ್ ಮತ್ತು ಇಸ್ರೇಲ್ ನಾಯಕರ ವಿರುದ್ದ ಒಂದೇ ರೀತಿಯ ಆರೋಪಗಳನ್ನು ಹೊರಿಸಿ ಬಂಧನ ವಾರೆಂಟ್ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ, ಭಯೋತ್ಪಾದಕ ಸಂಘಟನೆ ಮತ್ತು ಚುನಾಯಿತ ಸರ್ಕಾರದ ನಾಯಕರನ್ನು ಒಂದೇ ತಕ್ಕಡಿಯಲ್ಲಿ ತೂಗಿದೆ, ಎಂಬ ಟೀಕೆಗೆ ಗುರಿಯಾಗಬಹುದು ಎಂದು ಸಿಎನ್ಎನ್‌ ಅಭಿಪ್ರಾಯಪಟ್ಟಿದೆ.

ಹಮಾಸ್ ನಾಯಕರಾದ ಸಿನ್ವಾರ್, ಹನಿಯೆಹ್ ಮತ್ತು ಅಲ್-ಮಸ್ರಿ ವಿರುದ್ಧದ ಸಾಮೂಹಿಕ ಹತ್ಯೆ, ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವುದು, ಅತ್ಯಾಚಾರ ಮತ್ತು ಬಂಧನದಲ್ಲಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿವೆ ಎಂದು ಖಾನ್ ಹೇಳಿದ್ದಾರೆ.

ಇಸ್ರೇಲ್‌ಗೆ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳುವ ಎಲ್ಲಾ ಹಕ್ಕುಗಳು ಇವೆ. ಆದರೆ, ಅವರು ಅದನ್ನು ಕಾನೂನನ್ನು ಪಾಲಿಸುವ ಮೂಲಕ ಮಾಡಬೇಕು ಎಂದಿದ್ದಾರೆ.

ಖಾನ್ ಅವರ ಹೇಳಿಕೆಯನ್ನು ಹಮಾಸ್ ಖಂಡಿಸಿದೆ. ಕಾನೂನಿನ ಆಧಾರವಿಲ್ಲದೆ ಪ್ಯಾಲೆಸ್ತೀನ್ ಪ್ರತಿರೋಧದ ನಾಯಕರ ವಿರುದ್ಧ ಬಂಧನ ವಾರಂಟ್‌ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ ಪ್ರಾಸಿಕ್ಯೂಟರ್ ಬಲಿಪಶುಗಳನ್ನು ಆಕ್ರಮಣಕಾರರೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದಾರೆ ಎಂದಿದೆ.

‘ಯಾರೂ ಕಾನೂನಿಗಿಂತ ಮೇಲಲ್ಲ’

ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ರಕ್ಷಣಾ ಸಚಿವ ಗ್ಯಾಲಂಟ್ ವಿರುದ್ಧ ಸಾಮೂಹಿಕ ಹತ್ಯೆ, ಹಸಿವಿನಿಂದ ಕೆಡವುದು, ಮಾನವೀಯ ಪರಿಹಾರ ಸರಬರಾಜುಗಳನ್ನು ನಿರಾಕರಿಸುವುದು, ಸಂಘರ್ಷದ ವೇಳೆ ಅಮಾಯಕ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದು ಸೇರಿದಂತೆ ಹಲವಾರು ಆರೋಪಗಳಿವೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಕರೀಂ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ಬನಾರಸ್ ಹಿಂದೂ ವಿವಿ ಕೋವಾಕ್ಸಿನ್ ಅಧ್ಯಯನ ವರದಿಯಿಂದ ಅಂತರ ಕಾಯ್ದುಕೊಂಡ ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...