Homeಮುಖಪುಟಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

- Advertisement -
- Advertisement -

ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ನಡೆದ ಇಸ್ರೇಲ್ ಮೇಲಿನ ದಾಳಿ ಮತ್ತು ನಂತರ ಗಾಝಾದಲ್ಲಿ ನಡೆದ ಯುದ್ಧದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಎರಡು ಕಡೆಯ ಪ್ರಮುಖರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್, ಹಮಾಸ್‌ನ ಇಬ್ಬರು ಪ್ರಮುಖ ನಾಯಕರಾದ ಅಲ್ ಕ್ವಸೀಮ್ ಬ್ರಿಗೇಡ್‌ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ (ಮೊಹಮ್ಮದ್ ದೆಯಿಫ್) ಮತ್ತು ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನೂ ಯುದ್ಧಾಪರಾಧಕ್ಕೆ ಹೊಣೆಯಾಗಿಸಬೇಕು ಎಂದು ಕರೀಂ ಖಾನ್ ಹೇಳಿದ್ದಾರೆ.

ಅಮೆರಿಕದ ಮಿತ್ರ ರಾಷ್ಟ್ರ ಇಸ್ರೇಲ್‌ನ ನಾಯಕರ ವಿರುದ್ದ ಇದೇ ಮೊದಲ ಬಾರಿಗೆ ಐಸಿಸಿ ಬಂಧನ ವಾರೆಂಟ್ ಜಾರಿಗೊಳಿಸಲು ಮುಂದಾಗಿದೆ. ಉಕ್ರೇನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾದ ನಾಯಕರ ವಿರುದ್ದವೂ ಇದೇ ರೀತಿಯ ಆದೇಶ ನೀಡಿತ್ತು. 2011ರಲ್ಲಿ ಜನರು ದಂಗೆಯೆದ್ದು ಲಿಬಿಯಾದ ಸರ್ವಾಧಿಕಾರಿ ಉಮರ್ ಗಡಾಫಿಯನ್ನು ಹತ್ಯೆಗೈದಿದ್ದರು. ಆ ಸಂದರ್ಭದಲ್ಲಿ ಗಡಾಫಿ ಕೂಡ ಐಸಿಸಿಯಿಂದ ಬಂಧನ ವಾರೆಂಟ್ ಎದುರಿಸುತ್ತಿದ್ದರು.

ಹಮಾಸ್ ಮತ್ತು ಇಸ್ರೇಲ್ ನಾಯಕರ ವಿರುದ್ದ ಒಂದೇ ರೀತಿಯ ಆರೋಪಗಳನ್ನು ಹೊರಿಸಿ ಬಂಧನ ವಾರೆಂಟ್ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ, ಭಯೋತ್ಪಾದಕ ಸಂಘಟನೆ ಮತ್ತು ಚುನಾಯಿತ ಸರ್ಕಾರದ ನಾಯಕರನ್ನು ಒಂದೇ ತಕ್ಕಡಿಯಲ್ಲಿ ತೂಗಿದೆ, ಎಂಬ ಟೀಕೆಗೆ ಗುರಿಯಾಗಬಹುದು ಎಂದು ಸಿಎನ್ಎನ್‌ ಅಭಿಪ್ರಾಯಪಟ್ಟಿದೆ.

ಹಮಾಸ್ ನಾಯಕರಾದ ಸಿನ್ವಾರ್, ಹನಿಯೆಹ್ ಮತ್ತು ಅಲ್-ಮಸ್ರಿ ವಿರುದ್ಧದ ಸಾಮೂಹಿಕ ಹತ್ಯೆ, ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವುದು, ಅತ್ಯಾಚಾರ ಮತ್ತು ಬಂಧನದಲ್ಲಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿವೆ ಎಂದು ಖಾನ್ ಹೇಳಿದ್ದಾರೆ.

ಇಸ್ರೇಲ್‌ಗೆ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳುವ ಎಲ್ಲಾ ಹಕ್ಕುಗಳು ಇವೆ. ಆದರೆ, ಅವರು ಅದನ್ನು ಕಾನೂನನ್ನು ಪಾಲಿಸುವ ಮೂಲಕ ಮಾಡಬೇಕು ಎಂದಿದ್ದಾರೆ.

ಖಾನ್ ಅವರ ಹೇಳಿಕೆಯನ್ನು ಹಮಾಸ್ ಖಂಡಿಸಿದೆ. ಕಾನೂನಿನ ಆಧಾರವಿಲ್ಲದೆ ಪ್ಯಾಲೆಸ್ತೀನ್ ಪ್ರತಿರೋಧದ ನಾಯಕರ ವಿರುದ್ಧ ಬಂಧನ ವಾರಂಟ್‌ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ ಪ್ರಾಸಿಕ್ಯೂಟರ್ ಬಲಿಪಶುಗಳನ್ನು ಆಕ್ರಮಣಕಾರರೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದಾರೆ ಎಂದಿದೆ.

‘ಯಾರೂ ಕಾನೂನಿಗಿಂತ ಮೇಲಲ್ಲ’

ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ರಕ್ಷಣಾ ಸಚಿವ ಗ್ಯಾಲಂಟ್ ವಿರುದ್ಧ ಸಾಮೂಹಿಕ ಹತ್ಯೆ, ಹಸಿವಿನಿಂದ ಕೆಡವುದು, ಮಾನವೀಯ ಪರಿಹಾರ ಸರಬರಾಜುಗಳನ್ನು ನಿರಾಕರಿಸುವುದು, ಸಂಘರ್ಷದ ವೇಳೆ ಅಮಾಯಕ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದು ಸೇರಿದಂತೆ ಹಲವಾರು ಆರೋಪಗಳಿವೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಕರೀಂ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ಬನಾರಸ್ ಹಿಂದೂ ವಿವಿ ಕೋವಾಕ್ಸಿನ್ ಅಧ್ಯಯನ ವರದಿಯಿಂದ ಅಂತರ ಕಾಯ್ದುಕೊಂಡ ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...