Homeಮುಖಪುಟಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

- Advertisement -
- Advertisement -

ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ನಡೆದ ಇಸ್ರೇಲ್ ಮೇಲಿನ ದಾಳಿ ಮತ್ತು ನಂತರ ಗಾಝಾದಲ್ಲಿ ನಡೆದ ಯುದ್ಧದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಎರಡು ಕಡೆಯ ಪ್ರಮುಖರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್, ಹಮಾಸ್‌ನ ಇಬ್ಬರು ಪ್ರಮುಖ ನಾಯಕರಾದ ಅಲ್ ಕ್ವಸೀಮ್ ಬ್ರಿಗೇಡ್‌ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ (ಮೊಹಮ್ಮದ್ ದೆಯಿಫ್) ಮತ್ತು ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನೂ ಯುದ್ಧಾಪರಾಧಕ್ಕೆ ಹೊಣೆಯಾಗಿಸಬೇಕು ಎಂದು ಕರೀಂ ಖಾನ್ ಹೇಳಿದ್ದಾರೆ.

ಅಮೆರಿಕದ ಮಿತ್ರ ರಾಷ್ಟ್ರ ಇಸ್ರೇಲ್‌ನ ನಾಯಕರ ವಿರುದ್ದ ಇದೇ ಮೊದಲ ಬಾರಿಗೆ ಐಸಿಸಿ ಬಂಧನ ವಾರೆಂಟ್ ಜಾರಿಗೊಳಿಸಲು ಮುಂದಾಗಿದೆ. ಉಕ್ರೇನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾದ ನಾಯಕರ ವಿರುದ್ದವೂ ಇದೇ ರೀತಿಯ ಆದೇಶ ನೀಡಿತ್ತು. 2011ರಲ್ಲಿ ಜನರು ದಂಗೆಯೆದ್ದು ಲಿಬಿಯಾದ ಸರ್ವಾಧಿಕಾರಿ ಉಮರ್ ಗಡಾಫಿಯನ್ನು ಹತ್ಯೆಗೈದಿದ್ದರು. ಆ ಸಂದರ್ಭದಲ್ಲಿ ಗಡಾಫಿ ಕೂಡ ಐಸಿಸಿಯಿಂದ ಬಂಧನ ವಾರೆಂಟ್ ಎದುರಿಸುತ್ತಿದ್ದರು.

ಹಮಾಸ್ ಮತ್ತು ಇಸ್ರೇಲ್ ನಾಯಕರ ವಿರುದ್ದ ಒಂದೇ ರೀತಿಯ ಆರೋಪಗಳನ್ನು ಹೊರಿಸಿ ಬಂಧನ ವಾರೆಂಟ್ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ, ಭಯೋತ್ಪಾದಕ ಸಂಘಟನೆ ಮತ್ತು ಚುನಾಯಿತ ಸರ್ಕಾರದ ನಾಯಕರನ್ನು ಒಂದೇ ತಕ್ಕಡಿಯಲ್ಲಿ ತೂಗಿದೆ, ಎಂಬ ಟೀಕೆಗೆ ಗುರಿಯಾಗಬಹುದು ಎಂದು ಸಿಎನ್ಎನ್‌ ಅಭಿಪ್ರಾಯಪಟ್ಟಿದೆ.

ಹಮಾಸ್ ನಾಯಕರಾದ ಸಿನ್ವಾರ್, ಹನಿಯೆಹ್ ಮತ್ತು ಅಲ್-ಮಸ್ರಿ ವಿರುದ್ಧದ ಸಾಮೂಹಿಕ ಹತ್ಯೆ, ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವುದು, ಅತ್ಯಾಚಾರ ಮತ್ತು ಬಂಧನದಲ್ಲಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿವೆ ಎಂದು ಖಾನ್ ಹೇಳಿದ್ದಾರೆ.

ಇಸ್ರೇಲ್‌ಗೆ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳುವ ಎಲ್ಲಾ ಹಕ್ಕುಗಳು ಇವೆ. ಆದರೆ, ಅವರು ಅದನ್ನು ಕಾನೂನನ್ನು ಪಾಲಿಸುವ ಮೂಲಕ ಮಾಡಬೇಕು ಎಂದಿದ್ದಾರೆ.

ಖಾನ್ ಅವರ ಹೇಳಿಕೆಯನ್ನು ಹಮಾಸ್ ಖಂಡಿಸಿದೆ. ಕಾನೂನಿನ ಆಧಾರವಿಲ್ಲದೆ ಪ್ಯಾಲೆಸ್ತೀನ್ ಪ್ರತಿರೋಧದ ನಾಯಕರ ವಿರುದ್ಧ ಬಂಧನ ವಾರಂಟ್‌ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ ಪ್ರಾಸಿಕ್ಯೂಟರ್ ಬಲಿಪಶುಗಳನ್ನು ಆಕ್ರಮಣಕಾರರೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದಾರೆ ಎಂದಿದೆ.

‘ಯಾರೂ ಕಾನೂನಿಗಿಂತ ಮೇಲಲ್ಲ’

ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ರಕ್ಷಣಾ ಸಚಿವ ಗ್ಯಾಲಂಟ್ ವಿರುದ್ಧ ಸಾಮೂಹಿಕ ಹತ್ಯೆ, ಹಸಿವಿನಿಂದ ಕೆಡವುದು, ಮಾನವೀಯ ಪರಿಹಾರ ಸರಬರಾಜುಗಳನ್ನು ನಿರಾಕರಿಸುವುದು, ಸಂಘರ್ಷದ ವೇಳೆ ಅಮಾಯಕ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದು ಸೇರಿದಂತೆ ಹಲವಾರು ಆರೋಪಗಳಿವೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಕರೀಂ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ಬನಾರಸ್ ಹಿಂದೂ ವಿವಿ ಕೋವಾಕ್ಸಿನ್ ಅಧ್ಯಯನ ವರದಿಯಿಂದ ಅಂತರ ಕಾಯ್ದುಕೊಂಡ ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...