Homeಮುಖಪುಟಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

- Advertisement -
- Advertisement -

ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ನಡೆದ ಇಸ್ರೇಲ್ ಮೇಲಿನ ದಾಳಿ ಮತ್ತು ನಂತರ ಗಾಝಾದಲ್ಲಿ ನಡೆದ ಯುದ್ಧದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಎರಡು ಕಡೆಯ ಪ್ರಮುಖರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್, ಹಮಾಸ್‌ನ ಇಬ್ಬರು ಪ್ರಮುಖ ನಾಯಕರಾದ ಅಲ್ ಕ್ವಸೀಮ್ ಬ್ರಿಗೇಡ್‌ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ (ಮೊಹಮ್ಮದ್ ದೆಯಿಫ್) ಮತ್ತು ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನೂ ಯುದ್ಧಾಪರಾಧಕ್ಕೆ ಹೊಣೆಯಾಗಿಸಬೇಕು ಎಂದು ಕರೀಂ ಖಾನ್ ಹೇಳಿದ್ದಾರೆ.

ಅಮೆರಿಕದ ಮಿತ್ರ ರಾಷ್ಟ್ರ ಇಸ್ರೇಲ್‌ನ ನಾಯಕರ ವಿರುದ್ದ ಇದೇ ಮೊದಲ ಬಾರಿಗೆ ಐಸಿಸಿ ಬಂಧನ ವಾರೆಂಟ್ ಜಾರಿಗೊಳಿಸಲು ಮುಂದಾಗಿದೆ. ಉಕ್ರೇನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾದ ನಾಯಕರ ವಿರುದ್ದವೂ ಇದೇ ರೀತಿಯ ಆದೇಶ ನೀಡಿತ್ತು. 2011ರಲ್ಲಿ ಜನರು ದಂಗೆಯೆದ್ದು ಲಿಬಿಯಾದ ಸರ್ವಾಧಿಕಾರಿ ಉಮರ್ ಗಡಾಫಿಯನ್ನು ಹತ್ಯೆಗೈದಿದ್ದರು. ಆ ಸಂದರ್ಭದಲ್ಲಿ ಗಡಾಫಿ ಕೂಡ ಐಸಿಸಿಯಿಂದ ಬಂಧನ ವಾರೆಂಟ್ ಎದುರಿಸುತ್ತಿದ್ದರು.

ಹಮಾಸ್ ಮತ್ತು ಇಸ್ರೇಲ್ ನಾಯಕರ ವಿರುದ್ದ ಒಂದೇ ರೀತಿಯ ಆರೋಪಗಳನ್ನು ಹೊರಿಸಿ ಬಂಧನ ವಾರೆಂಟ್ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ, ಭಯೋತ್ಪಾದಕ ಸಂಘಟನೆ ಮತ್ತು ಚುನಾಯಿತ ಸರ್ಕಾರದ ನಾಯಕರನ್ನು ಒಂದೇ ತಕ್ಕಡಿಯಲ್ಲಿ ತೂಗಿದೆ, ಎಂಬ ಟೀಕೆಗೆ ಗುರಿಯಾಗಬಹುದು ಎಂದು ಸಿಎನ್ಎನ್‌ ಅಭಿಪ್ರಾಯಪಟ್ಟಿದೆ.

ಹಮಾಸ್ ನಾಯಕರಾದ ಸಿನ್ವಾರ್, ಹನಿಯೆಹ್ ಮತ್ತು ಅಲ್-ಮಸ್ರಿ ವಿರುದ್ಧದ ಸಾಮೂಹಿಕ ಹತ್ಯೆ, ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವುದು, ಅತ್ಯಾಚಾರ ಮತ್ತು ಬಂಧನದಲ್ಲಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿವೆ ಎಂದು ಖಾನ್ ಹೇಳಿದ್ದಾರೆ.

ಇಸ್ರೇಲ್‌ಗೆ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳುವ ಎಲ್ಲಾ ಹಕ್ಕುಗಳು ಇವೆ. ಆದರೆ, ಅವರು ಅದನ್ನು ಕಾನೂನನ್ನು ಪಾಲಿಸುವ ಮೂಲಕ ಮಾಡಬೇಕು ಎಂದಿದ್ದಾರೆ.

ಖಾನ್ ಅವರ ಹೇಳಿಕೆಯನ್ನು ಹಮಾಸ್ ಖಂಡಿಸಿದೆ. ಕಾನೂನಿನ ಆಧಾರವಿಲ್ಲದೆ ಪ್ಯಾಲೆಸ್ತೀನ್ ಪ್ರತಿರೋಧದ ನಾಯಕರ ವಿರುದ್ಧ ಬಂಧನ ವಾರಂಟ್‌ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ ಪ್ರಾಸಿಕ್ಯೂಟರ್ ಬಲಿಪಶುಗಳನ್ನು ಆಕ್ರಮಣಕಾರರೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದಾರೆ ಎಂದಿದೆ.

‘ಯಾರೂ ಕಾನೂನಿಗಿಂತ ಮೇಲಲ್ಲ’

ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ರಕ್ಷಣಾ ಸಚಿವ ಗ್ಯಾಲಂಟ್ ವಿರುದ್ಧ ಸಾಮೂಹಿಕ ಹತ್ಯೆ, ಹಸಿವಿನಿಂದ ಕೆಡವುದು, ಮಾನವೀಯ ಪರಿಹಾರ ಸರಬರಾಜುಗಳನ್ನು ನಿರಾಕರಿಸುವುದು, ಸಂಘರ್ಷದ ವೇಳೆ ಅಮಾಯಕ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದು ಸೇರಿದಂತೆ ಹಲವಾರು ಆರೋಪಗಳಿವೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಕರೀಂ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ಬನಾರಸ್ ಹಿಂದೂ ವಿವಿ ಕೋವಾಕ್ಸಿನ್ ಅಧ್ಯಯನ ವರದಿಯಿಂದ ಅಂತರ ಕಾಯ್ದುಕೊಂಡ ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...