Homeಮುಖಪುಟಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

- Advertisement -
- Advertisement -

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ.

ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮತ್ತೆ ಆರಂಭಿಕ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆ.ಎಲ್ ರಾಹುಲ್ ಜವಾಬ್ದಾರಿಯುತ ಆಟವಾಡಿದರು. 32 ಎಸೆತಗಳಲ್ಲಿ 50 ರನ್ ಗಳಿಸಿದರು. ವಿರಾಟ್ ಕೊಹ್ಲಿ ಮತ್ತೊಮ್ಮೆ ಆಕರ್ಷಕ ಪ್ರದರ್ಶನ ನೀಡಿ 44 ಎಸೆತಗಳಲ್ಲಿ 64 ರನ್ ಗಳಿಸಿ ಭಾರತ ತಂಡ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿದ ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ ಕೇವಲ 5 ರನ್ ಗಳಿಸಿ ಔಟಾದರೆ ದಿನೇಶ್ ಕಾರ್ತಿಕ್ ಸಹ 07 ರನ್ ಗಳಿಸಿದ್ದಾಗ ರನ್ ಔಟ್ ಆದರು.

ಆಲ್ ರೌಂಡರ್ ಅಕ್ಸರ್ ಪಟೇಲ್ ರನ್ ಗಳಿಸಲು ತಿಣುಕಾಡಿದರು. ಆರ್. ಅಶ್ವಿನ್ ಕೊನೆಯಲ್ಲಿ 6 ಎಸೆತಗಳಲ್ಲಿ 13 ರನ್ ಗಳಿಸಿ ತಂಡಕ್ಕೆ ನೆರವಾದರು. ಭಾರತ ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು.

ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿತು.

ಛಲಬಿಡೆದೆ ಆಡಿದ ಬಾಂಗ್ಲಾದ ಸೋಹಾನ್ ಬೌಂಡರಿ ಮೇಲೆ ಬೌಂಡರಿ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಕೊನೆಯ ಓವರ್‌ನಲ್ಲಿ ಗೆಲುವಿಗೆ 21 ರನ್ ಗಳಿಸಬೇಕಿತ್ತು. ಆದರೆ ಸಾಧ್ಯವಾಗಲಿಲ್ಲ.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...