Homeಸಿನಿಮಾಕ್ರೀಡೆಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

ಆಡಿಸಿ ನೋಡು, ಬೀಳಿಸಿ ನೋಡು ಉರುಳಿ ಹೋಗದು! ಭಾರತದ ಇವಿಎಂ ಮತ್ತು ಕ್ರಿಕೆಟ್‍ನ ‘ಝಿಂಗ್’ ಬೇಲ್ಸ್!

- Advertisement -
- Advertisement -

| ಮಲ್ಲಿ |

ಸದ್ಯ ಸುದ್ದಿಯಲ್ಲಿರುವ ವಿಶ್ವಕಪ್ ಕ್ರಿಕೆಟ್‍ನಲ್ಲಿ ‘ಝಿಂಗ್’ ಬೇಲ್ಸ್‍ಗಳು ಅಲ್ಲಾಡುತ್ತಲೇ ಇಲ್ಲ! ಒಮ್ಮೆ ನಮ್ಮ ಬೂಮ್ರಾ ಬಿರುಸಾಗಿ ಎಸೆದಾಗ ಚೆಂಡು ಸ್ಟಂಪ್‍ಗೆ ತಾಗಿತು, ಆದರೆ ‘ಝಿಂಗ್’ ಬೇಲ್ಸ್ ಮಿಸುಕಲೇ ಇಲ್ಲ, ಬೇಲ್ಸ್‍ನಲ್ಲಿರುವ ದೀಪಗಳು ಮಿನುಗಲೂ ಇಲ!. ಹೀಗಾಗಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಓಟಾಗಿಯೂ ಓಟಾಗಲಿಲ್ಲ! ಈ ಬೇಲ್ಸ್‍ಗಳನ್ನು ಕುಟ್ಟಿ ಪುಡಿ ಪುಡಿ ಮಾಡಬೇಕು ಎನಿಸಿರಬೇಕು ಜಸ್ಪ್ರಿತ್ ಬೂಮ್ರಾಗೆ!

ಆದರೆ ಕುಟ್ಟೊಂಗಿಲ್ಲ, ತಟ್ಟಂಗಿಲ್ಲ… ಟೂರ್ನಿ ಆರಂಭವಾದ ಮೇಲೆ ಕನಿಷ್ಠ ಐದು ಸಲವಾದರೂ ‘ಅಳ್ಳಾಡದ’ ಬೇಲ್ಸ್‍ಗಳ ಕಾರಣದಿಂದ ಬೌಲರ್‍ಗಳು ನಿರಾಶರಾಗಿದ್ದಾರೆ. ಒಂಥರಾ ನಮ್ಮ ಇವಿಯಂಗಳಂತೆ ವಿಚಿತ್ರ ವರ್ತನೆ ತೋರುತ್ತಿವೆಯೇ ಈ ‘ಝಿಂಗ್’ ಬೇಲ್ಸ್? ವಿಶ್ವಕಪ್ ಮುಗಿಯುವವರೆಗೂ ಈ ಬೇಲ್ಸ್ ಬದಲಿಸುವುದಿಲ್ಲ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೇಳಿದೆ.. ಥೇಟು ನಮ್ಮ ಚುನಾವಣಾ ಆಯೋಗದ ಹಾಗೆಯೇ!

ಇವಿಎಂಗಳನ್ನು ತಿರುಚುವುದು ಸಾಧ್ಯ ಎಂಬುದನ್ನು ಹಲವಾರು ತಜ್ಞರು ದೃಢಪಡಿಸಿದ್ದಾರೆ. ಆದರೆ, ನಮ್ಮ ಚುನಾವಣಾ ಆಯೋಗವು ಜನರಲ್ಲಿನ ಸಂಶಯವನ್ನು ನಿವಾರಿಸುವ ಕೆಲಸವನ್ನು ಮಾಡಲೇ ಇಲ್ಲ. ಚುನಾವಣೆಯ ಮೊದಲ 4 ಹಂತಗಳಲ್ಲಿ 373 ಕ್ಷೇತ್ರಗಳಲ್ಲಿ ವೋಟ್ ಮಾಡಿದ ಮತ್ತು ಕೌಂಟ್ ಆದ ಮತಗಳ ನಡುವೆ 20-30 ಸಾವಿರ ವ್ಯತ್ಯಾಸವಿದ್ದರೂ ನಮ್ಮ ಆಯೋಗ ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ!

ಬ್ಯಾಟ್ಸಮನ್ ಒಬ್ಬನನ್ನು ನೇರ ಔಟ್ ಮಾಡಲು ಸ್ಟಂಪ್ ಮೇಲಿರುವ ಬೇಲ್ಸ್ ಹಾರುವಂತೆ ಅಥವಾ ಸ್ಟಂಪೇ ನೆಲಕ್ಕೆ ಬೀಳಬೇಕು ಎಂಬುದು ಪರಂಪರಾಗತ ನಿಯಮ. ಆದರೆ ಇಲ್ಲಿ ‘ಝಿಂಗ್’ ಮಾತ್ರ ಸ್ಥಾವರದಂತೆ ಅಂಟಿಕೊಂಡು ಬಿಟ್ಟಿದೆ. ಗಂಟೆಗೆ 110 ಮೈಲು ವೇಗದಲ್ಲಿ ಬಂದ ಬಾಲ್ ಸ್ಟಂಪ್‍ಗೆ ಅಪ್ಪಳಿಸಿದರೂ ‘ಝಿಂಗ್’ ಝುಮ್ಮ ಅಂತಾನೇ ಇಲ್ಲ. ಟೂರ್ನಿಯ ಮೊದಲ ಹತ್ತು ದಿನಗಳಲ್ಲೇ ಇಂತಹ 5 ನಿದರ್ಶನ ನಡೆದರೂ, ಐಸಿಸಿ ಮಾತ್ರ ಇಡೀ ಟೂರ್ನಿಮೆಂಟ್‍ವರೆಗೆ ಇದೇ ‘ಝಿಂಗ್-ಡಾಂಗ್’ ಮುಂದುವರೆಸುವುದಾಗಿ ಹೇಳಿದೆ.

‘ಮಿಸುಕದ ಝಿಂಗ್ ಕಾರಣದಿಂದ ಲೈಫ್ ಪಡೆದ ಆಟಗಾರನೇ ಪಂದ್ಯ ಗೆಲ್ಲಿಸಿದರೆ? ಆಗ ಸಮಸ್ಯೆ ಇನ್ನಷ್ಟು ಬಿಗಡಾಯಿಸಬಹುದು. ಟೂರ್ನಿಯ ಮೊದಲ ಹತ್ತು ದಿನಗಳಲ್ಲಿ ಇಂತಹ ನಿದರ್ಶನಗಳನ್ನು ನೋಡಿದ ಪಾಕಿಸ್ತಾನದ ನಿವೃತ್ತ ವೇಗಿ ಶೋಯಬ್ ಅಖ್ತರ್ ಟ್ವೀಟ್ ಮಾಡಿ.’ ಅಯ್ಯೋ ಅಲ್ಲಾ, ನನ್ನ ಕ್ರಿಕೆಟ್ ಜೀವನದಲ್ಲೇ ಇಂತಹ ಬೇಲ್ಸ್ ನೋಡಿರಲಿಲ್ಲ. ಅದೂ ಪ್ರತಿಷ್ಟಿತ ವಿಶ್ವಕಪ್‍ನಲ್ಲೇ ಹೀಗಾಗುತ್ತಿದೆಯಲ್ಲ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ…

ಈ ಬೇಲ್ಸ್’ಗಳೂ ಪಕ್ಷಪಾತ ಮಾಡ್ತಿವೆಯಾ? ಬೇಕಾದಾಗ ಉರುಳೋದು ಬೇಡವಾದಾಗ ಸ್ಟಂಪ್ಸ್ ತಬ್ಬಿ ಕೂಡೋದು! ಇದನ್ನು ‘ಬೇಲ್ ಫಿಕ್ಸಿಂಗ್’ ಅಂತಾ ಕರೆಯಬಹುದೇ? ಕೆಲವು ಅನುಭವಿಗಳ ಪ್ರಕಾರ, ಈ ಬೇಲ್ಸ್‍ನಲ್ಲಿರುವ ಬ್ಯಾಟರಿಯ ತೂಕದ ಕಾರಣಕ್ಕೆ ಬೇಲ್ಸ್ ಧಡೂತಿಯಾಗಿ ಮಿಸುಗಾಡಲು ಆಗುತ್ತಿಲ್ಲವಂತೆ! ಚುನಾವಣಾ ಆಯೋಗವೇ ಐಸಿಸಿಗೆ ಮಾದರಿಯಾಗಿದೆಯಾ? ಇನ್ನು ಮುಂದೆ ಈ ಝಿಂಗ್ ಬೇಲ್ಸ್ ಮೇಲೆಯೇ ಬೆಟ್ಟಿಂಗ್ ನಡೆಯಲೂ ಬಹುದು!

ಕ್ಲೌಡ್ ಆ್ಯಂಡ್ ರಾಡಾರ್ ತಜ್ಞರನ್ನು ಈ ಬಗ್ಗೆ ನಮ್ಮ ಅಕ್ಷಯಕುಮಾರ್ ಪ್ರಶ್ನಿಸಿದರೆ ಚೆಂದ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...